
ನವದೆಹಲಿ(ಜ.25): ತ್ವೇಷಮಯ ಪರಿಸ್ಥಿತಿ ನಿರ್ಮಾಣವಾಗಿರುವ ಪೂರ್ವ ಲಡಾಖ್ ಗಡಿಗೆ ಹೆಚ್ಚುವರಿ ಪಡೆಗಳ ನಿಯೋಜನೆಯನ್ನು ಸ್ಥಗಿತಗೊಳಿಸೋಣ ಎಂದು ಭಾರತದ ಮನವೊಲಿಸಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದ ಚೀನಾ ಈಗ ಉಲ್ಟಾಹೊಡೆದಿದೆ. ಸದ್ದಿಲ್ಲದೆ ಗಡಿಯಲ್ಲಿ ಭಾರಿ ಸಂಖ್ಯೆಯಲ್ಲಿ ಯೋಧರನ್ನು ಜಮಾವಣೆ ಮಾಡುವ ಮೂಲಕ ತನ್ನ ನೈಜ ಬುದ್ಧಿಯನ್ನು ಮತ್ತೊಮ್ಮೆ ಅನಾವರಣ ಮಾಡಿದೆ. ಹೀಗಾಗಿ ಭಾರತ ಕೂಡ ಅನಿವಾರ್ಯವಾಗಿ ಹೆಚ್ಚಿನ ಯೋಧರನ್ನು ಗಡಿಗೆ ರವಾನಿಸಿದೆ.
ಈ ಬೆಳವಣಿಗೆಯಿಂದಾಗಿ ಪೂರ್ವ ಲಡಾಖ್ ಗಡಿಯಲ್ಲಿ ಉಷ್ಣಾಂಶ ಭಾರಿ ಕಡಿಮೆ ಇದ್ದರೂ ಎರಡೂ ದೇಶಗಳ ಪಡೆಗಳು, ಟ್ಯಾಂಕ್ ಹಾಗೂ ಶಸ್ತ್ರಸಜ್ಜಿತ ಸಿಬ್ಬಂದಿ ಕಳೆದ ನಾಲ್ಕು ತಿಂಗಳ ಬಳಿಕ ಮತ್ತಷ್ಟುಹತ್ತಿರವಾಗಿ ಮುಖಾಮುಖಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಕಳೆದ ಮೇನಿಂದ ಪೂರ್ವ ಲಡಾಖ್ ಗಡಿಯಲ್ಲಿ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. 2020ರ ಸೆ.21ರಂದು ಎರಡೂ ದೇಶಗಳ ನಡುವೆ 6ನೇ ಸುತ್ತಿನ ಮಾತುಕತೆ ನಡೆದಿತ್ತು. ಅದಾದ ಮರುದಿನವೇ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದ ಉಭಯ ದೇಶಗಳು, ಗಡಿ ಪ್ರದೇಶಕ್ಕೆ ಹೆಚ್ಚಿನ ಪ್ರಮಾಣದ ಸೇನಾಪಡೆಗಳನ್ನು ರವಾನಿಸುವುದನ್ನು ನಿಲ್ಲಿಸಬೇಕು, ಗಡಿಯಲ್ಲಿ ಏಕಪಕ್ಷೀಯವಾಗಿ ಪರಿಸ್ಥಿತಿ ಬದಲಿಸಬಾರದು ಎಂಬ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದವು. ಹೀಗಾಗಿ ಉಭಯ ದೇಶಗಳ ನಡುವಣ ವಿವಾದ ಬಗೆಹರಿಯಬಹುದು ಎಂಬ ಆಶಾವಾದ ಮೂಡಿತ್ತು. ಆದರೆ ಇದೀಗ ಭಾರತಕ್ಕೆ ತಿಳಿಸದೆ ಏಕಾಏಕಿ ಹೆಚ್ಚಿನ ಸಂಖ್ಯೆಯ ಪಡೆಗಳನ್ನು ಬಿಕ್ಕಟ್ಟಿನ ಪ್ರದೇಶಕ್ಕೆ ರವಾನಿಸಿದೆ ಎಂದು ವರದಿಗಳು ವಿವರಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ