
ದುಬೈ(ಏ.12): ಇರಾನಿನ ನತಾಂಜ್ ನಗರದಲ್ಲಿರುವ ಭೂಗತ ಯುರೇನಿಯಂ ಅಣು ಸಂಸ್ಕರಣಾ ಘಟಕದಲ್ಲಿ ಹಠಾತ್ ವಿದ್ಯುತ್ ಕಡಿತವಾದ ಘಟನೆ ಭಾನುವಾರ ನಡೆದಿದೆ. ಇದು ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಸೃಷ್ಟಿಸುವ ಸಾಧ್ಯತೆ ಇದೆ.
ಘಟನೆಗೆ ಕಾರಣ ಏನು ಎಂಬ ತನಿಖೆಯನ್ನು ಇರಾನ್ ಆರಂಭಿಸಿದೆ. ಆದರೆ ‘ಸೈಬರ್ ದಾಳಿ ನಡೆಸಿದ ಕಾರಣದಿಂದ ಅಣು ಸಂಸ್ಕರಣಾ ಘಟಕದಲ್ಲಿ ವಿದ್ಯುತ್ ಕಡಿತಗೊಂಡಿದೆ’ ಎಂದು ಇಸ್ರೇಲ್ ಮಾಧ್ಯಮಗಳು ಸಂದೇಹ ವ್ಯಕ್ತಪಡಿಸಿವೆ.
ಮಧ್ಯಪ್ರಾಚ್ಯದಲ್ಲಿ ಮೇಲುಗೈ ಸಾಧಿಸಲು ಇಸ್ರೇಲ್-ಇರಾನ್ ಮಧ್ಯೆ ಮುಸುಕಿನ ಗುದ್ದಾಟ ಇದೆ. ಈ ಹಂತದಲ್ಲಿ ನಿಜಕ್ಕೂ ಇಸ್ರೇಲ್ ಈ ಘಟನೆಯ ಹಿಂದಿದ್ದರೆ ಇರಾನ್-ಇಸ್ರೇಲಿನ ನಡುವೆ ಮತ್ತೊಂದು ಸುತ್ತಿನ ಕದನ ಏರ್ಪಡುವ ಸಾಧ್ಯತೆ ಇದೆ.
ಘಟನೆ ಬೆನ್ನಲ್ಲೇ ಅಮೆರಿಕ ರಕ್ಷಣಾ ಕಾರ್ಯದರ್ಶಿ ಇಸ್ರೇಲ್ಗೆ ಧಾವಿಸಿ ಇಸ್ರೇಲ್ ಪ್ರಧಾನಿ ನೇತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ