
ಮಾಸ್ಕೋ(ಮೇ.10): ಅಮೆರಿಕ, ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಅಸ್ಥಿರತೆ ಸೃಷ್ಟಿಸಲು ಯತ್ನಿಸುತ್ತಿದೆ. ಭಾರತ ಸೇರಿದಂತೆ ಅನ್ಯ ರಾಷ್ಟ್ರಗಳ ಆಂತರಿಕ ವಿಷಯದಲ್ಲಿ ಮೂಗು ತೂರಿಸಿ ಶಾಂತಿ ಕದಡುತ್ತಿದೆ ಎಂದು ರಷ್ಯಾ ಆರೋಪಿಸಿದೆ. ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಹತ್ಯೆ ಸಂಚಿನ ವಿಚಾರದಲ್ಲಿಯೂ ಅಮೆರಿಕ ಸರಿಯಾದ ಸಾಕ್ಷಿ ನೀಡದೆ, ಗಂಭೀರ ಆರೋಪ ಮಾಡುತ್ತಿದೆ ಎಂದು ರಷ್ಯಾ ದೂಷಿಸಿದೆ.
ಪನ್ನೂನ್ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ ವಾಷಿಂಗ್ಟನ್ ಪೋಸ್ಟ್ ಕುರಿತು ಮಾತನಾಡಿದ ರಷ್ಯಾ ವಿದೇಶಾಂಗ ವಕ್ತಾರೆ ಮರಿಯಾ ಝಕರೋವಾ,‘ಅಮೆರಿಕ ಇದುವರೆಗೂ ಸರಿಯಾದ ಸಾಕ್ಷಿ ನೀಡಿಲ್ಲ. ಹೀಗೆ ಸಾಕ್ಷಿ ರಹಿತ ಆರೋಪ ಮಾಡುವುದು ಗಂಭೀರ ವಿಷಯ. ಸಾಕ್ಷಿ ಇಲ್ಲದೇ ಆರೋಪಿಸುವುದು ಒಪ್ಪಲಾಗದು ಎಂದು ಹೇಳಿದರು.
ಭಾರತ ಅಭಿವೃದ್ಧಿಗೆ ಪ್ರಧಾನಿ ಮೋದಿಯೇ ಕಾರಣ: ಅಮೆರಿಕ ಉದ್ಯಮಿ
ಅಮೆರಿಕವು ಭಾರತದ ಇತಿಹಾಸ, ಮನೋಭಾವ ಹಾಗೂ ಸಾಮಾಜಿಕ ಸ್ಥಿತಿಯನ್ನು ಅರಿತುಕೊಳ್ಳುವಲ್ಲಿ ಎಡವಿದೆ. ಹೀಗಾಗಿ ಭಾರತದ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಬೇಕಾಬಿಟ್ಟಿ ಆರೋಪ ಮಾಡುತ್ತಿದೆ. ಮತ್ತೊಂದೆಡೆ ಭಾರತದಲ್ಲಿ ಅಸ್ಥಿರತೆ ಸೃಷ್ಟಿಸುವ ಸಲುವಾಗಿ ಲೋಕಸಭೆ ಚುನಾವಣೆಯಲ್ಲಿ ಮೂಗು ತೂರಿಸುತ್ತಿದೆ. ಜೊತೆಗೆ ಅನ್ಯ ದೇಶಗಳ ವಿಷಯದಲ್ಲಿಯೂ ಅಗತ್ಯವಿಲ್ಲದೇ ತನ್ನ ಅಧಿಕ ಪ್ರಸಂಗವನ್ನು ತೋರುತ್ತಿದೆ ಎಂದು ಕುಟುಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ