
ಬಾಗ್ದಾದ್ (ಏ.26): ಕೋವಿಡ್ ಸೋಂಕಿತರಿಗೆ ಪೂರೈಕೆಯಾಗುತ್ತಿದ್ದ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇರಾಕ್ನ ಬಾಗ್ದಾದ್ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.
ಈ ಬೆಂಕಿ ದುರಂತದಲ್ಲಿ 82 ಮಂದಿ ಮೃತಪಟ್ಟು, 110 ಮಂದಿ ಗಾಯಗೊಂಡಿದ್ದಾರೆ.
ಅಮೆರಿಕದಿಂದ 10 ಸಾವಿರ ಆಕ್ಸಿಜನ್ ಕಾನ್ಸನ್ಟ್ರೇಟರ್ ಹೊತ್ತು ತರಲಿದೆ ಏರ್ ಇಂಡಿಯಾ ..
ಇಲ್ಲಿನ ಇಬ್ನಾ ಅಲ್-ಖತೀಬ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದ ಆಮ್ಲಜನಕ ಸಿಲಿಂಡರ್ ಸ್ಫೋಟವಾಗಿ ಈ ಅವಘಡ ಸಂಭವಿಸಿದ್ದು, ಈ ದುರಂತಕ್ಕೆ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ.
14 ದಿನ ಕರ್ನಾಟಕ ಲಾಕ್ಡೌನ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ ...
ಮೃತರ ಪೈಕಿ ಕನಿಷ್ಠ 28 ಮಂದಿ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತರು ಎಂದು ಮಾನವ ಹಕ್ಕುಗಳ ಆಯೋಗದ ವಕ್ತಾರರು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ