ಖಲಿಸ್ತಾನಿಗಳನ್ನು ಬೆಂಬಲಿಸಿದ್ದ ಕೆನಡಾ ಪ್ರಧಾನಿಗೆ ತಿರುಗುಬಾಣ!

Published : Feb 03, 2022, 07:36 AM IST
ಖಲಿಸ್ತಾನಿಗಳನ್ನು ಬೆಂಬಲಿಸಿದ್ದ ಕೆನಡಾ ಪ್ರಧಾನಿಗೆ ತಿರುಗುಬಾಣ!

ಸಾರಾಂಶ

* ಕೆನಡಾ ಕೋವಿಡ್‌ ಪ್ರತಿಭಟನೆಯಲ್ಲಿ ಖಲಿಸ್ತಾನುಗಳು ಭಾಗಿ! * ಖಲಿಸ್ತಾನಿಗಳನ್ನು ಬೆಂಬಲಿಸಿದ್ದ ಕೆನಡಾ ಪ್ರಧಾನಿಗೆ ತಿರುಗುಬಾಣ  

ನವದೆಹಲಿ(ಫೆ.03): ಕೆನಡಾದಲ್ಲಿ ಕೋವಿಡ್‌ ನಿಯಂತ್ರಣ ಸಲುವಾಗಿ ಹೇರಲಾಗಿರುವ ನಿರ್ಬಂಧಗಳನ್ನು ವಿರೋಧಿಸಿ ಅಲ್ಲಿನ ನಾಗರಿಕರು, ಟ್ರಕ್‌ ಚಾಲಕರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಖಲಿಸ್ತಾನಿ ಪರ ಹೋರಾಟಗಾರರೂ ಕಾಣಿಸಿಕೊಂಡಿದ್ದರು ಎಂಬುದು ಬೆಳಕಿಗೆ ಬಂದಿದೆ. ಈ ಮೂಲಕ ಕೃಷಿ ಕಾಯ್ದೆ ಹೋರಾಟ ಸಂದರ್ಭದಲ್ಲಿ ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಿ ಖಲಿಸ್ತಾನಿ ಪರ ಹೋರಾಟಗಾರರಿಗೆ ಬೆಂಬಲ ನೀಡಿದ್ದ ಟ್ರುಡ್ಯು ಅವರಿಗೆ ತೀವ್ರ ಮುಜುಗರ ಉಂಟಾಗಿದೆ.

ನಾಗರಿಕರ ಪ್ರತಿಭಟನೆ ವ್ಯಾಪಕವಾಗುತ್ತಿದ್ದಂತೆಯೇ ಪ್ರಧಾನಿ ಜಸ್ಟಿನ್‌ ಟ್ರುಡ್ಯು ಮತ್ತು ಕುಟುಂಬವು ರಾಜಧಾನಿ ಒಟ್ಟಾವಾದಿಂದ ಅಜ್ಞಾತ ಸ್ಥಳಕ್ಕೆ ವಾಸ್ತವ್ಯ ಬದಲಿಸಿಕೊಂಡಿದೆ ವರದಿಯಾಗಿದೆ. ಆದರೆ ಕಳೆದ ವರ್ಷ ಭಾರತದಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಬೃಹತ್‌ ಟ್ರ್ಯಾಕ್ಟರ್‌ ರಾರ‍ಯಲಿ ನಡೆಸಿದ ಸಂದರ್ಭದಲ್ಲಿ ಟ್ರುಡ್ಯು ಬೆಂಬಲ ವ್ಯಕ್ತಪಡಿಸಿದ್ದರು. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕಿದೆ ಎನ್ನುವ ಮೂಲಕ ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ್ದರು.

ಈಗ ಟ್ರುಡ್ಯು ಒಂದು ಸಣ್ಣ ಪ್ರತಿಭಟನೆಯನ್ನೂ ಎದುರಿಸಲು ಸಾಧ್ಯವಾಗದೆ ಹೆದರಿ ಪರಾರಿಯಾಗಿದ್ದಾರೆ. ಅಲ್ಲದೆ ಖಲಿಸ್ತಾನಿ ಪರ ಕೆನಡಾ ಸಂಸದ ಜಗ್ಮೀಟ್‌ ಸಿಂಗ್‌ ಧಲಿವಾಲ್‌ ಬಾಮೈದ ಜೋಧವೀರ್‌ ಸಿಂಗ್‌ ಕೆನಡಾ ಸರ್ಕಾರ ವಿರೋಧಿ ಪ್ರತಿಭಟನೆಗೆ 13,000 ಡಾಲರ್‌ (9.72 ಲಕ್ಷ) ನೀಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಟ್ಯುಡ್ರ್ಯು ಕರ್ಮ ಫಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಟೀಕಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮದ್ಯಪ್ರಿಯರಿಗೆ ಶಾಕ್.. ಮಧ್ಯಾಹ್ನ 2 ರಿಂದ 5 ರವರೆಗೆ ಮದ್ಯ ಮಾರಾಟ ಬಂದ್: ಏನಿದು ಥಾಯ್‌ ವಿಚಿತ್ರ ನಿಯಮ!
ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ