23 ಗಂಟೆ ಕುವೈತ್‌ನಲ್ಲಿ ಅನ್ನಾಹಾರವಿಲ್ಲದೇ ಪರದಾಟ; ಭಾರತೀಯರು ಊಟ, ತಿಂಡಿ ಸೌಲಭ್ಯಕ್ಕೆ ಅರ್ಹರಲ್ಲ ಎಂದ ಗೋ ಏರ್‌

Published : Dec 02, 2024, 07:33 AM IST
23 ಗಂಟೆ ಕುವೈತ್‌ನಲ್ಲಿ ಅನ್ನಾಹಾರವಿಲ್ಲದೇ ಪರದಾಟ; ಭಾರತೀಯರು ಊಟ, ತಿಂಡಿ ಸೌಲಭ್ಯಕ್ಕೆ ಅರ್ಹರಲ್ಲ ಎಂದ ಗೋ ಏರ್‌

ಸಾರಾಂಶ

ಮುಂಬೈನಿಂದ ಮ್ಯಾಂಚೆಸ್ಟರ್‌ಗೆ ತೆರಳುತ್ತಿದ್ದ ಭಾರತೀಯ ಪ್ರಯಾಣಿಕರು ಎಂಜಿನ್‌ನಲ್ಲಿ ತೊಂದರೆಯಾದ ಕಾರಣ ಕುವೈತ್‌ನಲ್ಲಿ 23 ತಾಸು ಸಿಲುಕಿದ್ದಾರೆ. ಊಟ-ತಿಂಡಿ ಸೌಲಭ್ಯವಿಲ್ಲದೆ ಪ್ರಯಾಣಿಕರು ಬಳಲಿದ್ದಾರೆ. ಗಲ್ಫ್‌ ಏರ್‌ ಭಾರತೀಯರಿಗೆ ಸೌಲಭ್ಯ ನಿರಾಕರಿಸಿದೆ ಎಂಬ ಆರೋಪ ಕೇಳಿಬಂದಿದೆ.

ಕುವೈತ್‌: ಮುಂಬೈನಿಂದ ಬ್ರಿಟನ್‌ನ ಮ್ಯಾಂಚೆಸ್ಟರ್‌ಗೆ ತೆರಳುತ್ತಿದ್ದ ಭಾರತೀಯರು 23 ತಾಸು ಕಾಲ ಕುವೈತ್‌ನಲ್ಲಿ ಸಿಲುಕಿದ್ದು, ಊಟ-ತಿಂಡಿ ಇಲ್ಲದೇ ಬಳಲಿದ್ದಾರೆ. ಭಾರತೀಯರು ಗಲ್ಫ್‌ ಏರ್‌ ಮೂಲಕ ಬಹ್ರೇನ್‌ಗೆ ತೆರಳಿ ಅಲ್ಲಿಂದ ಅದೇ ಸಂಸ್ಥೆಯ ವಿಮಾನದಲ್ಲಿ ಮ್ಯಾಂಚೆಸ್ಟರ್‌ಗೆ ಹೊರಟಿದ್ದರು. ಬಹ್ರೇನ್‌ನಿಂದ ಟೇಕಾಫ್ ಆದ 20 ನಿಮಿಷದಲ್ಲಿ ಎಂಜಿನ್‌ನಲ್ಲಿ ತೊಂದರೆ ಕಾಣಿಸಿಕೊಂಡ ಕಾರಣ ವಿಮಾನವನ್ನು ಕುವೈತ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

‘ಆದರೆ ವಿಮಾನ ನಿಲ್ದಾಣದಲ್ಲಿ ಐರೋಪ್ಯ ಒಕ್ಕೂಟ, ಬ್ರಿಟನ್‌ ಮತ್ತು ಅಮೆರಿಕ ಪ್ರಜೆಗಳಿಗೆ ಮಾತ್ರ ವಸತಿ, ಊಟ ಕೊಟ್ಟು ಭಾರತೀಯರನ್ನು ಗಲ್ಫ್‌ ಏರ್‌ ಸಿಬ್ಬಂದಿ ಮತ್ತು ವಿಮಾನ ನಿಲ್ದಾಣ ಕಡೆಗಣಿಸಿದೆ. ಏಕೆಂದರೆ ಭಾರತೀಯ ಪ್ರಯಾಣಿಕರು ಈ ಸವಲತ್ತಿಗೆ ನಿಯಮಾನುಸಾರ ಅರ್ಹರಲ್ಲ ಎಂದು ಗಲ್ಫ್‌ ಏರ್‌ ಹೇಳಿದೆ’ ಎಂದು ಸಂಕಷ್ಟಕ್ಕೆ ಸಿಲುಕಿರುವ ಪ್ರಯಾಣಿಕರು ಎಕ್ಸ್‌ನಲ್ಲಿ ಗಲ್ಫ್‌ ಏರ್‌ ಮತ್ತು ಏರ್ಪೋರ್ಟ್‌ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ನಡುವೆ ಈ ವಿಷಯವನ್ನು ಗಲ್ಫ್‌ ಏರ್‌ ಮುಂದೆ ಪ್ರಸ್ತಾಪಿಸಿ, ಸಮಸ್ಯೆ ಬಗೆಹರಿಸುವಂತೆ ಭಾರತ ಸರ್ಕಾರ ಕೋರಿಕೆ ಸಲ್ಲಿಸಿದೆ.

ಇದನ್ನೂ ಓದಿ: ಪ್ರತಿ ದಂಪತಿ ಕನಿಷ್ಠ 3 ಮಕ್ಕಳ ಹೆರಬೇಕು : ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಲ್ಫ್‌ ಸುಲ್ತಾನರ ನಡುವೆ ಬಿರುಕು: ಒಂದಾಗಿದ್ದ ಸೌದಿ-ಯುಎಇ ಶತ್ರುಗಳಾಗಿದ್ದು ಹೇಗೆ? ಎರಡು ಮುಸ್ಲಿಂ ರಾಷ್ಟ್ರಗಳ ಅಸಲಿ ಯುದ್ಧಕ್ಕೆ ಕಾರಣವೇನು ಗೊತ್ತಾ?
37ರ ಪತ್ನಿಯ ಜೊತೆ 92ರ ಹರೆಯದಲ್ಲಿ ಮಗುವಿಗೆ ತಂದೆಯಾದ ವೈದ್ಯ