
ನವದೆಹಲಿ(ಜ.03): ಇರಾಕ್ ರಾಜಧಾನಿ ಬಾಗ್ದಾದ್ ವಿಮಾನ ನಿಲ್ದಾಣದಲ್ಲಿ ಅಮೆರಿಕ ನಡೆಸಿದ ಏರ್ ಸ್ಟ್ರೈಕ್’ನಲ್ಲಿ ಇರಾನ್ ಸೇನೆಯ ಉನ್ನತ ಅಧಿಕಾರಿ ಸಾವನ್ನಪ್ಪಿದ್ದು, ಇರಾನ್-ಅಮೆರಿಕ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ.
ಅಮೆರಿಕದ ವಾಯುದಾಳಿಯಲ್ಲಿ ಇರಾನ್ ರೆವಲ್ಯೂಶನರಿ ಗಾರ್ಡ್’ನ ಖಾಸೀಂ ಸೋಲೆಮನಿ ಸಾವನ್ನಪ್ಪಿದ್ದು, ಪ್ರತೀಕಾರ ತೀರಿಸಿಕೊಳ್ಳಲು ಇರಾನ್ ಹವಣಿಸುತ್ತಿದೆ.
ಇರಾನ್ ಟಾಪ್ ಕಮಾಂಡರ್ ಹತ್ಯೆ: ಯುದ್ಧ ಸನ್ನದ್ಧ ಸ್ಥಿತಿಯಲ್ಲಿ ಟ್ರಂಪ್-ರೋಹಾನಿ!
ಈ ಮಧ್ಯೆ ಅಮೆರಿಕ-ಇರಾನ್’ಗೆ ಸಂಯಮದ ಸಂದೇಶ ಕಳುಹಿಸಿರುವ ಭಾರತ, ಎರಡೂ ದೇಶಗಳ ಯಾವುದೇ ನಕಾರಾತ್ಮಕ ನಡೆ ಮಧ್ಯಪ್ರಾಚ್ಯವನ್ನು ಮತ್ತೆ ಯುದ್ಧದ ಹೊಸ್ತಿಲಿಗೆ ತಂದು ನಿಲ್ಲಿಸಲಿದೆ ಎಂದು ಆತಂಕ ವ್ಯಕ್ತಪಡಿಸಿದೆ.
ಯುದ್ಧೋನ್ಮಾದದಲ್ಲಿ ಯಾವುದೇ ನಕಾರಾತ್ಮಕ ನಿರ್ಣಯಗಳನ್ನು ಕೈಗೊಳ್ಳದಂತೆ ಎರಡೂ ದೇಶಗಳಿಗೆ ಭಾರತ ಮನವಿ ಮಾಡಿದ್ದು, ಶಾಂತಿ ಸ್ಥಾಪನೆಗೆ ಸಾಧ್ಯವಾದ ಎಲ್ಲ ನೆರವು ನೀಡುವ ಭರವಸೆ ನೀಡಿದೆ.
ಭಾರೀ ಬೆಲೆ ತೆರಬೇಕಾಗುತ್ತದೆ: ಹೊಸ ವರ್ಷಕ್ಕೆ ಟ್ರಂಪ್ ವಾರ್ನ್ ಮಾಡಿದ್ಯಾರಿಗೆ?
ಇರಾಕ್ ರಾಜಧಾನಿ ಬಾಗ್ದಾದ್’ನಲ್ಲಿ ಅಮೆರಿಕ ನಡೆಸಿದ ಏರ್ ಸ್ಟ್ರೈಕ್’ನಲ್ಲಿ ಇರಾನ್ ಸೇನೆಯ ಉನ್ನತ ಕಮಾಂಡರ್ ಖಾಸೀಮ್ ಸೋಲೆಮನಿ ಸಾವನ್ನಪ್ಪಿದ್ದು, ಇರಾನ್-ಅಮೆರಿಕ ನಡುವೆ ಯುದ್ಧ ಭೀತಿ ಸೃಷ್ಟಿಸಿರುವುದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ