ಢಾಕಾ : ಬಾಂಗ್ಲಾದೇಶದಲ್ಲಿ ಕಟ್ಟರ್ ಮುಸ್ಲಿಂ ಯುವನಾಯಕ ಶರೀಫ್ ಉಸ್ಮಾನ್ ಹದಿ ಹತ್ಯೆಯ ಬೆನ್ನಲ್ಲೇ ಸಂಭವಿಸಿದ್ದ ಹಿಂದು ವ್ಯಕ್ತಿ ದೀಪು ಚಂದ್ರ ದಾಸ್ ಅಮಾನುಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿದೆ.
ಗುರುವಾರ ಮೈಮೆನ್ಸಿಂಗ್ ನಗರದಲ್ಲಿ ಇಸ್ಲಾಂ ಧರ್ಮನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ಗುಂಪೊಂದು ಆತನನ್ನು ಹೊಡೆದು ಕೊಂದಿತ್ತು ಹಾಗೂ ಅವರ ದೇಹಕ್ಕೆ ಬೆಂಕಿ ಹಾಕಿತ್ತು. ಇದರ ಬೆನ್ನಲ್ಲೇ ಕ್ಷಿಪ್ರ ಕಾರ್ಯ ಬೆಟಾಲಿಯನ್, ಈ ಪ್ರಕರಣದಲ್ಲಿ ಏಳು ವ್ಯಕ್ತಿಗಳನ್ನು ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ ಎಂದು ಯೂನಸ್ ಸರ್ಕಾರ ಹೇಳಿದೆ.
ಬಾಂಗ್ಲಾದೇಶದ ಉದ್ರಿಕ್ತ ಗುಂಪುಗಳು ಶುಕ್ರವಾರ ರಾತ್ರಿ ಢಾಕಾದಲ್ಲಿರುವ ದಿ ಡೈಲಿ ಸ್ಟಾರ್ ಮತ್ತು ಪ್ರೋಥೋಮ್ ಅಲೋ ಪತ್ರಿಕಾ ಕಚೇರಿಗಳ ಮೇಲೆ ದಾಳಿ ನಡೆಸಿದ ವೇಳೆ, ಕನಿಷ್ಠ 150 ಕಂಪ್ಯೂಟರ್ಗಳು ಮತ್ತು ಇತರ ಎಲೆಕ್ಟ್ರಾನಿಕ್ ಉಪಕರಣಗ ಕಳವು ಮಾಡಿವೆ. ಫೈಲ್ಗಳನ್ನೂ ದೋಚಿವೆ ಎಂದು ಗೊತ್ತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ