
ನವದೆಹಲಿ (ಅ.07): ಇಸ್ರೇಲ್ ಮೇಲೆ ಹಮಾಸ್ ಉಗ್ರರ ಗುಂಪು 5000ಕ್ಕೂ ಅಧಿಕ ರಾಕೆಟ್ಗಳ ಸುರಿಮಳೆ ಸುರಿಸಿ, ಯುದ್ಧವನ್ನು ಸಾರಿದ ಬೆನ್ನಲ್ಲಿಯೇ ಇಸ್ರೇಲ್ನಲ್ಲಿರುವ ಭಾರತೀಯರರ ರಕ್ಷಣೆಗೆ ಭಾರತೀಯ ರಾಯಭಾರಿ ಕಚೇರಿಯಿಂದ ಅಗತ್ಯ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ತುರ್ತು ಸಂದರ್ಭದಲ್ಲಿ ಸಂಪರ್ಕಿಸಲು ಸಹಾಯವಾಣಿ ಆರಂಭಿಸಿದೆ.
ಇಸ್ರೇಲ್ ಗಡಿಯಲ್ಲಿ ಯುದ್ಧದ ವಾತಾವರಣ ಹಿನ್ನೆಲೆಯಲ್ಲಿ ಭಾರತೀಯ ರಾಯಭಾರ ಕಚೇರಿಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಸ್ಥಳೀಯ ಅಧಿಕಾರಿಗಳು ನೀಡುವ ಸುರಕ್ಷತಾ ಮಾನದಂಡ ಅನುಸರಿಸಿ ಅನಗತ್ಯ ಸಂಚಾರ ಬೇಡ, ಸುರಕ್ಷತಾ ಸ್ಥಳಗಳಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಇನ್ನು ಇಸ್ರೇಲ್ ನಲ್ಲಿ ವಾಸಿಸುವ ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ ನೀಡುವ ಜೊತೆಗೆ, ಅಗತ್ಯ ಬಿದ್ದಲ್ಲಿ +97235226748 ಸಂಖ್ಯೆಯನ್ನ ಸಂಪರ್ಕ ಮಾಡುವಂತೆ ಮಾಹಿತಿ ನೀಡಲಾಗಿದೆ.
ಇತ್ತೀಚಿನ ವರ್ಷಗಳಲ್ಲಿ ಇಸ್ರೇಲ್ ಮೇಲೆ ನಡೆಯುತ್ತಿರುವ ಅತೀ ದೊಡ್ಡ ದಾಳಿ ಇದು ಎನ್ನಲಾಗಿದೆ. ಇಂದು ಬೆಳಿಗ್ಗೆಯಿಂದ ಹಮಾಸಾ ಉಗ್ರರು ಇಸ್ರೇಲ್ ಮೇಲೆ 5000 ರಾಕೆಟ್ ದಾಳಿಯನ್ನ ನಡೆಸಿದ್ದಾರೆ. ಗಾಜಾ ಸ್ಟ್ರಿಪ್ನಿಂದ ಶನಿವಾರ ಇಸ್ರೇಲ್ ಮೇಲೆ ಹಮಾಸ್ ಉಗ್ರರ ಗುಂಪು ಸಾವಿರಾರು ರಾಕೆಟ್ಗಳ ಸುರಿಮಳೆ ಸುರಿಸಿ, ದಿಢೀರ್ ಯುದ್ಧ ಸಾರಿದೆ. ಇದರಿಂದ ದಿಢೀರನೇ ಇಸ್ರೇಲ್ ಮೇಲೆ ಸ್ಟೇಟ್ ಆಫ್ ವಾರ್ ಆರಂಭವಾಗಿದೆ. ಇಸ್ರೇಲಿ ಸೈನ್ಯವು ದೇಶದ ದಕ್ಷಿಣ ಮತ್ತು ಮಧ್ಯ ಪ್ರದೇಶಗಳಲ್ಲಿ ಸೈರನ್ಗಳ ಬಗ್ಗೆ ಎಚ್ಚರಿಕೆ ನೀಡಿದ್ದು, ಸಾರ್ವಜನಿಕರನ್ನು ಬಾಂಬ್ ಶೆಲ್ಟರ್ಗಳ ಬಳಿ ಇರುವಂತೆ ಮನವಿ ಮಾಡಿಕೊಂಡಿದೆ.
"ನಾವು ಇಸ್ರೇಲ್ ಆಕ್ರಮಣದ ಎಲ್ಲ ಅಪರಾಧಗಳನ್ನು ಕೊನೆಗೊಳಿಸಲು ನಿರ್ಧರಿಸಿದ್ದೇವೆ, ಹೊಣೆಗಾರಿಕೆಯಿಲ್ಲದೆ ನಮ್ಮ ಮೇಲೆ ಆಕ್ರಮಣ ಮಾಡುವ ಅವರ ಸಮಯ ಮುಗಿದಿದೆ" ಎಂದೂ ಗುಂಪು ಹೇಳಿದೆ. ಈ ಯುದ್ಧಕ್ಕೆ Operation Al-Aqsa Flood ಎಂದು ಹೆಸರಿಡಲಾಗಿದೆ. "ನಾವು ಆಪರೇಷನ್ ಅಲ್-ಅಕ್ಸಾ ಪ್ರವಾಹವನ್ನು ಘೋಷಿಸಿದ್ದು, 20 ನಿಮಿಷಗಳ ಮೊದಲ ಸ್ಟ್ರೈಕ್ನಲ್ಲಿ 5,000 ಕ್ಕೂ ಹೆಚ್ಚು ರಾಕೆಟ್ಗಳನ್ನು ಹಾರಿಸಿದ್ದೇವೆ." ಎಂದು ಹೇಳಿದ್ದಾರೆ. ಇಸ್ರೇಲ್ ಅನ್ನು ವಿರೋಧಿಸುವ ಇಸ್ಲಾಮಿಕ್ ಉಗ್ರಗಾಮಿ ಗುಂಪು ಹಮಾಸ್ 2007 ರಲ್ಲಿ ಭೂಪ್ರದೇಶದ ನಿಯಂತ್ರಣವನ್ನು ವಶಪಡಿಸಿಕೊಂಡ ನಂತರ ಇಸ್ರೇಲ್ ಗಾಜಾದ ಮೇಲೆ ದಿಗ್ಬಂಧನ ಹಾಕಿದೆ.. ಅಂದಿನಿಂದ ಕಡು ಶತ್ರುಗಳು ನಾಲ್ಕು ಯುದ್ಧ ನಡೆಸಿವೆ.
ಇಸ್ರೇಲ್ ಮಹಿಳೆಯ ವಿವಸ್ತ್ರಗೊಳಿಸಿ ಹಮಾಸ್ ಉಗ್ರರ ದಾಳಿ, ಅಲ್ಲಾಹು ಅಕ್ಬರ್ ಘೋಷಣೆ!
ಸ್ರೇಲ್(ಅ.07) ಇಸ್ರೇಲ್ ಮೇಲೆ ಯುದ್ಧ ಸಾರಿರುವ ಹಮಾಸ್ ಉಗ್ರರು ಭೀಕರ ದಾಳಿ ನಡೆಸಿದ್ದಾರೆ. ಒಂದೆಡೆ ರಾಕೆಟ್ ಮೂಲಕ ದಾಳಿ ನಡೆಸಿದರೆ, ಸಾವಿರಾರು ಉಗ್ರರು ಇಸ್ರೇಲ್ಗೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ಗುಂಡಿನ ಮಳೆ ಸುರಿಸಿದ್ದಾರೆ. ಇಸ್ರೇಲ್ ಸೈನಿಕರನ್ನು ಅಟ್ಟಾಡಿಸಿಕೊಂಡು ಹೋಗಿ ಹತ್ಯೆ ಮಾಡುತ್ತಿದ್ದಾರೆ. ಇದೇ ವೇಳೆ ಸಾರ್ವಜನಿಕರ ಮೇಲೂ ದಾಳಿ ನಡೆದಿದೆ. ಗಾಜಾ ಸ್ಟ್ರಿಪ್ನಿಂದ ದಾಳಿ ಆರಂಭಿಸಿದ ಹಮಾಸ್ ಉಗ್ರರು ನೇರವಾಗಿ ಇಸ್ರೇಲ್ ಗಡಿ ದಾಟಿ ಇಸ್ರೇಲ್ ನಗರ, ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಹಲವು ಅಮಾಯಕರನ್ನು ಒತ್ತೆಯಾಳಾಗಿಟ್ಟುಕೊಂಡಿದ್ದಾರೆ. ಹಲವರ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ಇತ್ತ ಇಸ್ರೇಲ್ ಮಹಿಳೆಯನ್ನು ವಿವಸ್ತ್ರಗೊಳಿಸಿ ತೀವ್ರ ದಾಳಿ ನಡೆಸಿದ್ದಾರೆ. ಮಹಿಳೆಯನ್ನು ತಮ್ಮ ವಾಹನಕ್ಕೆ ಎತ್ತಿ ಹಾಕಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ