
ನ್ಯೂಯಾರ್ಕ್(ಮೇ.30): ಮಿನ್ನೆಸೋಟಾದಲ್ಲಿನ ಹಿಂಸಾಚಾರ ಕುರಿತು ಪ್ರತ್ಯಕ್ಷ ವರದಿ ಮಾಡುತ್ತಿದ್ದ ಟೀವಿ ಪತ್ರಕರ್ತನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಮಿನ್ನೆಸೋಟಾದಲ್ಲಿ ಕಪ್ಪು ವರ್ಣೀಯ ವ್ಯಕ್ತಿಯ ಕುತ್ತಿಗೆ ಮೇಲೆ ಪೊಲೀಸ್ ಅಧಿಕಾರಿ ಮಂಡಿಯೂರಿ ಕುಳಿತಿದ್ದ. ಆ ವ್ಯಕ್ತಿ ಸಾವನ್ನಪ್ಪಿದ್ದ. ಇದರಿಂದಾಗಿ ಹಿಂಸಾಚಾರ ಭುಗಿಲೆದ್ದಿತ್ತು. ಈ ಕುರಿತು ಸಿಎನ್ಎನ್ ವಾಹಿನಿಯ ವರದಿಗಾರ ಓಮರ್ ಜಿಮೆನೆಜ್ ಪ್ರತ್ಯಕ್ಷ ವರದಿ ನೀಡುತ್ತಿದ್ದರು.
ಆಗ ಪೊಲೀಸರು ಅವರ ಕೈಗೆ ಬೇಡಿ ತೊಡಿಸಿ ಕರೆದೊಯ್ದರು. ಈ ದೃಶ್ಯ ಕೂಡ ಪ್ರಸಾರವಾಯಿತು. ಕೆಲ ತಾಸಿನ ಬಳಿಕ ಜಿಮೆನೆಜ್ ಅವರನ್ನು ಬಿಡುಗಡೆ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ