ಭಾರತ-ಪಾಕ್ ಯುದ್ಧ ವೇಳೆ ಮಧ್ಯಸ್ಥಿಕೆ ವಹಿಸಿದ್ದು ನಾವು: ಚೀನಾ!

Published : Dec 31, 2025, 11:20 AM IST
Donald Trump Wang Yi

ಸಾರಾಂಶ

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಶಮನಗೊಳಿಸಲು ತಾವು ಮಧ್ಯಸ್ಥಿಕೆ ವಹಿಸಿದ್ದೇವೆ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ. ಆದರೆ, ಭಾರತ ಈ ಹೇಳಿಕೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿದೆ.

ಬೀಜಿಂಗ್‌ (ಡಿ.31): ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಯ್ತು, ಭಾರತ-ಪಾಕ್‌ ಯುದ್ಧದ ವೇಳೆ ಮಧ್ಯಸ್ಥಿಕೆ ವಹಿಸಿದ್ದು ನಾವು ಎಂಬ ಹೇಳಿಕೆ ನೀಡುವ ಸರದಿ ಈಗ ಚೀನಾದ್ದು. ಮಂಗಳವಾರ ಹೇಳಿಕೆ ನೀಡಿರುವ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ, ‘ಈ ವರ್ಷ ಚೀನಾ ಮಧ್ಯಸ್ಥಿಕೆ ವಹಿಸಿದ ಹಾಟ್‌ಸ್ಪಾಟ್ ಸಮಸ್ಯೆಗಳ ಪಟ್ಟಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯೂ ಒಂದು’ ಎಂದರು. ‘ನಾವು ಉತ್ತರ ಮ್ಯಾನ್ಮಾರ್, ಇರಾನಿನ ಪರಮಾಣು ಸಮಸ್ಯೆ, ಪಾಕಿಸ್ತಾನ ಮತ್ತು ಭಾರತದ ನಡುವಿನ ಉದ್ವಿಗ್ನತೆ, ಪ್ಯಾಲೆಸ್ತೀನ್‌ ಮತ್ತು ಇಸ್ರೇಲ್ ನಡುವಿನ ಸಮಸ್ಯೆಗಳು ಮತ್ತು ಕಾಂಬೋಡಿಯಾ ಮತ್ತು ಥಾಯ್ಲೆಂಡ್ ನಡುವಿನ ಇತ್ತೀಚಿನ ಸಂಘರ್ಷದಲ್ಲಿ ಮಧ್ಯಸ್ಥಿಕೆ ವಹಿಸಿದ್ದೇವೆ’ ಎಂದು ಹೇಳಿದರು. ಈ ಹಿಂದೆಯೇ ಭಾರತವು ಭಾರತ-ಪಾಕ್‌ ಯುದ್ಧದಲ್ಲಿ ಯಾರೂ ಮಧ್ಯಸ್ಥಿಕೆ ವಹಿಸಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಈ ವರ್ಷ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು "ಮಧ್ಯಸ್ಥಿಕೆ ವಹಿಸಿದೆ" ಎಂದು ಚೀನಾ ಮಂಗಳವಾರ ಹೇಳಿದೆ. ಆದರೆ, ಭಾರತ ಮಾತ್ರ ಈ ಹೇಳಿಕೆಯನ್ನು ತಿರಸ್ಕರಿಸಿದ್ದು, ಮೇ 7-10ರ ಸಂಘರ್ಷವನ್ನು ಉಭಯ ಸಂಘರ್ಷವನ್ನು ನೇರ ಮಿಲಿಟರಿ ಮಟ್ಟದ ಮಾತುಕತೆಗಳ ಮೂಲಕ ಪರಿಹರಿಸಲಾಗಿದೆ ಎಂದು ಹೇಳಿದೆ.

ಪಿಟಿಐ ವರದಿಯ ಪ್ರಕಾರ, ಬೀಜಿಂಗ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಪರಿಸ್ಥಿತಿ ಮತ್ತು ಚೀನಾದ ವಿದೇಶಿ ಸಂಬಂಧಗಳ ಕುರಿತಾದ ವಿಚಾರ ಸಂಕಿರಣದಲ್ಲಿ ಬೀಜಿಂಗ್‌ನ ವಿದೇಶಾಂಗ ನೀತಿ ಮಧ್ಯಸ್ಥಿಕೆಗಳನ್ನು ವಿವರಿಸುವಾಗ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಈ ಹೇಳಿಕೆಗಳನ್ನು ನೀಡಿದ್ದಾರೆ.

ಚೀನಾ ಹೇಳಿದ್ದೇನು?

ಕಾರ್ಯಕ್ರಮದಲ್ಲಿ ಮಾತನಾಡಿದ ವಾಂಗ್, ಈ ವರ್ಷ ಜಾಗತಿಕ ಸಂಘರ್ಷಗಳು ತೀವ್ರಗೊಂಡಿವೆ ಮತ್ತು ತಕ್ಷಣದ ಬಿಕ್ಕಟ್ಟುಗಳು ಮತ್ತು ಅವುಗಳ ಮೂಲ ಕಾರಣಗಳನ್ನು ಪರಿಹರಿಸಲು ಚೀನಾ "ವಸ್ತುನಿಷ್ಠ ಮತ್ತು ನ್ಯಾಯಯುತ ನಿಲುವು" ಪಡೆದುಕೊಂಡಿದೆ ಎಂದು ಹೇಳಿದರು.

ಯಾವುದೇ ಮೂರನೇ ದೇಶಗಳ ಮಧ್ಯಸ್ಥಿಕೆ ಇಲ್ಲ

ಪಾಕಿಸ್ತಾನದೊಂದಿಗಿನ ವ್ಯವಹಾರಗಳಲ್ಲಿ ಬಾಹ್ಯ ಮಧ್ಯಸ್ಥಿಕೆಯ ಯಾವುದೇ ಸಲಹೆಯನ್ನು ಭಾರತ ನಿರಂತರವಾಗಿ ತಿರಸ್ಕರಿಸಿದೆ. ಮೇ 7–10ರ ಆಪರೇಷನ್ ಸಿಂಧೂರ್ ಸಂಘರ್ಷದ ನಂತರ, ಎರಡೂ ಸೇನೆಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (DGMOs) ನಡುವಿನ ನೇರ ಸಂವಹನದ ಮೂಲಕ ಉದ್ವಿಗ್ನತೆಯನ್ನು ಶಮನಗೊಳಿಸಲಾಗಿದೆ ಎಂದು ನವದೆಹಲಿ ಹೇಳಿದೆ.

ಮೇ 13 ರ ಪತ್ರಿಕಾಗೋಷ್ಠಿಯಲ್ಲಿ, ವಿದೇಶಾಂಗ ಸಚಿವಾಲಯವು, ಮೇ 10 ರಂದು ಮಧ್ಯಾಹ್ನ 3:35 ಕ್ಕೆ ಪ್ರಾರಂಭವಾದ ಡಿಜಿಎಂಒ ಮಟ್ಟದ ದೂರವಾಣಿ ಕರೆಯ ಸಮಯದಲ್ಲಿ ತಿಳುವಳಿಕೆಯ "ನಿರ್ದಿಷ್ಟ ದಿನಾಂಕ, ಸಮಯ ಮತ್ತು ಪದಗಳನ್ನು" ಅಂತಿಮಗೊಳಿಸಲಾಗಿದೆ ಎಂದು ಹೇಳಿದೆ. ಭಾರತ-ಪಾಕಿಸ್ತಾನ ವಿಷಯಗಳಲ್ಲಿ ಮೂರನೇ ವ್ಯಕ್ತಿಯ ಹಸ್ತಕ್ಷೇಪಕ್ಕೆ ಯಾವುದೇ ಪಾತ್ರವಿಲ್ಲ ಎಂದು ಭಾರತ ಪುನರುಚ್ಚರಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಣ್ಣನ ಮಗನನ್ನೇ ಅಳಿಯ ಮಾಡಿಕೊಂಡ ಪಾಕ್‌ ಆರ್ಮಿ ಚೀಫ್‌ ಆಸೀಮ್‌ ಮುನೀರ್‌, ಸೇನಾ ಕಚೇರಿಯಲ್ಲೇ ಮದುವೆ!
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ಗುಂಡಿಕ್ಕಿ ಹತ್ಯೆ