
ನವದೆಹಲಿ(ಆ.22): ಗಲ್ವಾನ್ ಸಂಘರ್ಷದ ಬಳಿಕ ಚೀನಾ ವಿರುದ್ಧ ಕಠಿಣ ನಿಲುವು ತಾಳುತ್ತಿರುವ ಭಾರತ, ಇದೀಗ ಚೀನಿಯರ ಮೇಲೂ ತೀವ್ರ ನಿಗಾ ಇಡಲು ಮುಂದಾಗಿದೆ. ಚೀನೀ ನಾಗರಿಕರಿಗೆ ವೀಸಾ ನೀಡುವ ವೇಳೆ ಹೆಚ್ಚಿನ ಪರಿಶೀಲನೆ ಹಾಗೂ ಚೀನಾ ಜತೆ ಒಪ್ಪಂದ ಮಾಡಿಕೊಂಡಿರುವ ವಿಶ್ವವಿದ್ಯಾಲಯಗಳ ಮೇಲೆ ಹದ್ದಿನ ಕಣ್ಣಿಡಲು ತೀರ್ಮಾನಿಸಿದೆ.
ಪಾಕ್-ಚೀನಾ ಕಣ್ತಪ್ಪಿಸಿ ಲಡಾಖ್ಗೆ ಭಾರತದಿಂದ ರಹಸ್ಯ ರಸ್ತೆ ಮಾರ್ಗ
ಚೀನಾದ ಉದ್ಯಮಿಗಳು, ಶಿಕ್ಷಣ ತಜ್ಞರು, ಉದ್ಯಮಿಗಳು, ವಕೀಲರಿಗೆ ವೀಸಾ ನೀಡುವ ಮೊದಲು ಹೆಚ್ಚಿನ ಪರಿಶೀಲನೆಗೆ ಒಳಪಡಿಸಲು ತೀರ್ಮಾನಿಸಲಾಗಿದೆ. ಪಾಕಿಸ್ತಾನದೊಂದಿಗೆ ದೀರ್ಘ ಸಂಬಂಧ ಇಟ್ಟುಕೊಂಡಿರುವವರಿಗೂ ಈ ನಿಯಮ ಅನ್ವಯವಾಗಲಿದೆ ಎಂದು ಹೆಸರು ಬಹಿರಂಗ ಪಡಿಸಲೊಲ್ಲದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಅಲ್ಲದೇ ಚೀನಾ ಶಿಕ್ಷಣ ಸಂಸ್ಥೆಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡಲಾಗುತ್ತದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬನಾರಾಸ್ ಹಿಂದೂ ವಿವಿ, ಜವಹರಲಾಲ್ ನೆಹರೂ ವಿವಿ ಸೇರಿ ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಚೀನಾದೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನು ಮರುಪರಿಶೀಲನೆ ಮಾಡಲು ಮುಂದಾಗಿದೆ.
ಮಾನಸ ಸರೋವರ ಬಳಿ ಚೀನಾದ ಕ್ಷಿಪಣಿ ನೆಲೆ: ಮತ್ತೆ ಡ್ರ್ಯಾಗನ್ ಕ್ಯಾತೆ!
ಅಲ್ಲದೇ ಚೀನಾದೊಂದಿಗೆ ಒಪ್ಪಂದ ಮಾಡಿಕೊಂಡು ಮ್ಯಾಂಡರೀನ್ ಭಾಷೆ ಭೋಧಿಸುತ್ತಿದ್ದ ಶಿಕ್ಷಣ ಸಂಸ್ಥೆಗಳಲ್ಲಿ ಅದನ್ನು ನಿಲ್ಲಿಸಲಾಗುತ್ತದೆ ಎಂದು ಗೊತ್ತಾಗಿದೆ. ಶಿಕ್ಷಣ ಹಾಗೂ ಇತರ ಕ್ಷೇತ್ರಗಳಲ್ಲಿ ಚೀನಾದ ಪ್ರಭಾವನ್ನು ತಗ್ಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಕೆಲ ದಿನಗಳ ಹಿಂದಷ್ಟೇ ಚೀನಾ ಮೂಲದ 50ಕ್ಕೂ ಹೆಚ್ಚು ಆ್ಯಪ್ಗಳನ್ನು ನಿರ್ಬಂಧಿಸುವ ಮೂಲಕ ಭಾರತ ಚೀನಾಕ್ಕೆ ಆರ್ಥಿಕ ಹೊಡೆತ ನೀಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ