ಅಮೆರಿಕಾದಲ್ಲಿ ಪಿಜ್ಜಾ ಡೆಲಿವರಿಗೆ ತೆರಳಿದ್ದ ಭಾರತದ ಯುವಕ ಅನ್ಶುಲ್ ಮೇಲೆ ಗುಂಡಿನ ದಾಳಿ

Published : Jun 08, 2026, 09:01 AM IST
 Anshul Kuncha

ಸಾರಾಂಶ

ಅಮೆರಿಕದ ಫಿಲಡೆಲ್ಫಿಯಾದಲ್ಲಿ ತೆಲಂಗಾಣ ಮೂಲದ 28 ವರ್ಷದ ಅನ್ಶುಲ್ ಕುಂಚ ಎಂಬ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪಾರ್ಟ್-ಟೈಮ್ ಪಿಜ್ಜಾ ಡೆಲಿವರಿ ಮಾಡುತ್ತಿದ್ದ ಅವರನ್ನು, ನಕಲಿ ಆರ್ಡರ್ ನೀಡಿ ನಿರ್ಜನ ಪ್ರದೇಶಕ್ಕೆ ಕರೆಸಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಇದೊಂದು ವ್ಯವಸ್ಥಿತ ಕೊಲೆ ಎಂಬ ಅನುಮಾನ ವ್ಯಕ್ತವಾಗಿದೆ.

ಫಿಲಡೆಲ್ಫಿಯಾ: ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ಯುವಕನ ಬರ್ಬರ ಹತ್ಯೆಯಾಗಿದೆ. ತೆಲಂಗಾಣ ಮೂಲದ 28 ವರ್ಷದ ಅನ್ಶುಲ್ ಕುಂಚ ಎಂಬ ಯುವಕನನ್ನು ಫಿಲಡೆಲ್ಫಿಯಾದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಅನ್ಶುಲ್, ಒಂದು ಮಲ್ಟಿನ್ಯಾಷನಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಹೆಚ್ಚಿನ ಆದಾಯಕ್ಕಾಗಿ ಪಾರ್ಟ್-ಟೈಮ್ ಆಗಿ ಪಿಜ್ಜಾ ಡೆಲಿವರಿ ಕೆಲಸ ಮಾಡುತ್ತಿದ್ದರು. ನಕಲಿ ಆರ್ಡರ್ ನೀಡಿ, ಜನರಿಲ್ಲದ ಪ್ರದೇಶಕ್ಕೆ ಕರೆಸಿ ಅನ್ಶುಲ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದೇ ಸಾವು

ಶನಿವಾರ ತಡರಾತ್ರಿ, ನಿರ್ಜನ ಪ್ರದೇಶವೊಂದಕ್ಕೆ ಪಿಜ್ಜಾ ಡೆಲಿವರಿ ಮಾಡುವಂತೆ ಅನ್ಶುಲ್‍ಗೆ ಆರ್ಡರ್ ಬಂದಿತ್ತು. ಆರ್ಡರ್ ಕೊಟ್ಟಿದ್ದ ವಿಳಾಸಕ್ಕೆ ಅನ್ಶುಲ್ ತಲುಪುತ್ತಿದ್ದಂತೆ, ಅಲ್ಲಿದ್ದ ಅಪರಿಚಿತರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೃತ್ಯ ಎಸಗಿದ ನಂತರ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ಅನ್ಶುಲ್‌ನನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಈ ಕೊಲೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಅನ್ಶುಲ್ ಬಳಿ ಇದ್ದ ಹಣ ಅಥವಾ ಯಾವುದೇ ಬೆಲೆಬಾಳುವ ವಸ್ತುಗಳು ಕಳುವಾಗಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ. ಹೀಗಾಗಿ, ಇದೊಂದು ದರೋಡೆ ಯತ್ನವಲ್ಲ, ಬದಲಾಗಿ ವ್ಯವಸ್ಥಿತವಾಗಿ ರೂಪಿಸಿದ ಕೊಲೆ ಎಂಬ ಅನುಮಾನ ಬಲವಾಗಿದೆ. ಘಟನೆ ನಡೆದಾಗ, ಕಪ್ಪು ಬಟ್ಟೆ ಧರಿಸಿ, ಮುಖಕ್ಕೆ ಮಾಸ್ಕ್ ಹಾಕಿದ್ದ ಇಬ್ಬರು ವ್ಯಕ್ತಿಗಳು ಆ ಪ್ರದೇಶದಲ್ಲಿ ಓಡಾಡುತ್ತಿದ್ದುದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ ಎಂದು ಕುಟುಂಬ ತಿಳಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇರಾನ್‌ ನಾಯಕರು ಬಲಿಷ್ಠರು, ಅದಕ್ಕೇ ಒಪ್ಪಂದಕ್ಕೆ ಬರ್ತಿಲ್ಲ: ಟ್ರಂಪ್ ಮೆಚ್ಚುಗೆಯ ರಹಸ್ಯವೇನು?
Shivaji Maharaj Statue: ಇಸ್ರೇಲ್‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ನಿರ್ಮಾಣವಾಗುತ್ತಿದೆ! ಕಾರಣ ಏನು ಗೊತ್ತಾ?