
ಸುಲ್ತಾನ್ಪುರ: 2018ರ ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ಕೋಲಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ ಹೇಳಿಕೆ ಸಂಬಂಧ ದಾಖಲಾದ ಪ್ರಕರಣ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರಪ್ರದೇಶದ ಸುಲ್ತಾನ್ಪುರದ ಜನಪ್ರತಿನಿಧಿ ಕೋರ್ಟ್ಗೆ ಹಾಜರಾಗಿ ಹೇಳಿಕೆ ದಾಖಲಿಸಿದರು.
ರಾಹುಲ್, ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ನಾಯಕ ವಿಜಯ್ ಮಿಶ್ರಾ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಸಂಬಂಧ 2024ರ ಫೆಬ್ರವರಿಯಲ್ಲಿ ರಾಹುಲ್ಗೆ ಜಾಮೀನು ಮಂಜೂರು ಮಾಡಲಾಗಿತ್ತು.
ಶುಕ್ರವಾರ ವಿಶೇಷ ನ್ಯಾಯಾಧೀಶ ಶುಭಂ ವರ್ಮಾ ಎದುರು ಹೇಳಿಕೆ ದಾಖಲಿಸಿದ ರಾಹುಲ್, ‘ನನ್ನ ವಿರುದ್ಧದ ಆರೋಪಗಳು ರಾಜಕೀಯ ದುರುದ್ದೇಶದಿಂದ ಕೂಡಿವೆ. ನನ್ನ ಮತ್ತು ನಮ್ಮ ಪಕ್ಷದ ಹೆಸರನ್ನು ಹಾಳು ಮಾಡುವ ಉದ್ದೇಶದಿಂದ ಈ ರೀತಿ ಆರೋಪ ಮಾಡಲಾಗಿದೆ. ನಾನು ಯಾರ ವಿರುದ್ಧವೂ ಅವಹೇಳನಕಾರಿ ಪದಗಳನ್ನು ಬಳಸಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಸುಳ್ಳು ದೂರು ದಾಖಲಿಸಲಾಗಿದೆ’ ಎಂದಿದ್ದಾರೆ.
ವಿಚಾರಣೆಗೂ ಮುನ್ನ, ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಸುಲ್ತಾನ್ಪುರದಲ್ಲಿ ‘ಸತ್ಯಮೇವ ಜಯತೇ’ ಪೋಸ್ಟರ್ ಅಂಟಿಸಿ ಗಮನ ಸೆಳೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ