
ನವದೆಹಲಿ(ಫೆ.15): ಕಾಶ್ಮೀರ ವಿಚಾರ ಪಾಕಿಸ್ತಾನ ಹಾಗೂ ಟರ್ಕಿಗೆ ಹತ್ತಿರವಾದುದು ಎಂದ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗಾನ್ ಅವರನ್ನು ಭಾರತ ತೀವ್ರ ತರಾಟೆಗೆ ತೆಗೆದುಕೊಂಡಿದೆ
ಪಾಕಿಸ್ತಾನ ಪ್ರವಾಸದಲ್ಲಿರುವ ಟರ್ಕಿ ಅಧ್ಯಕ್ಷ ಎರ್ಡೊಗಾನ್, ಅಲ್ಲಿನ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಕಾಶ್ಮೀರ ಪ್ರಸ್ತಾಪ ಮಾಡಿದ ಎರ್ಡೊಗಾನ್, ಮೊದಲನೆ ಮಹಾಯುದ್ಧದ ಸಂದರ್ಭದಲ್ಲಿ ವಿದೇಶಿ ಪ್ರಾಬಲ್ಯದ ವಿರುದ್ಧ ಟರ್ಕಿ ಜನತೆ ನಡೆಸಿದ ಹೋರಾಟಕ್ಕೆ ಕಾಶ್ಮೀರ ಹೋರಾಟವನ್ನು ಹೋಲಿಕೆ ಮಾಡಿದರು.
ಕಾಶ್ಮೀರದ ಭಯೋತ್ಪಾದನೆಯನ್ನು ಸ್ವಾತಂತ್ರ್ಯ ಹೋರಾಟ ಎಂದು ಕರೆದಿರುವ ಎರ್ಡೊಗಾನ್, ಈ ವಿಚಾರ ಪಾಕಿಸ್ತಾನ ಹಾಗೂ ಟರ್ಕಿಗೆ ಹತ್ತಿರವಾದುದು ಎಂದು ಹೇಳಿದರು.
ಇನ್ನು ಎರ್ಡೊಗನ್ ಹೇಳಿಕೆಯನ್ನು ತಿರಸ್ಕರಿಸಿರುವ ಭಾರತ, ನಮ್ಮ ಆಂತರಿಕ ವ್ಯವಹಾರದಲ್ಲಿ ತಲೆಹಾಕದಂತೆ ಸೂಕ್ತ ತಿರುಗೇಟು ನೀಡಿದೆ. ಎರ್ಡೊಗಾನ್ ಹೇಳಿಕೆ ಅನಗತ್ಯ ಎಂದು ಭಾರತ ಜರೆದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಕಾಶ್ಮೀರ ಭಾರತದ ಅವಿಭಾಜ್ಯ ಹಾಗೂ ನಾಶಪಡಿಸಲಾಗದ ಭಾಗವಾಗಿದೆ ಎಂದು ಹೇಳಿದ್ದಾರೆ.
ಕಾಶ್ಮೀರ ವಿಚಾರವಾಗಿ ಪಾಕ್ಗೆ ಬೆಂಬಲ: ಈ ದೇಶದ ಪ್ರವಾಸ ರದ್ದುಗೊಳಿಸಿದ ಮೋದಿ!
ಭಾರತದ ವಿರುದ್ಧ ಪಾಕಿಸ್ತಾನ ನಡೆಸುತ್ತಿರುವ ಭಯೋತ್ಪಾದನೆಯ ಅರವಿರದ ಎರ್ಡೊಗಾನ್, ಭಾರತದ ಆಂತರಿಕ ವ್ಯವಹಾರದಲ್ಲಿ ತಲೆ ಹಾಕುವ ವಿಫಳ ಯತ್ನ ಮಾಡಿದ್ದಾರೆ ಎಂದು ರವೀಶ್ ಕಿಡಿಕಾರಿದ್ದಾರೆ.
#NewsIn100Seconds ಈ ಕ್ಷಣದ ಪ್ರಮುಖ ಸುದ್ದಿಗಳು
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ