ಒಳ ಉಡುಪು ಬಳಸಿ ಆತ್ಮಹತ್ಯೆಗೆ ಯತ್ನಿಸಿದ ದಕ್ಷಿಣ ಕೊರಿಯಾ ಮಾಜಿ ಸಚಿವ

Published : Dec 12, 2024, 08:01 AM ISTUpdated : Dec 12, 2024, 08:02 AM IST
ಒಳ ಉಡುಪು ಬಳಸಿ ಆತ್ಮಹತ್ಯೆಗೆ ಯತ್ನಿಸಿದ ದಕ್ಷಿಣ ಕೊರಿಯಾ ಮಾಜಿ ಸಚಿವ

ಸಾರಾಂಶ

ದಕ್ಷಿಣ ಕೊರಿಯಾದಲ್ಲಿ ತುರ್ತು ಸ್ಥಿತಿ ಹೇರಿದ ಹಿನ್ನೆಲೆಯಲ್ಲಿ ಬಂಧಿತರಾಗಿದ್ದ ಮಾಜಿ ರಕ್ಷಣಾ ಸಚಿವ ಕಿಮ್ ಯೋಂಗ್ ಹ್ಯುನ್, ತಮ್ಮ ಒಳ ಉಡುಪು ಬಳಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸಿಯೋಲ್: ದಕ್ಷಿಣ ಕೊರಿಯಾದಲ್ಲಿ ತುರ್ತು ಸ್ಥಿತಿ ಹೇರಿದ ಸಂಬಂಧ ಬಂಧಿತರಾಗಿರುವ ನಿರ್ಗಮಿತ ರಕ್ಷಣಾ ಸಚಿವ ಕಿಮ್‌ ಯೋಂಗ್‌ ಹ್ಯುನ್‌ ತಮ್ಮ ಒಳ ಉಡುಪು ಬಳಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆದರೆ ಬಂಧನ ಕೇಂದ್ರದಲ್ಲಿದ್ದ ಅಧಿಕಾರಿಗಳ ಮಧ್ಯಪ್ರವೇಶದಿಂದ ಆತ್ಮಹತ್ಯೆಯ ಯತ್ನ ವಿಫಲವಾಗಿದೆ. ತುರ್ತು ಸ್ಥಿತಿ ಪ್ರಕರಣದ ಸಂಬಂಧ ತನಿಖೆ ತೀವ್ರಗೊಂಡು ತಮ್ಮ ಅಧಿಕೃತ ಬಂಧನವಾಗುವ ಮುನ್ನ ಶೌಚಾಲಯಕ್ಕೆ ತೆರಳಿದ ಕಿಮ್‌ ತಮ್ಮ ಜೀವನವನ್ನು ಕೊನೆಗಾಣಿಸಿಕೊಳ್ಳಲು ಯತ್ನಿಸಿದ್ದರು. ಆಗ ಅಧಿಕಾರಿಗಳು ಬಾಗಿಲು ತೆರೆದ ಕಾರಣ ಕಿಮ್‌ ಆ ಪ್ರಯತ್ನವನ್ನು ಕೈಬಿಟ್ಟಿದ್ದಾರೆ ಎಂದು ಕೊರಿಯಾದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪೊಲೀಸ್‌ ಅಧಿಕಾರಿ ವಶಕ್ಕೆ
ದಕ್ಷಿಣ ಕೊರಿಯಾದ 2 ಉನ್ನತ ಪೊಲೀಸ್‌ ಅಧಿಕಾರಿಗಳನ್ನು ವಶಕ್ಕೆ ತೆಗೆದುಕೊಳ್ಳಳಾಗಿದ್ದು, ಅಧ್ಯಕ್ಷ ಯೂನ್‌ ಸುಕ್‌ ಯೋಲ್‌ ಹೇರಿದ್ದ ತುರ್ತು ಸ್ಥಿತಿಯಲ್ಲಿ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಯೂನ್‌ರನ್ನು ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕುವ ಬ್ಗಗೆ ವಿಪಕ್ಷ ಡೆಮಾಕ್ರಟಿಕ್‌ ಪಾರ್ಟಿ ಆಗ್ರಹಿಸಿದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ.

ಇದನ್ನೂ ಓದಿ: ಸಿರಿಯಾ ಅಧ್ಯಕ್ಷ ಆಸಾದ್ ಪರಾರಿ; ಡಮಾಸ್ಕಸ್ ಉಗ್ರರ ವಶಕ್ಕೆ

ವಿಪಕ್ಷಗಳು ದೇಶವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ ಎಂದು ಆರೋಪಿಸಿ ಡಿ.3ರಂದು ಅಧ್ಯಕ್ಷ ಯೂನ್‌ ತುರ್ತು ಸ್ಥಿತಿ ಹೇರಿದ್ದರು. ಆದರೆ ಜನರ ಆಕ್ರೋಶಕ್ಕೆ ಮಣಿದು ಕೆಲವೇ ಗಂಟೆಗಳಲ್ಲಿ ಅದನ್ನು ತೆರವುಗೊಳಿಸಿದ್ದರು.

ದೇಶದ ಸ್ಥಿರತೆ ಹಾಗೂ ಪ್ರಜಾಪ್ರಭುತ್ವಕ್ಕೆ ವಿಪಕ್ಷಗಳು ಬೆದರಿಕೆಯಾಗಿ ಪರಿಗಣಿಸಿವೆ ಎಂಬ ಕಾರಣ ನೀಡಿ ರಾತ್ರೋರಾತ್ರಿ ದಕ್ಷಿಣ ಕೊರಿಯಾದಲ್ಲಿ ಯೋಂಗ್‌ ತುರ್ತುಸ್ಥಿತಿ ಹೇರಿದ್ದರು. ಬಳಿಕ ತಮ್ಮ ಈ ನಿರ್ಧಾರಕ್ಕೆ ಕ್ಷಮೆ ಯಾಚಿಸಿ ರಾಜೀನಾಮೆ ನೀಡಿದ್ದರು. 4 ದಶಕಗಳ ಬಳಿಕ ದಕ್ಷಿಣ ಕೊರಿಯಾದಲ್ಲಿ ತುರ್ತುಸ್ಥಿತಿ ಘೋಷಣೆಯಾಗುತ್ತಿದ್ದಂತೆ ಬೀದಿಗಿಳಿದ ಜನ ಅಲ್ಲಿನ ಸಂಸತ್ತನ್ನು ಸುತ್ತುವರೆದು ಪ್ರತಿಭಟಿಸತೊಡಗಿದರು. ಇದರ ಬೆನ್ನಲ್ಲೇ ತುರ್ತುಸ್ಥಿತಿಯನ್ನು ಹಿಂಪಡೆಯಲಾಗಿತ್ತು.

ಇದನ್ನೂ ಓದಿ: ಬಾಂಗ್ಲಾ, ಶ್ರೀಲಂಕಾದಂತೆ ಸಿರಿಯಾದಲ್ಲೂ ದಂಗೆ; ಮತ್ತೆ ವಶಕ್ಕೆ ಪಡೆಯುತ್ತಾ ಐಸಿಸ್?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಶ್ವದ ಅತಿ ಬಲಿಷ್ಠ ಕರೆನ್ಸಿಗಳಿವು: ಭಾರತದ ರುಪಾಯಿ ಮುಂದೆ ಘರ್ಜಿಸುವ ಡಾಲರ್ ಈ ದೇಶದ ಕರೆನ್ಸಿ ಮುಂದೆ ಡಮ್ಮಿ!
ರಾಜಮೌಳಿ-ಜೇಮ್ಸ್ ಕ್ಯಾಮರೂನ್ ಹೊಸ ಹೆಜ್ಜೆ, ನಟ ಮಹೇಶ್ ಬಾಬುಗೆ ಪ್ಯಾನ್ ವರ್ಲ್ಡ್ ಪಟ್ಟ..!