ದುಬೈ ರಾಯಭಾರಿ ಕಚೇರಿಯಲ್ಲಿ ಬಸವಣ್ಣ ಪ್ರತಿಮೆ

Kannadaprabha News   | Asianet News
Published : Jul 06, 2020, 09:12 AM ISTUpdated : Jul 06, 2020, 11:16 AM IST
ದುಬೈ ರಾಯಭಾರಿ ಕಚೇರಿಯಲ್ಲಿ ಬಸವಣ್ಣ ಪ್ರತಿಮೆ

ಸಾರಾಂಶ

ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಶನಿವಾರ ದುಬೈ ಬಸವ ಸಮಿತಿಯು ಬಸವಣ್ಣನವರ ಪಂಚಲೋಹ ಪ್ರತಿಮೆ ಪ್ರತಿಷ್ಠಾಪಿಸಿದೆ.

ಬೆಂಗಳೂರು (ಜು. 06): ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಶನಿವಾರ ದುಬೈ ಬಸವ ಸಮಿತಿಯು ಬಸವಣ್ಣನವರ ಪಂಚಲೋಹ ಪ್ರತಿಮೆ ಪ್ರತಿಷ್ಠಾಪಿಸಿದೆ.

"

ಇಲ್ಲಿಯವರೆಗೂ ಭಾರತದ ಹೊರಗೆ ವಿದೇಶಗಳ ಪೈಕಿ ಲಂಡನ್‌ನ ಥೇಮ್ಸ್‌ ನದಿ ದಂಡೆ ಮೇಲೆ ವಿಶ್ವ ಗುರು ಬಸವಣ್ಣ ಪ್ರತಿಮೆ ಸ್ಥಾಪನೆಯಾಗಿತ್ತು. ಇದೀಗ ಅರಬ್‌ ಸಂಯುಕ್ತ ಸಂಸ್ಥಾನದ ದುಬೈನಲ್ಲಿ ಬಸವಣ್ಣನರ ಪ್ರತಿಮೆ ಸ್ಥಾಪನೆಯಾಗುವ ಮೂಲಕ ಮಧ್ಯಪ್ರಾಚ್ಯ ರಾಷ್ಟ್ರಗಳಿಗೂ ಬಸವಣ್ಣನವರ ಚಿಂತನೆಗಳು ಹರಡಲು ಮುಂದಾಗಿದೆ. ಬೆಂಗಳೂರಿನಲ್ಲಿ ಪ್ರತಿಮೆಯನ್ನು ಕೆತ್ತನೆ ಮಾಡಿಸಿ ದುಬೈನಲ್ಲಿ ಪ್ರತಿಷ್ಠಾಪಿಸಲಾಗಿದೆ.

ಕನ್ನಡದಲ್ಲಿ ಬಸವಣ್ಣನ ವಚನದ ಮೂಲಕ ಐಕ್ಯತೆ ಸಂದೇಶ ಸಾರಿದ ಕೇರಳ ಸಿಎಂ!

ಮೂರ್ತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿ ವಿಪುಲ್‌ ಶಾ, ‘ಮೂರ್ತಿಯನ್ನು ಬಸವ ಜಯಂತಿಯಂದು ಪ್ರತಿಷ್ಠಾಪಿಸುವ ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ, ಕೊರೊನಾ ಲಾಕ್‌ಡೌನ್‌ ಪರಿಣಾಮ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಶನಿವಾರ ಸರಳವಾಗಿ ಬಸವಣ್ಣನ ಪ್ರತಿಷ್ಠಾಪನೆ ಮಾಡುವ ಕಾರ್ಯಕ್ರಮ ನಡೆಸಲಾಗಿದೆ’ ಎಂದರು.

‘ಮುಂದಿನ ದಿನಗಳಲ್ಲಿ ಕನ್ನಡಿಗರೆಲ್ಲರನ್ನೂ ಸೇರಿಸಿ ಅಧಿಕೃತವಾಗಿ ದೊಡ್ಡ ಪ್ರಮಾಣದ ಕಾರ್ಯಕ್ರಮವನ್ನು ನೆರವೇರಿಸಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯನ್ನು ಅನಾವರಣ ಮಾಡಲಾಗುತ್ತದೆ. ಕರ್ನಾಟಕದ ಮಹಾನ್‌ ಸಮಾಜ ಸುಧಾರಕರಾದ ಬಸವಣ್ಣನವರ ವಚನಗಳಿಂದ ನಾವೆಲ್ಲರೂ ಪ್ರೇರೇಪಿತರಾಗಿರುವುದರಿಂದ ಪ್ರತಿಮೆ ಸ್ಥಾಪಿಸಲಾಗಿದೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಯುಎಇ ಬಸವ ಸಮಿತಿ ದುಬೈ ಅಧ್ಯಕ್ಷರಾದ ರುದ್ರಯ್ಯ ನವಲಿ ಹಿರೇಮಠ, ಸತೀಶ, ಮಲ್ಲಿಕಾರ್ಜುನ ಉಪಸ್ಥಿತರಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸ್ಲಿಮ್ ಆಗೋಕೆ ಹೋಗಿ ಆರೋಗ್ಯವೇ ಹೋಯ್ತು: 11691 ರೂ ಪಾವತಿಸಿ ತೂಕ ಇಳಿಕೆ ಇಂಜೆಕ್ಷನ್ ಪಡೆದಾಕೆಗೆ ಆಘಾತ
ಹೆದ್ದಾರಿಯಲ್ಲಿ ಇಳಿದು ಕಾರಿಗೆ ಡಿಕ್ಕಿ ಹೊಡೆದ ವಿಮಾನ: ವೀಡಿಯೋ