
ನೈರೋಬಿ(ಮೇ 30) ಕೊರೋನಾ ವಿರುದ್ಧದ ಹೋರಾಟದಲ್ಲಿ ಜಗತ್ತೇ ಒಂದಾಗಿದೆ. ರಾಷ್ಟ್ರಗಳು ಪರಸ್ಪರ ಸಹಕಾರ ನೀಡಿಕೊಳ್ಳುತ್ತಿವೆ. ಭಾರತಕ್ಕೆ ಕೀನ್ಯಾ 12 ಟನ್ ಆಹಾರ ಉತ್ಪನ್ನ ನೀಡಿದೆ.
ಪೂರ್ವ ಆಫ್ರಿಕಾದ ದೇಶ ಭಾರತಕ್ಕೆ 12 ಟನ್ ಚಹಾ, ಕಾಫಿ, ನೆಲಗಡಲೆಯನ್ನು ಕಳಿಸಿಕೊಟ್ಟಿದೆ. ಭಾರತದ ರೆಡ್ ಕ್ರಾಸ್ ಸಂಸ್ಥೆಗೆ ನೀಡಿದೆ. ಮಹಾರಾಷ್ಟ್ರದಲ್ಲಿ ಈ ಪ್ಯಾಕೇಟ್ ಗಳನ್ನು ವಿತರಿಸಲಾಗುವುದು.
ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ನಾವು ನಿಲ್ಲುತ್ತೇವೆ ಎಂದು ಆಫ್ರಿಕನ್ ಹೈಕಮಿಷನರ್ ವಿಲ್ಲಿ ಬೆಟ್ ತಿಳಿಸಿದ್ದಾರೆ. ಕೀನ್ಯಾಕ್ಕೆ ಧನ್ಯವಾದ ತಿಳಿಸಿರುವ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಉಪಾಧ್ಯಕ್ಷ ಹೋಮಿ ಖುಸ್ರೋಖಾನ್ ಇಂಥ ಬೆಳವಣಿಗೆ ಮಾದರಿ ಎಂದಿದ್ದಾರೆ.
ದೇಶದಲ್ಲಿ ತಗ್ಗಿದ ಕೊರೋನಾ ಪಾಸಿಟಿವಿಟಿ ದರ
ಭಾರತವು ಒಂದೇ ದಿನ 1,65,553 ಹೊಸ ಕೊರೋನಾ ಪ್ರಕರಣ ದಾಖಲಾಗಿದೆ. ಎಲ್ಲ ರಾಜ್ಯಗಳು ಮತ್ತು ಜಿಲ್ಲಾಧಿಕಾರಿಗಳು ತುರ್ತು ಕ್ರಮ ತೆಗೆದುಕೊಂಡಿದ್ದು ಕೊರೋನಾ ಪಾಸಿಟಿವಿಟಿ ದರ ಇಳಿಕೆಯಾಗಿದೆ. ಪಾಸಿಟಿವಿಟಿ ದರವು 9.36 ಪ್ರತಿಶತಕ್ಕೆ ಇಳಿಕೆಯಾಗಿದೆ.
ಸಾವನ್ನಪ್ಪಿದವರ ಸಂಖ್ಯೆ ದೇಶದಲ್ಲಿ 3,25,972 ಕ್ಕೆ ಏರಿದ್ದು, 24 ಗಂಟೆಗಳ ಅವಧಿಯಲ್ಲಿ 3,460 ಸಾವುಗಳು ದಾಖಲಾಗಿವೆ. ಕರ್ನಾಟಕದಲ್ಲಿಯೂ ಕೊರೋನಾ ಕಾರಣಕ್ಕೆ ಕಠಿಣ ನಿಯಮಗಳನ್ನು ಹೇರಲಾಗಿದ್ದು ರಾಜಧಾನಿ ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿಯೂ ಕೊರೋನಾ ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ