
ಸುರಿನ್: ಗಡಿಯಲ್ಲಿರುವ ಹಿಂದೂ ಶಿವ ದೇವಸ್ಥಾನದ ಮೇಲಿನ ಅಧಿಕಾರದ ವಿಚಾರವಾಗಿ ಆರಂಭವಾಗಿದ್ದ ಥಾಯ್ಲೆಂಡ್ ಮತ್ತು ಕಾಂಬೋಡಿಯಾ ಸಮರಕ್ಕೆ 2ನೇ ದಿನವಾದ ಶುಕ್ರವಾರ ಬ್ರೇಕ್ ಬಿದ್ದಿದ್ದು, ಕದನ ವಿರಾಮಕ್ಕೆ ಉಭಯ ದೇಶಗಳು ಸಮ್ಮತಿಸಿವೆ.
ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ಕಾಂಬೋಡಿಯಾ ಪ್ರಧಾನಿ ಹುನ್ ಮಾನೆಟ್ ಹಾಗೂ ಥಾಯ್ಲೆಂಡ್ ಪ್ರಧಾನಿ ವೆಚಾಯಾಯೈ ಜತೆ ಫೋನ್ ಮಾತುಕತೆ ನಡೆಸಿದರು. ಬಳಿಕ ಉಭಯ ದೇಶಗಳು ಕದನಕ್ಕೆ ಸಮ್ಮತಿಸಿದರು.
ಈ ವಿಷಯವನ್ನು ಖುದ್ದು ಇಬ್ರಾಹಿಂ ಬಹಿರಂಗಪಡಿಸಿದ್ದಾರೆ. ಆದರೆ ನಮಗೆ ಸಮರ ನಿಲ್ಲಿಸಲು ಸಮ್ಮತಿ ಇದೆ. ಕಾಂಬೋಡಿಯಾ ಕೂಡ ಕದನವಿರಾಮಕ್ಕೆ ಬದ್ಧತೆ ವ್ಯಕ್ತಪಡಿಸಬೇಕು ಎಂದು ಥಾಯ್ಲೆಂಡ್ ಸ್ಪಷ್ಟಪಡಿಸಿದೆ.
ಸೇನಾ ಕಾನೂನು: ಇದಕ್ಕೂ ಮುನ್ನ ಥಾಯ್ಲೆಂಡ್ನ ಈಶಾನ್ಯ ಗಡಿಯ 8 ಜಿಲ್ಲೆಗಳಲ್ಲಿ ಸಮರ ಕಾನೂನು ಘೋಷಿಸಲಾಗಿತ್ತು. ಇದರರ್ಥ, ಥಾಯ್ ಸರ್ಕಾರವು ಸೇನೆಗೆ ಕಾಂಬೋಡಿಯಾ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಅಧಿಕಾರ ನೀಡಿತ್ತು.16 ಸಾವು: ಇದರ ನಡುವೆ, ಗಡಿಭಾಗದ ಎರಡೂ ದೇಶಗಳ 1.38 ಲಕ್ಷ ಜನ ಗುಳೆ ಹೋಗಿದ್ದಾರೆ. ಸಮರದಲ್ಲಿ ಎರಡೂ ದೇಶಗಳ ಒಟ್ಟಾರೆ ಮೃತರ ಸಂಖ್ಯೆ 16ಕ್ಕೇರಿದೆ. ಇದರಲ್ಲಿ ಕಾಂಬೋಡಿಯಾದ ನಾಲ್ವರು ಥಾಯ್ಲೆಂಡ್ನ 14 ಜನರು ಇದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ