ಲಾಹೋರ್ ಗುರುದ್ವಾರವ ಮಸೀದಿಯಾಗಿಸಲು ಮುಂದಾದ ಪಾಕ್‌ಗೆ ಭಾರತದ ಬಿಸಿ

Published : Jul 28, 2020, 04:07 PM ISTUpdated : Jul 28, 2020, 04:08 PM IST
ಲಾಹೋರ್ ಗುರುದ್ವಾರವ ಮಸೀದಿಯಾಗಿಸಲು ಮುಂದಾದ ಪಾಕ್‌ಗೆ ಭಾರತದ ಬಿಸಿ

ಸಾರಾಂಶ

ಗುರುದ್ವಾರವನ್ನು ಮಸೀದಿಯನ್ನಾಗಿಸಲು ಮುಂದಾದ ಪಾಕಿಸ್ತಾನ/ಪಾಕಿಸ್ತಾನ ಹೈ ಕಮಿಷನ್ ವಿರುದ್ಧ  ಪ್ರತಿಭಟನೆ / ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗೆ ಹೋರಾಟ

ಲಾಹೋರ್(ಜು. 27)  ಗುರುದ್ವಾರವನ್ನು ಮಸೀದಿಯನ್ನಾಗಿ  ಬದಲಾಯಿಸಲು ಪಾಕಿಸ್ತಾನ ಮುಂದಾಗಿದ್ದು ಪ್ರತಿಭಟನೆ ಎದುರಿಸಿದೆ.  ಲಾಹೋರ್ ನ ಗುರುದ್ವಾರವನ್ನು ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದ್ದಕ್ಕೆ  ಪಾಕಿಸ್ತಾನ ಹೈ ಕಮಿಷನ್ ಭಾರತದ ವಿರೋಧ ಎದುರಿಸಿದೆ. 

ಪಾಕಿಸ್ತಾನದ ಲಾಹೋರ್‌ನ ನೌಲಾಖಾ ಬಜಾರ್‌ನಲ್ಲಿರುವ ಪ್ರಸಿದ್ಧ ಗುರುದ್ವಾರವನ್ನು ಮಸೀದಿಯಾಗಿ ಪರಿವರ್ತಿಸಲು ಪ್ರಯತ್ನಿಸಲಾಗುತ್ತಿದೆ ಎಂಬ ವರದಿಗಳು ಹೊರ ಬೀಳುತ್ತಿದ್ದಂತೆ, ಇದನ್ನು ವಿರೋಧಿಸಿರುವ ಭಾರತ ಸರ್ಕಾರ ಪಾಕಿಸ್ತಾನದ ಹೈಕಮಿಷನ್ ಎದುರು ಕ್ರಮ ಖಂಡಿಸಿದೆ.

ಕಾರ್ಗಿಲ್ ಯೋಧರ ಮತ್ತೆ ಮತ್ತೆ ನೆನೆಯೋಣ

ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ್, ಈ ಘಟನೆಯ ಬಗ್ಗೆ ಭಾರತ ಸರ್ಕಾರ ತನ್ನ ಕಳವಳವನ್ನು ವ್ಯಕ್ತಪಡಿಸಿದೆ ಮತ್ತು ಈ ಬಗ್ಗೆ ತನಿಖೆ ನಡೆಸಿ ತಕ್ಷಣ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪಾಕಿಸ್ತಾನ ಸರ್ಕಾರವನ್ನು ಒತ್ತಾಯಿಸಿದೆ ಎಂದು ತಿಳಿಸಿದ್ದಾರೆ.

ಲಾಹೋರ್‌ನಲ್ಲಿರುವ 'ಶಾಹಿದಿ ಅಸ್ತಾನ್ ಭಾಯಿ ತರು ಜಿ'  ಐತಿಹಾಸಿಕ ಗುರುದ್ವಾರವಾಗಿದ್ದು, ಭಾಯಿ ತರು ಜಿ 1745 ರಲ್ಲಿ ಇದೇ ಜಾಗದಲ್ಲಿ ಹುತಾತ್ಮರಾಗಿದ್ದರು. ಪರಿಣಾಮ ಈ ಗುರುದ್ವಾರವು ಪೂಜ್ಯ ಸ್ಥಳವಾಗಿದ್ದು, ಸಿಖ್ ಸಮುದಾಯದಿಂದ ಪವಿತ್ರವೆಂದು ಪರಿಗಣಿಸಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆಕಾಶಕ್ಕೇ ಕನ್ನಡಿ ಹಾಕಿ ರಾತ್ರಿಗೆ ಗುಡ್‌ ಬೈ ಸಾಹಸ!
PUBG ಗೇಮ್​ನಿಂದ 6ನೇ ಮಗುವಿನತ್ತ ಪಯಣ: ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಕೆ ಮತ್ತೊಮ್ಮೆ ಗರ್ಭಿಣಿ!