
ನವದೆಹಲಿ[ಮಾ.12]: ಕೊರೋನಾ ವೈರಸ್ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಹೊಸ ಪ್ರವಾಸಿ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ರಾಜತಾಂತ್ರಿಕ, ಸರ್ಕಾರಿ, ವಿಶ್ವಸಂಸ್ಥೆ/ಅಂತಾರಾಷ್ಟ್ರೀಯ ಸಂಸ್ಥೆಗಳು, ಯೋಜನಾ ವೀಸಾ ಹೊರತುಪಡಿಸಿ ಮಿಕ್ಕೆಲ್ಲ ವೀಸಾಗಳನ್ನು ಏಪ್ರಿಲ್ 15ರವರೆಗೆ ಅಮಾನತುಗೊಳಿಸಿದೆ. ಮಾಚ್ರ್ 13ರಿಂದ ಹೊಸ ನಿಯಮಗಳು ಜಾರಿಗೆ ಬರಲಿವೆ.
ನಿಯಮಗಳು:
* ಸಾಗರೋತ್ತರ ಭಾರತೀಯರ ವೀಸಾ ಮುಕ್ತ ಪ್ರವಾಸ ಸವಲತ್ತನ್ನು ಏ.15ರವರೆಗೆ ತಡೆಹಿಡಿಯಲಾಗಿದೆ.
* ಅನಿವಾರ್ಯ ಕಾರಣಗಳಿಗೆ ಭಾರತಕ್ಕೆ ಭೇಟಿ ನೀಡಬೇಕು ಎನ್ನುವ ವಿದೇಶೀಯರು ಸಮೀಪದ ಭಾರತೀಯ ದೂತಾವಾಸ ಸಂಪರ್ಕಿಸಬೇಕು.
* ಚೀನಾ, ಇಟಲಿ, ಇರಾನ್, ಕೊರಿಯಾ, ಫ್ರಾನ್ಸ್, ಸ್ಪೇನ್ ಹಾಗೂ ಜರ್ಮನಿಯಿಂದ ಬರುವ ಎಲ್ಲ ಪ್ರವಾಸಿಗರನ್ನು ಕಡ್ಡಾಯವಾಗಿ ಪ್ರತ್ಯೇಕವಾಗಿ ಇರಿಸಿ 14 ದಿನ ತಪಾಸಣೆಗೆ ಒಳಪಡಿಸಲಾಗುವುದು.
* ಭಾರತೀಯರು ಹಾಗೂ ವಿದೇಶೀಯರು ಅಗತ್ಯವಿಲ್ಲದೇ ಹೋದರೆ ಭಾರತಕ್ಕೆ ಪ್ರವಾಸ ರದ್ದುಗೊಳಿಸಬೇಕು.
ಪ್ರವಾಸಿಗಳಿಗೆ ಸೂಚನೆ: ಕೊರೋನಾ ಹಿನ್ನೆಲೆ ಈ ಪ್ರದೇಶಕ್ಕೆ ಭೇಟಿ ಬೇಡ
* ಅನಿವಾರ್ಯವಲ್ಲದ ವಿದೇಶ ಯಾತ್ರೆಗಳನ್ನು ಭಾರತೀಯರು ರದ್ದುಗೊಳಿಸಬೇಕು.
* ದೇಶದ ಗಡಿಗಳಲ್ಲಿ ಚೆಕ್ಪೋಸ್ಟ್ನಲ್ಲಿ ಸಂಚಾರ ನಿರ್ಬಂಧಿಸಲಾಗುವುದು.
* ಇಟಲಿಯಿಂದ ಬಂದವರನ್ನು ಪ್ರತ್ಯೇಕವಾಗಿರಿಸಿ 14 ದಿನ ತಪಾಸಣೆ ಮಾಡಿ ನಂತರ ಊರಿಗೆ ತೆರಳಲು ಬಿಡಲಾಗುವುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ