
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನಡೆದ ಎಸ್ಸಿಒ ಶೃಂಗಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾಗವಹಿಸಿದ ಬೆನ್ನಲ್ಲೇ ಪಾಕ್ ಭಾರತದತ್ತ ಸ್ನೇಹ ಹಸ್ತ ಚಾಚಲು ಮುಂದಾಗಿದೆ. ಸಂದರ್ಶನವೊಂದರಲ್ಲಿ ಮಾತನಾಡಿದ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್, 'ಎರಡೂ ದೇಶಗಳು ಹಳೆಯದನ್ನು ಮರೆತು, ಶಕ್ತಿ, ಹವಾಮಾನ ಬದಲಾವಣೆಯಂತಹ ಭವಿಷ್ಯದ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಗಮನ ಹರಿಸಬೇಕು. ಈಗಾಗಲೇ 75 ವರ್ಷ ಕಳೆದುಹೋಗಿದ್ದು, ಇನ್ನೂ 75 ವರ್ಷಗಳನ್ನು ವ್ಯರ್ಥವಾಗಿ ಕಳೆಯುವುದು ಬೇಡ' ಎಂದು ನಯವಾದ ಮಾತುಗಳನ್ನಾಡಿದ್ದಾರೆ.
ಜೊತೆಗೆ, ಶೃಂಗಕ್ಕೆ ಪ್ರಧಾನಿ ಮೋದಿಯವರು ಆಗಮಿಸಿದ್ದರೆ ಇನ್ನೂ ಒಳ್ಳೆಯದಿತ್ತು. ನೆರೆ ದೇಶ ಗಳನ್ನು ಬದಲಿಸಲಾಗದ ಆದ್ದರಿಂದ ನೆರೆಹೊರೆಯವರೊಂದಿಗೆ ಒಳ್ಳೆ ರೀತಿಯಿಂದಿರಬೇಕು ಎಂದಿದ್ದಾರೆ. ಆ.15 ಮತ್ತು 16ರಂದು ಇಸ್ಲಾಮಾಬಾದ್ನಲ್ಲಿ ನಡೆದ ಶೃಂಗಸಭೆಯಲ್ಲಿ ಮೋದಿ ಪರವಾಗಿ ಜೈಶಂಕರ್ ಭಾಗವಹಿಸಿದ್ದು, ಉಗ್ರವಾದವನ್ನು ಬೆಂಬಲಿಸುವ ಪಾಕಿಸ್ತಾನಕ್ಕೆ ಅದರ ನೆಲದಲ್ಲೇ ಪರೋಕ್ಷವಾಗಿ ತಿವಿದಿದ್ದರು.
ಮೋದಿ ಹಾಗೂ ಶರೀಫ್ ನಡುವೆ ಆತ್ಮೀಯ ಸಂಬಂಧವಿದ್ದು, 2015ರಲ್ಲಿ ಆಫ್ಘಾ ನಿಸ್ತಾನಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಭಾರತಕ್ಕೆ ಮರಳುವ ವೇಳೆ ಮಾರ್ಗಮಧ್ಯದಲ್ಲಿ ಪಾಕ್ಗೆ ಧಿಡೀರ್ ಭೇಟಿ ನೀಡಿ ಶರೀಫ್ರ ಮೊಮ್ಮಗಳ ವಿವಾಹದಲ್ಲಿ ಭಾಗಿಯಾದರು.
ಪಾಕಿಸ್ತಾನದಲ್ಲಿ ನಿಂತೇ ಪಾಕ್, ಚೀನಾಕ್ಕೆ ಸಚಿವ ಜೈಶಂಕರ್ ತಪರಾಕಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ