
ಕಾಠ್ಮಂಡು(ಡಿ.27): ಭಾರತ ಕುರಿತಂತೆ ನೇಪಾಳದ ಬದಲಾದ ಧೋರಣೆಗೆ ಚೀನಾದ ಕುಮ್ಮಕ್ಕು ಕಾರಣ ಎಂಬುದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ. ಅಧಿಕಾರ ಸಂಬಂಧ ನೇಪಾಳದ ಆಡಳಿತಾರೂಢ ಎನ್ಸಿಪಿ ಪಕ್ಷದಲ್ಲಿ ಉದ್ಭವಿಸಿರುವ ಬಿಕ್ಕಟ್ಟು ಶಮನಕ್ಕೆ ಖುದ್ದು ಚೀನಾ ಸರ್ಕಾರವೇ ಮುಂದಾಗಿದೆ.
ವಾಸ್ತವ ಪರಿಸ್ಥಿತಿ ಅವಲೋಕನಕ್ಕಾಗಿ ಚೀನಾ ಸರ್ಕಾರ ತನ್ನ ಉಪ ಸಚಿವ ನೇತೃತ್ವದ ನಾಲ್ವರು ಸದಸ್ಯರ ತಂಡವೊಂದನ್ನು ರವಾನಿಸಿದ್ದು, ಈ ತಂಡವು ಭಾನುವಾರ ನೇಪಾಳಕ್ಕೆ ಆಗಮಿಸಲಿದೆ.
ಮಾಡೆರ್ನಾ ಲಸಿಕೆ ಪಡೆದ ಅಮೆರಿಕ ವೈದ್ಯನಿಗೆ ಗಂಭೀರ ಅಲರ್ಜಿ
ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಶಿಫಾರಸ್ಸಿನ ಮೇರೆಗೆ ನೇಪಾಳ ರಾಷ್ಟ್ರಪತಿ ಸಂಸತ್ತನ್ನು ವಿಸರ್ಜನೆ ಮಾಡಿದ್ದಾರೆ. ಈ ವಿಚಾರದಿಂದ ಎನ್ಸಿಪಿ ಪಕ್ಷದಲ್ಲಿ ಓಲಿ ಹಾಗೂ ಪ್ರಚಂಡ ನಡುವೆ ಸಮರ ನಡೆಯುತ್ತಿದೆ.
ಭೇಟಿಯ ಕಾರ್ಯಸೂಚಿಯ ಬಗ್ಗೆ ಯಾವುದೇ ನಿರ್ದಿಷ್ಟ ವಿವರಗಳು ಲಭ್ಯವಿಲ್ಲದಿದ್ದರೂ, ಹಿರಿಯ ಸದಸ್ಯ ಎನ್ಸಿಪಿ ನಾಯಕರು ಭಾನುವಾರ ಬೆಳಗ್ಗೆ ಗಯೋ ಕಠ್ಮಂಡುವಿನಲ್ಲಿ ಇಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ