ನೇಪಾಳದಲ್ಲಿ ಪ್ರಬಲ ಭೂಕಂಪ: ಕನಿಷ್ಠ 129 ಜನ ಸಾವು, ನೂರಾರು ಜನರಿಗೆ ಗಾಯ; ದೆಹಲಿಯಲ್ಲೂ ಕಂಪಿಸಿದ ಭೂಮಿ

Published : Nov 04, 2023, 07:49 AM ISTUpdated : Nov 04, 2023, 10:48 AM IST
ನೇಪಾಳದಲ್ಲಿ ಪ್ರಬಲ ಭೂಕಂಪ: ಕನಿಷ್ಠ 129 ಜನ ಸಾವು,  ನೂರಾರು ಜನರಿಗೆ ಗಾಯ; ದೆಹಲಿಯಲ್ಲೂ ಕಂಪಿಸಿದ ಭೂಮಿ

ಸಾರಾಂಶ

ನೇಪಾಳದ ರಿಮೋಟ್‌ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಪ್ರಬಲ ಭೂಕಂಪವಾಗಿದ್ದು, ಕನಿಷ್ಠ 129 ಜನ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ನವದೆಹಲಿ (ನವೆಂಬರ್ 4, 2023): ನೇಪಾಳದಲ್ಲಿ ಶುಕ್ರವಾರ ತಡರಾತ್ರಿ ಪ್ರಬಲ ಭೂಕಂಪವಾಗಿದ್ದು, ಕನಿಷ್ಠ 129 ಜನ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ, 140ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಭೂಕಂಪದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಇನ್ನು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. 

ನೇಪಾಳದ ರಿಮೋಟ್‌ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಹಲವು ಮನೆಗಳು ಹಾಗೂ ಕಟ್ಟಡಗಳು ಕುಸಿದಿದ್ದು, ಹಲವು ಬಿಲ್ಡಿಂಗ್‌ಗಳಿಗೆ ಹಾನಿಯಾಗಿದೆ. ತಡರಾತ್ರಿ ಭೂಕಂಪ ಸಂಭವಿಸಿರೋದರಿಂದ ಕತ್ತಲಲ್ಲಿ ಅವಶೇಷಗಳನ್ನು ಹೊರತೆಗೆಯಲಾಗಿದ್ದು, ಕುಸಿದ ಮನೆಗಳು ಮತ್ತು ಕಟ್ಟಡಗಳ ಅವಶೇಷಗಳಲ್ಲಿ ಬದುಕುಳಿದವರನ್ನು ಹುಡುಕುತ್ತಿದ್ದಾರೆ.

ಇದನ್ನು ಓದಿ: ಸಿಂಗಲ್ಸ್‌ಗೆ ಸಿಹಿ ಸುದ್ದಿ: ಶೀಘ್ರದಲ್ಲೇ ಎಲಾನ್‌ ಮಸ್ಕ್‌ X ಆ್ಯಪ್‌ನಲ್ಲಿ ಡೇಟಿಂಗ್ ಕೂಡ ಮಾಡ್ಬೋದು!

ಇನ್ನೊಂದೆಡೆ, ಭೂಕಂಪದ ಕಂಪನಗಳು 500 ಕಿಲೋಮೀಟರ್‌ಗಳಷ್ಟು ದೂರದಲ್ಲಿರುವ ನವದೆಹಲಿಯನ್ನು ಸಹ ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿ - ಎನ್‌ಸಿಆರ್‌ ಸೇರಿ ಉತ್ತರ ಭಾರತದ ಹಲವೆಡೆ ಭೂಕಂಪದ ಅನುಭವವಾಗಿದ್ದು, ನಿದ್ರೆಯಲ್ಲಿದ್ದ ಜನತೆ ಗಾಬರಿಯಿಂದ ಎದ್ದು ಮನೆಯಿಂದ ಹೊರಬಂದಿದ್ದಾರೆ.

ನೇಪಾಳದ ರುಕುಮ್ ವೆಸ್ಟ್‌ನಲ್ಲಿ ಕನಿಷ್ಠ 36 ಜನರು ಬಲಿಯಾಗಿದ್ದಾರೆ ಎಂದು ದೃಢಪಡಿಸಲಾಗಿದೆ ಮತ್ತು ಜಜರ್ಕೋಟ್‌ನಲ್ಲಿ ಕನಿಷ್ಠ 34 ಜನರು ಮೃತಪಟ್ಟಿದ್ದಾರೆ ಎಂದು ರುಕುಮ್‌ನ ಮುಖ್ಯ ಜಿಲ್ಲಾ ಅಧಿಕಾರಿ ಹರಿ ಪ್ರಸಾದ್ ಪಂತ್ ವೆಸ್ಟ್ ಎಎನ್‌ಐಗೆ ತಿಳಿಸಿದ್ದಾರೆ. ಈ ಮಧ್ಯೆ, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಅವರು ಭೀಕರ ಪ್ರಾಣಹಾನಿ ಮತ್ತು ಭೂಕಂಪದಿಂದ ಉಂಟಾದ ತೀವ್ರ ಮೂಲಸೌಕರ್ಯ ಹಾನಿಯ ಬಗ್ಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಬಿಲಿಯನೇರ್‌ ಜಾರ್ಜ್ ಸೊರೋಸ್‌ ಮಾನವೀಯತೆಯನ್ನೇ ದ್ವೇಷಿಸುತ್ತಾರೆ: ಎಲಾನ್‌ ಮಸ್ಕ್‌ ಕಿಡಿ

ಗೌರವಾನ್ವಿತ ಪ್ರಧಾನ ಮಂತ್ರಿ ಪುಷ್ಪ ಕಮಲ್ ದಹಲ್ "ಪ್ರಚಂಡ" ಅವರು ಶುಕ್ರವಾರ ರಾತ್ರಿ 11:47 ಕ್ಕೆ ಜಾಜರಕೋಟ್‌ನ ರಾಮಿದಂಡಾದಲ್ಲಿ ಭೂಕಂಪದಿಂದ ಉಂಟಾದ ಮಾನವ ಮತ್ತು ವಸ್ತು ಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಗೊಂಡವರ ತಕ್ಷಣದ ರಕ್ಷಣೆ ಮತ್ತು ಪರಿಹಾರಕ್ಕಾಗಿ ಎಲ್ಲಾ 3 ಭದ್ರತಾ ಏಜೆನ್ಸಿಗಳನ್ನು ಸಜ್ಜುಗೊಳಿಸಿದ್ದಾರೆ ಎಂದು ನೇಪಾಳ ಪಿಎಂಒ ಎಕ್ಸ್‌ನಲ್ಲಿ (ಈ ಹಿಂದಿನ ಟ್ವಿಟ್ಟರ್‌) ಪೋಸ್ಟ್ ಮಾಡಿದೆ.

2015ರಲ್ಲಿ ನೇಪಾಳದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿ ವ್ಯಾಪಕ ವಿನಾಶಕ್ಕೆ ಕಾರಣವಾಗಿತ್ತು. ಆ ವೇಳೆ ಭೂಕಂಪವು ಸುಮಾರು 9,000 ಜನರನ್ನು ಬಲಿ ತೆಗೆದುಕೊಂಡಿದ್ದು, 22,000 ಕ್ಕೂ ಹೆಚ್ಚು ಜನರು ಗಾಯಗೊಂಡರು. ಅಲ್ಲದೆ, 5 ಲಕ್ಷಕ್ಕೂ ಹೆಚ್ಚು ಮನೆಗಳಳು ನಾಶವಾಗಿದ್ದು ಮತ್ತು ಸುಮಾರು 8,000 ಶಾಲೆಗಳು ಹಾನಿಗೊಳಗಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?