
ಬೀಜಿಂಗ್(ಫೆ.11): ಪೂರ್ವ ಲಡಾಖ್ನ ಮುಂಚೂಣಿ ಪ್ರದೇಶಗಳಲ್ಲಿ ಬೀಡುಬಿಟ್ಟಿದ್ದ ಭಾರತ ಮತ್ತು ಚೀನಾ ಯೋಧರು, ಬುಧವಾರದಿಂದ ಹಂತಹಂತವಾಗಿ ಹಿಂದೆ ಸರಿಯುವ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಚೀನಾ ಹೇಳಿದೆ. ಉಭಯ ದೇಶಗಳ ನಡುವೆ ನಡೆದ 9ನೇ ಸುತ್ತಿನ ಮಾತುಕತೆಯಂತೆ ಈ ಬೆಳವಣಿಗೆ ಆರಂಭವಾಗಿದೆ ಎಂದು ಚೀನಾದ ಭದ್ರತಾ ಸಚಿವಾಲಯದ ವಕ್ತಾರ ಕರ್ನಲ್ ವು ಕ್ವಾನ್ ಅವರು ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಬುಧವಾರ ಮಾತನಾಡಿದ ಚೀನಾದ ಅಧಿಕಾರಿ ಕರ್ನಲ್ ಕ್ವಾನ್, ಜ.24ರಂದು ಉಭಯ ದೇಶಗಳ ನಡುವೆ ನಡೆದ 9ನೇ ಸುತ್ತಿನ ಕಮಾಂಡರ್ ಹಂತದ ಮಾತುಕತೆ ವೇಳೆ ಫೆ.10ರಿಂದ ಪ್ಯಾಂಗೋಂಗ್ ಸರೋವರದ ಉತ್ತರ ಮತ್ತು ದಕ್ಷಿಣ ಭಾಗದಿಂದ ಉಭಯ ದೇಶಗಳು ತಮ್ಮ ಸೇನೆಯನ್ನು ಹಂತಹಂತವಾಗಿ ಹಿಂದಕ್ಕೆ ಕರೆಸಿಕೊಳ್ಳಬೇಕು ಎಂಬ ಒಮ್ಮತಕ್ಕೆ ಬರಲಾಗಿತ್ತು. ಅದರಂತೆ ಪ್ರಕ್ರಿಯೆಗಳು ಆರಂಭವಾಗಿದೆ ಎಂದಿದ್ದಾರೆ.
ಚೀನಾ ಸರ್ಕಾರ ಇಂಥದ್ದೊಂದು ಮಹತ್ವದ ಬೆಳವಣಿಗೆ ಬಗ್ಗೆ ಹೇಳಿಕೆ ನೀಡಿದೆಯಾದರೂ, ಭಾರತೀಯ ಸೇನೆ ಅಥವಾ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಹಾಲಿ ಸಂಸತ್ ಅಧಿವೇಶನ ನಡೆಯುತ್ತಿರುವ ಕಾರಣ ರಕ್ಷಣಾ ಸಚಿವ ರಾಜ್ನಾಥ್ಸಿಂಗ್ ಅವರು ಗುರುವಾರ ಈ ಕುರಿತು ಅಧಿಕೃತ ಹೇಳಿಕೆ ನೀಡುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ