ಪೌರತ್ವ ತಿದ್ದುಪಡಿ ಜಾರಿಯ ಅಸಲಿಯತ್ತು(?) ಹೇಳಿದ ಇಮ್ರಾನ್!

Published : Dec 22, 2019, 07:51 PM IST
ಪೌರತ್ವ ತಿದ್ದುಪಡಿ ಜಾರಿಯ ಅಸಲಿಯತ್ತು(?) ಹೇಳಿದ ಇಮ್ರಾನ್!

ಸಾರಾಂಶ

CAA ಜಾರಿಯ ಕಾರಣ ಹೇಳಿದ ಪಾಕ್ ಪ್ರಧಾನಿ| ‘ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು CAA ಜಾರಿ’| ‘ಮೋದಿ ಸರ್ಕಾರದಡಿಯಲ್ಲಿ ಭಾರತ ಪ್ಯಾಸಿಸ್ಟ್ ಸಿದ್ದಾಂತವನ್ನು ಅಪ್ಪಿಕೊಂಡಿದೆ’| ಬಹುತ್ವ ಭಾರತ ಬಯಸುವ ಭಾರತೀಯರಿಂದ CAA ವಿರುದ್ಧ ಪ್ರತಿಭಟನೆ|

ಇಸ್ಲಾಮಾಬಾದ್(ಡಿ.22): ದೇಶದಲ್ಲಿನ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ.

ಮೋದಿ ಸರ್ಕಾರದಡಿಯಲ್ಲಿ ಭಾರತ ಪ್ಯಾಸಿಸ್ಟ್ ಸಿದ್ದಾಂತವನ್ನು ಅಪ್ಪಿಕೊಂಡಿದ್ದು, ಹಿಂದೂ ರಾಷ್ಟ್ರದ ಕಡೆಗೆ ಸಾಗುತ್ತಿದೆ ಎಂದು ಇಮ್ರಾನ್ ಖಾನ್ ಸರಣಿ ಟ್ವಿಟ್ ಮೂಲಕ ಕಿಡಿಕಾರಿದ್ದಾರೆ.

ಮೋದಿ ಪ್ರತಿಕೃತಿ ಸುಡಿ, ಸಾರ್ವಜನಿಕ ಆಸ್ತಿಯನ್ನಲ್ಲ: ಪ್ರಧಾನಿ!

ಪೌರತ್ವ ತಿದ್ದುಪಡಿ ಕಾಯ್ದೆಯೊಂದಿಗೆ ಬಹುತ್ವ ಭಾರತ ಬಯಸುವವರು ಪ್ರತಿಭಟನೆಗೆ ಇಳಿದಿದ್ದು, ಇದು ಆಂದೋಲನವಾಗಿ ರೂಪುಗೊಳ್ಳುತ್ತಿದೆ ಎಂದು ಇಮ್ರಾನ್ ಅಭಿಪ್ರಾಯಪಟ್ಟಿದ್ದಾರೆ.

ಭಾರತದಿಂದ ಪಾಕಿಸ್ತಾನಕ್ಕೆ ಬೆದರಿಕೆ ಹೆಚ್ಚಾಗಿದ್ದು, ಈ ಬೆದರಿಕೆಯನ್ನು ಪಾಕಿಸ್ತಾನ ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

ಎದೆ ಬಗೆದರೆ ಎರಡಕ್ಷರ ಇಲ್ಲದವರಿಂದ ಪ್ರತಿಭಟನೆ : ಪೌರತ್ವದ ಕಿಚ್ಚಿಗೆ ತೇಜಸ್ವಿ ತುಪ್ಪ!

ಭಾರತ ಯಾವುದೇ ರೀತಿಯ ಪ್ರಚೋದನಾತ್ಮಕ ಕ್ರಮಕ್ಕೆ ಮುಂದಾದರೆ ಸೂಕ್ತ ಪ್ರತ್ಯುತ್ತರ ನೀಡಲು ಪಾಕಿಸ್ತಾನ ಸಶಕ್ತವಾಗಿದೆ ಎಂದು ಪಾಕ್ ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲ್ಯದಲ್ಲಿ ಅನಾಥರಾದ್ರು, ನೆದರ್ಲ್ಯಾಂಡಲ್ಲಿ ಸ್ನೇಹಿತರಾಗಿ ದೂರಾದ್ರು, 3 ದಶಕದ ಬಳಿಕ ತಿಳೀತು ಭಾರತದಲ್ಲಿ ಒಡಹುಟ್ಟಿದ ಸಹೋದರಿಯೆಂದು!
ಟರ್ಕಿಯಲ್ಲಿ 12,900 ವರ್ಷಗಳಷ್ಟು ಹಳೆಯ ಮಾನವನ ಗುಹೆ ಪತ್ತೆ, ಪ್ರಾಚೀನ ಬೆಂಕಿ, ಕಲ್ಲಿನ ಉಪಕರಣ, ಆಭರಣ ಬೆಳಕಿಗೆ