
ಇಸ್ಲಮಾಬಾದ್(ಜು.18): ಬಿಜೆಪಿ, ಆರ್ಎಸ್ಎಸ್ ಸಿದ್ಧಾಂತವೇ ಭಾರತಕ್ಕೆ ದೊಡ್ಡ ಅಪಾಯ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರಲ್ಲಿ ಚುನಾವಣೆ ರ್ಯಾಲಿಯಲ್ಲಿ ಮಾತನಾಡಿ, ಪ್ರಧಾನಿ ಮೋದಿ, ಆರ್ಎಸ್ಎಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹಾಗೆಯೇ ಕಾಶ್ಮೀರಿ ಜನರಿಗೆ ತಾವೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಯಭಾರಿ ಎಂದು ಹೇಳಿಕೊಂಡಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ಬಾಘ್ನಲ್ಲಿ ಮೊದಲ ಚುನಾವಣಾ ಸಂಬಂಧಿತ ಸಭೆ ನಡೆಸಿ ಮಾತನಾಡಿದ್ದಾರೆ.
ಮಗ ಮೋದಿ ಕ್ಯಾಬಿನೆಟ್ ಸಚಿವ: ಕಾರ್ಮಿಕರಾಗಿ ದುಡಿಯುತ್ತಿದ್ದಾರೆ ತಂದೆ, ತಾಯಿ!
ಬಿಜೆಪಿ ಮತ್ತು ಆರ್ಎಸ್ಎಸ್ ಭಾರತಕ್ಕೆ ದೊಡ್ಡ ಅಪಾಯ. ಅವುಗಳ ಸಿದ್ಧಾಂತದಿಂದಲೇ ಅವು ಅಪಾಯಕಾರಿಯಾಗಿವೆ. ಮುಸ್ಲಿಂ ಮಾತ್ರವಲ್ಲ, ಸಿಖ್, ಕ್ರಿಶ್ಚಿಯನ್ನರು, ಹಿಂದುಳಿದ ವರ್ಗಗಳನ್ನು ಅವರು ಸಮಾನ ಪ್ರಜೆಗಳಾಗಿ ಪರಿಗಣಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಜು.25ರಂದು ನಡೆಯಲಿರುವ ಚುನಾವಣೆಯ ಭಾಗವಾಗಿ ಈ ಚುನಾವಣಾ ರ್ಯಾಲಿ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ