ಬಾಂಗ್ಲಾ 66 ಹಿಂದೂ​ಗಳ ಮನೆ ಧ್ವಂಸ, 20 ಮನೆಗೆ ಬೆಂಕಿ!

Published : Oct 19, 2021, 08:03 AM IST
ಬಾಂಗ್ಲಾ 66 ಹಿಂದೂ​ಗಳ ಮನೆ ಧ್ವಂಸ, 20 ಮನೆಗೆ ಬೆಂಕಿ!

ಸಾರಾಂಶ

* ನೆರೆ ದೇಶ​ದಲ್ಲಿ ಇನ್ನೂ ನಿಲ್ಲದ ಹಿಂದೂಗಳ ಮೇಲಿನ ದಾಳಿ * ಧರ್ಮವೊಂದಕ್ಕೆ ಹಿಂದು ಯುವಕನಿಂದ ಅಗೌರವ ವದಂತಿ * ಈ ವದಂತಿಯಿಂದ ರೊಚ್ಚಿಗೆದ್ದ ಉದ್ರಿಕ್ತರಿಂದ ಈ ದುಷ್ಕೃತ್ಯ * ಈ ಹಿಂಸಾಚಾರ ಕೃತ್ಯವೆಸಗಿದ 52 ಶಂಕಿತರು ಪೊಲೀಸರ ಬಲೆಗೆ

ಢಾಕಾ(ಅ.19): ದಸರಾ ಪ್ರಯುಕ್ತ ದುರ್ಗಾ ಪೂಜೆ(Durga Pooja) ಪೆಂಡಾಲ್‌ಗಳ ಮೇಲಿನ ದಾಳಿ ವಿರೋಧಿಸಿ ಬಾಂಗ್ಲಾದೇಶದಲ್ಲಿ(Bangladesh) ಹಿಂದುಗಳು(Hndus) ಪ್ರತಿಭಟನೆ ನಡೆಸುತ್ತಿರುವ ನಡುವೆಯೇ, ಉದ್ರಿಕ್ತರ ಗುಂಪೊಂದು ಹಿಂದುಗಳಿಗೆ ಸೇರಿದ 66 ಮನೆಗಳನ್ನು ಹೊಡೆದುರುಳಿಸಿದ್ದಾರೆ. ಅಲ್ಲದೆ 20ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಿ ಹಿಂಸಾಚಾರ(Violence) ಮೆರೆದಿದ್ದಾರೆ.

ಘಟನೆ ಬಗ್ಗೆ ತ್ವರಿತ ಕಾರ್ಯಾಚರಣೆ ಕೈಗೊಂಡ ಪೊಲೀಸರು, 52 ಶಂಕಿತರನ್ನು ಬಂಧಿಸಿದ್ದಾರೆ. ಅಲ್ಲದೆ ಉಳಿದವರಿಗಾಗಿ ಬಲೆ ಬೀಸಲಾಗಿದೆ. ಈ ಘಟನೆಯಲ್ಲಿ ಸಾವು-ನೋವಿನ ವರದಿಯಾಗಿಲ್ಲ. ಆದರೆ ಮನೆಯಲ್ಲಿ ಇಡಲಾಗಿದ್ದ ಭಾರೀ ಪ್ರಮಾಣದ ವಸ್ತುಗಳು ಬೆಂಕಿಗೆ ಸುಟ್ಟು ಕರಕಲಾಗಿವೆ ಎಂದು ತಿಳಿದುಬಂದಿದೆ.

ರಂಗಪುರ ಜಿಲ್ಲೆಯ ಗ್ರಾಮವೊಂದರ ಮೀನುಗಾರ ಓಣಿಯಲ್ಲಿರುವ ಹಿಂದು ಯುವಕ, ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಧರ್ಮದ ಬಗ್ಗೆ ಅಗೌರವ ತೋರಿದ್ದಾನೆ ಎಂಬ ಗಾಳಿಸುದ್ದಿ ಎದ್ದಿದೆ. ಈ ಸುದ್ದಿ ವ್ಯಾಪಕವಾಗುತ್ತಿದ್ದಂತೆ ಎಚ್ಚರಗೊಂಡ ಪೊಲೀಸರು, ಆ ಕುಟುಂಬಕ್ಕೆ ಭದ್ರತೆ ಒದಗಿಸಿದ್ದರು. ಆದರೆ ದುಷ್ಕರ್ಮಿಗಳು, ಆ ಮನೆಯೊಂದನ್ನು ಬಿಟ್ಟು ಉಳಿದ ಮನೆಗಳ ಮೇಲೆ ದಾಳಿ ನಡೆಸಿದರು. ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಈಗ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿಯಿಲ್ಲ. ಪೂರ್ತಿ ಶಾಂತವಾಗಿದೆ ಎಂದು ಪೊಲೀಸರು ತಿಳಿಸಿದರು.

ದಸರಾ ಪ್ರಯುಕ್ತ ಪೆಂಡಾಲ್‌ ಒಂದರಲ್ಲಿ ದುರ್ಗಾ ಪೂಜೆ ವೇಳೆ ದುರ್ಗಾ ಮಾತೆಯ ಕಾಲಿನ ಬಳಿ ಕುರಾನ್‌ ಪ್ರತಿಯನ್ನು ಇಟ್ಟು ಅವಮಾನ ಮಾಡಲಾಗಿದೆ ಎಂಬ ವದಂತಿಯೊಂದು ಹಬ್ಬಿತ್ತು. ಇದರಿಂದ ಬಾಂಗ್ಲಾದ ಹಲವು ಭಾಗಗಳಲ್ಲಿ ದುರ್ಗಾಪೂಜೆಯ ಪೆಂಡಾಲ್‌ಗಳು ಮತ್ತು ಹಿಂದುಗಳ ಮೇಲೆ ಭೀಕರ ದಾಳಿಗಳು ನಡೆದಿದ್ದವು. ಇದರಲ್ಲಿ ಇಸ್ಕಾನ್‌ ಅರ್ಚಕ ಸೇರಿ ಇಬ್ಬರು ಹಿಂದುಗಳು ಬಲಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮದ್ಯಪ್ರಿಯರಿಗೆ ಶಾಕ್.. ಮಧ್ಯಾಹ್ನ 2 ರಿಂದ 5 ರವರೆಗೆ ಮದ್ಯ ಮಾರಾಟ ಬಂದ್: ಏನಿದು ಥಾಯ್‌ ವಿಚಿತ್ರ ನಿಯಮ!
ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ