
ಹೊನೊಲುಲು(ಮೇ.04): ಹವಾಯಿ ದ್ವೀಪದ ಹೊನೊಲುಲು ನಗರಕ್ಕೂ ಕೊರೋನಾ ವೈರಸ್ ವ್ಯಾಪಿಸಿದೆ. ಶಾಂತವಾಗಿದ್ದ ದ್ವೀಪದಲ್ಲಿ ಇದೀಗ ಅಲೆಗಳ ಶಬ್ದಕ್ಕಿಂತ ಕೊರೋನಾ ವೈರಸ್ ಆರ್ಭಟವೇ ಕೇಳಿಸುತ್ತಿದೆ. 54 ದಿನಗಳ ಹಿಂದೆ 37 ವರ್ಷದ ಕೊಬಿ ತೊರ್ಡ ತೀವ್ರ ಅನಾರೋಗ್ಯದ ಸಮಸ್ಯೆಯಿಂದ ಆಸ್ಪತ್ರೆ ದಾಖಲಿಸಿದ್ದರು. ಈ ವೇಳೆ ಕೊಬಿ ತೋರ್ಡಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಇಷ್ಟೇ ಅಲ್ಲ ಆಸ್ಪತ್ರೆ ದಾಖಲಿಸಿದ ಬೆನ್ನಲ್ಲೇ ಕೊಬಿ ತೊರ್ಡ ಕೋಮಾಗೆ ಜಾರಿದ್ದರು.
ವುಹಾನ್ನಿಂದ ಜನ್ಮ ತಾಳಿದ ಕೊರೋನಾ; ಚೀನಾ ಕುತಂತ್ರಕ್ಕೆ ಸಾಕ್ಷಿ ಇದೆ ಎಂದ ಟ್ರಂಪ್!...
ಮಾರ್ಚ್ 10 ರಂದು ಕಚೇರಿಯಿಂದ ಮನೆಗೆ ಬಂದ ಕೊಬಿ ತೊರ್ಡಾ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದರು. ತಕ್ಷಣವೇ ಆಸ್ಪತ್ರೆ ದಾಖಲಿಸಿದಾಗ ಕೊರೋನಾ ಸೋಂಕು ತಗಲಿರುವುದನ್ನು ವೈದ್ಯರು ಖಚಿತಪಡಿಸಿದ್ದರು. ಮಾರ್ಚ್ 15ರ ವೇಳೆ ಕೊಬಿ ತೂರ್ಡ ಪರಿಸ್ಥಿತಿ ಗಂಭೀರವಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ನಡುತ್ತಿದ್ದ ವೈದ್ಯರಿಗೂ ಚಿಂತೆ ಹೆಚ್ಚಿಸಿತ್ತು. 10 ದಿನಗಳ ಬಳಿಕ ಕೊಬಿ ತೊರ್ಡಾಗೆ ಉಸಿರಾಟವೇ ಕಷ್ಟವಾಗಿತ್ತು. ಆತನ ತಾಯಿ ಈ ಕುರಿತು ಮಾದ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದರು. ಮಗ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿದ್ದಾನೆ. ಈ ಹೋರಾಟದಲ್ಲಿ ಯಶಸ್ವಿಯಾಗುವ ನಂಬಿಕೆ ಇದೆ ಎಂದು ಕಣ್ಣೀರಿಡುತ್ತಲೇ ಹೇಳಿದ್ದರು.
ಕೊರೋನಾ ತಡೆಯಲು ಫಿನಾಯಿಲ್ ಕುಡಿದ್ರು, ನರಳಾಡ್ತಾ ಪ್ರಾಣ ಬಿಟ್ಟ 700 ಮಂದಿ!.
ಪ್ರತಿ ದಿನ ಜಿಮ್, ಪೌಷ್ಠಿಕ ಆಹಾರ ಸೇವನೆ ಮಾಡುತ್ತಿದ್ದ ಕೂಬಿ ತೊರ್ಡಾ ಚಿಂತಾಜನಕ ಸ್ಥಿತಿಗೆ ತಲುಪುತ್ತಾನೆ ಅನ್ನೋದು ನಾವ್ಯಾರೂ ಊಹಿಸಿರಲಿಲ್ಲ ಎಂದು ಆತನ ತಾಯಿ ಹೇಳಿದ್ದರು. ಸತತ 50 ದಿನದ ಚಿಕಿತ್ಸೆ ಬಳಿಕ ಕೂಬಿ ತೊರ್ಡಾ ಅಚ್ಚರಿ ರೀತಿಯಲ್ಲಿ ಚೇತರಿಸಿಕೊಂಡಿದ್ದಾನೆ. ಕೋಮಾಗೆ ಜಾರಿದ್ದ ಕೂಬಿ ಇದೀಗ ಕೋಮಾದಿಂದ ಹೊರಬಂದಿದ್ದಾನೆ. ಇದು ವೈದ್ಯರಿಗೆ ಅಚ್ಚರಿಯಾಗಿದೆ.
ವೆಂಟಿಲೇಟರ್ ಇರುವ ಕಾರಣ ಹಾಗೂ ಸತತ 500 ದಿನದಿಂದ ಆಹಾರ ಸೇವನೆ ಇಲ್ಲದ ಕಾರಣ ಕೂಬಿ ಸಂಪೂರ್ಣ ಕುಗ್ಗಿಹೋಗಿದ್ದಾನೆ. ಮಾತನಾಡಲು ಸಾಧ್ಯವಾಗುತ್ತಿಲ್ಲ. ಆದರೆ ಕೋಮಾದಿಂದ ಹೊರಬಂದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ ಎಂದು ಆತನ ತಾಯಿ ಹೇಳಿದ್ದಾರೆ. ಇಷ್ಟೇ ಅಲ್ಲ ಕೊರೋನಾ ವೈರಸ್ ಯಾರಿಗೂ ಬರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರದ ನಿಯಮ ಪಾಲಿಸಿ ಮನೆಯೊಳಗೆ ಇರಿ ಎಂದು ಕೂಬಿ ತಾಯಿ ಸಲಹೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ