
ವಿಶ್ವಸಂಸ್ಥೆ(ಸೆ.30): ಕೋವಿಡ್ ಸಾಂಕ್ರಾಮಿಕ(Covid 19) ನಿಯಂತ್ರಣಕ್ಕಾಗಿ ಪರಿಣಾಮಕಾರಿ ಹೋರಾಟ ನಡೆಸುವುದರ ಜೊತೆಗೆ, ಸೋಂಕು ಮಣಿಸಲು ಇತರೆ ದೇಶಗಳಿಗೆ ನೆರವಾದ ಭಾರತಕ್ಕೆ ವಿಶ್ವಸಂಸ್ಥೆಯಲ್ಲಿ(United Nations) ಹಲವು ದೇಶಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಸೆ.21ರಿಂದ ಆರಂಭವಾದ ವಿಶ್ವಸಂಸ್ಥೆಯ 76ನೇ ಸಾಮಾನ್ಯ ಅಧಿವೇಶನದಲ್ಲಿ ಹಲವು ವಿಶ್ವ ನಾಯಕರು ಕೋವಿಡ್(Covid 19) ವಿರುದ್ಧದ ಹೋರಾಟಕ್ಕಾಗಿ ತ್ವರಿತವಾಗಿ ಲಸಿಕೆ, ವೈದ್ಯಕೀಯ ಉಪಕರಣಗಳನ್ನು ಪೂರೈಸಿದ ಭಾರತ ಹಾಗೂ ಇತರೆ ದೇಶಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ನೇಪಾಳ, ಭೂತಾನ್, ಆಸ್ಪ್ರೇಲಿಯಾ(Australia), ಸುರಿನಾಮ್, ನಯುರು, ನೈಜೀರಿಯಾ, ಸೇಂಟ್ ಲೂಸಿಯಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಾಡಿನೆಸ್, ಘಾನಾ, ಫಿಜಿ, ಡೊಮಿನಿಕಾ ಸೇರಿದಂತೆ ಹಲವು ರಾಷ್ಟ್ರಗಳು ಅಧಿವೇಶನದಲ್ಲಿ ಭಾರತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿವೆ.
‘ಕೋವಿಡ್ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ನಮ್ಮೊಂದಿಗೆ ಜೊತೆಯಾದ ಭಾರತ ಹಾಗೂ ವಿವಿಧ ರಾಷ್ಟ್ರಗಳಿಗೆ ಅಭಿನಂದನೆಗಳು. ಲಸಿಕೆ, ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ನೀಡುವ ಮೂಲಕ ನಮ್ಮೊಂದಿಗೆ ಒಗ್ಗಟ್ಟು ಪ್ರದರ್ಶಿಸಿದ್ದರಿಂದ ಕೋವಿಡ್ ವಿರುದ್ಧ ಹೋರಾಡಲು ಸಾಧ್ಯವಾಯಿತು’ಎಂದು ಶ್ಲಾಘಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕದ ನಡುವೆ ಭಾರತ ಸುಮಾರು 100 ದೇಶಗಳಿಗೆ 6.6 ಕೋಟಿಗೂ ಅಧಿಕ ಡೋಸ್ ಲಸಿಕೆಗಳನ್ನು ಪೂರೈಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ