ಜೈಲಿನಲ್ಲಿ ನಾನಿದ್ದ ಕೋಣೆ, ಸ್ನಾನದ ಕೊಠಡಿಯಲ್ಲೂ ಕ್ಯಾಮೆರಾ ಇಟ್ಟಿದ್ರು: ಮಾಜಿ ಪಿಎಂ ಪುತ್ರಿ ಆರೋಪ!

Published : Nov 13, 2020, 03:45 PM IST
ಜೈಲಿನಲ್ಲಿ ನಾನಿದ್ದ ಕೋಣೆ, ಸ್ನಾನದ ಕೊಠಡಿಯಲ್ಲೂ ಕ್ಯಾಮೆರಾ ಇಟ್ಟಿದ್ರು: ಮಾಜಿ ಪಿಎಂ ಪುತ್ರಿ ಆರೋಪ!

ಸಾರಾಂಶ

ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್‌ನ ಉಪಾಧ್ಯಕ್ಷೆ ಮರಿಯಮ್ ನವಾಜ್ ಷರೀಫ್ ಗಂಭೀರ ಆರೋಪ| ತಾನು ಜೈಲಿನಲ್ಲಿದ್ದಾಗ ಅಧಿಕಾರಿಗಳು ತನ್ನ ಸೆಲ್ ಹಾಗೂ ಬಾತ್‌ರೂಂಗೆ ಕ್ಯಾಮೆರಾ ಅಳವಡಿಸಿದ್ದರು| ಚೌಧರಿ ಶುಗರ್ ಮಿಲ್ಸ್ ಪ್ರಕರಣದಲ್ಲಿ ಅರೆಸ್ಟ್ ಆಗಿ ಜೈಲು ಸೇರಿದ್ದ ಮರಿಯಮ್

ಇಸ್ಲಮಾಬಾದ್(ನ.13): ಪಾಕಿಸ್ತಾನ ಮಾಜಿ ಪ್ರಧಾನ ಮಂತ್ರಿ ನಾವಜ್ ಷರೀಫ್ ಮಗಳು ಹಾಗೂ ಅವರ ಪಕ್ಷ ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್‌ನ ಉಪಾಧ್ಯಕ್ಷೆ ಮರಿಯಮ್ ನವಾಜ್ ಷರೀಫ್ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ತಾನು ಜೈಲಿನಲ್ಲಿದ್ದಾಗ ಅಧಿಕಾರಿಗಳು ತನ್ನ ಸೆಲ್ ಹಾಗೂ ಬಾತ್‌ರೂಂಗೆ ಕ್ಯಾಮೆರಾ ಅಳವಡಿಸಿದ್ದರು ಎಂದು ಆರೋಪಿಸಿದ್ದಾರೆ. ಮರಿಯಮ್ ಓರ್ವ ಸಂಸದೆಯೂ ಹೌದು.

ಜಿಯೋ ನ್ಯೂಸ್ ಅನ್ವಯ ಇತ್ತೀಚೆಗಷ್ಟೇ ನೀಡಿರುವ ಸಂದರ್ಶನದಲ್ಲಿ ಮರಿಯಮ್ ನವಾಜ್ ಷರೀಫ್ ಜೈಲಿನಲ್ಲಿ ತಾವು ಎದುರಿಸಿದ್ದ ಸೌಲಭ್ಯ ಕೊರತೆ ಬಗ್ಗೆ ಮಾತನಾಡಿದ್ದಾರೆ. ಮರಿಯಮ್ ಕಳೆದ ವರ್ಷ ಚೌಧರಿ ಶುಗರ್ ಮಿಲ್ಸ್ ಪ್ರಕರಣದಲ್ಲಿ ಅರೆಸ್ಟ್ ಆಗಿ ಜೈಲು ಸೇರಿದ್ದರು. ಹೀಗಿರುವಾಗ ಪಾಕಿಸ್ತಾನದ ಇಮ್ರಾನ್ ಸರ್ಕಾರದ ವಿರುದ್ಧ ಕಿಡಿ ಕಾರಿದ ಮರಿಯಮ್ ನಾನು ಜೈಲಿಗೆ ಹೋಗಿದ್ದೇನೆ. ಈ ವಿಚಾರದ ಬಗ್ಗೆ ಮಾತನಾಡುವುದಾದರೆ ಯಾವ ರೀತಿ ನನ್ನ, ಓರ್ವ ಮಹಿಳೆ ಜೊತೆ ನಡೆಸಿಕೊಂಡಿದ್ದರೆಂದು ವಿವರಿಸಿದರೆ ಅವರು ತಮ್ಮ ಮುಖವನ್ನೂ ಬೇರೆಯವರಿಗೆ ತೋರಿಸಲು ಹಿಂಜರಿಯುತ್ತಾರೆ' ಎಂದಿದ್ದಾರೆ.

ಇಮ್ರಾನ್ ನೇತೃತ್ವದ PTI ಸರ್ಕಾರದ ವಿರುದ್ಧ ಕಿಡಿ ಕಾರಿರುವ ಮರಿಯಮ್ ಅಧಿಕಾರಿಗಳು ಕೋಣೆಯೊಡೆದು ನನ್ನ ತಂದೆ ನವಾಜ್ ಷರೀಫ್‌ ಎಂದುರು ನನ್ನನ್ನು ಬಂಧಿಸುತ್ತಾರೆಂದಾದರೆ, ವೈಯುಕಗ್ತಿಕವಾಗಿ ನಿಂದಿಸುತ್ತಾರೆಂದಾದರೆ ಪಾಕಿಸ್ತಾನದಲ್ಲಿ ಮಹಿಳೆಯರು ಅದೆಷ್ಟು ಸುರಕ್ಷಿತರಾಗಿದ್ದಾರೆಂದು ನೀವೇ ಊಹಿಸಿ. ಪಾಕಿಸ್ತಾನವಾಗಲಿ ಅಥವಾ ಬೇರೆ ಯಾವುದೇಢ ದೇಶದವರಾಗಿರಲಿ ಮಹಿಳೆಯರು ಯಾವತ್ತೂ ಶಕ್ತಿಹೀನರಲ್ಲ ಎಂದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೋರ್ಟ್ ಕೇಸಲ್ಲಿ ಕೋಟಿ ಕೋಟಿ ಕಳೆದುಕೊಂಡ ಆಸ್ಟ್ರೇಲಿಯಾ ಶ್ರೀಮಂತ ಮಹಿಳೆ; ಸಂಪತ್ತನ್ನೆಲ್ಲಾ ಹಂಚುವಂತೆ ಆದೇಶ!
'ಆಂಟಿ' ಎಂದು ಕರೆವ ಮುನ್ನ ಎಚ್ಚರ! 2 ಲಕ್ಷ ರೂ. ಪರಿಹಾರಕ್ಕೆ ಕೋರ್ಟ್​ ಆದೇಶ- ಏನಿದು ಕೇಸ್​?