
ಬೀಜಿಂಗ್: ವಿಶ್ವದ ಇತರ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆರಿಗೆ ಅಸ್ತ್ರ ಪ್ರಯೋಗಿಸಿ ಬೆದರಿಕೆ ಹಾಕುತ್ತಿರುವುದನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಖಂಡಿಸಿದ್ದು, ‘ ಶೀತಲ ಸಮರ ಮನಸ್ಥಿತಿ ವಿರುದ್ಧ ಒಗ್ಗಟ್ಟಾಗಿರಿ’ ಎಂದು ಟಿಯಾನ್ಜಿನ್ನಲ್ಲಿ ನಡೆದ ಶಾಂಘೈ ಶೃಂಗಸಭೆಯಲ್ಲಿ ಕರೆ ನೀಡಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಭಾಗಿಯಾಗಿದ್ದ ಎಸ್ಸಿಒ ಶೃಂಗಸಭೆಯಲ್ಲಿ ಕ್ಸಿ ಅಮೆರಿಕವನ್ನು ಒಗ್ಗಟ್ಟಿನಿಂದ ನ್ಯಾಯುತವಾಗಿ ಎದುರಿಸಬೇಕು ಎಂದು ಕರೆ ನೀಡಿದ್ದಾರೆ. ಶೃಂಗಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ‘ನಾವು ಪಾರದರ್ಶಕತೆ ಮತ್ತು ನ್ಯಾಯವನ್ನು ಉತ್ತೇಜಿಸಬೇಕು. ಶೀತಲ ಸಮರದ ಮನಸ್ಥಿತಿ, ಬೆದರಿಕೆ ನಡವಳಿಕೆಯನ್ನು ವಿರೋಧಿಸಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು’ ಎಂದು ಕರೆ ನೀಡಿದ್ದಾರೆ. ಜೊತೆಗೆ, ‘ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರಪಂಚವು ಪ್ರಕ್ಷುಬದ್ಧತೆ, ಪರಿವರ್ತನೆಗೆ ಒಳಗಾಗುತ್ತಿರುವಾಗ ನಾವು ಶಾಂಘೈ ಮನೋಭಾವ ಅನುಸರಿಸುವುದನ್ನು ಮುಂದುವರೆಸಿಬೇಕು. ಮತ್ತಷ್ಟು ಉತ್ತಮವಾಗಿ ನಿರ್ವಹಿಸಬೇಕು’ ಎಂದಿದ್ದಾರೆ.
ಭಾರತ - ರಷ್ಯಾ ತೈಲ ಸಂಬಂಧ ಅಮೆರಿಕದ ಕಣ್ಣು ಕುಕ್ಕಿ ತೆರಿಗೆ ಅಸ್ತ್ರ ಪ್ರಯೋಗಿಸಿತ್ತು. ಇದೇ ವಿಚಾರವನ್ನು ಕ್ಸಿ ಟಿಯಾಂಜಿನ್ ಶೃಂಗಸಭೆಯಲ್ಲಿ ಬೆದರಿಕೆ ಎಂದು ಕರೆದಿದ್ದಾರೆ. ಮಾತ್ರವಲ್ಲದೇ ಮೋದಿ, ಪುಟಿನ್, ಕ್ಸಿ ಒಟ್ಟಿಗೆ ಕಾಣಿಸಿಕೊಳ್ಳುವುದರ ಮೂಲಕ ಮೂರು ಬಲಾಢ್ಯ ರಾಷ್ಟ್ರಗಳು ಒಗ್ಗಟ್ಟಾಗಿವೆ ಎನ್ನುವ ಸಂದೇಶವನ್ನು ನೀಡಿ ಅಮೆರಿಕ ಟ್ರಂಪ್ಗೆ ಎಚ್ಚರಿಕೆಯನ್ನು ಈ ನಾಯಕರು ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ