
ಕೊಚ್ಚಿ: ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿನ ಪ್ರಮುಖ ಬೆಳವಣಿಗೆಯೊಂದರಲ್ಲಿ, ಆಕೆಯ ಗಲ್ಲು ಶಿಕ್ಷೆಯನ್ನು ಈಗ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಎಂದು ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿರುವ ಭಾರತೀಯ ಗ್ರ್ಯಾಂಡ್ ಮುಫ್ತಿ. ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ತಿಳಿಸಿದೆ.
ಆದಾಗ್ಯೂ, ಯೆಮೆನ್ ಅಧಿಕಾರಿಗಳಿಂದ ಅಧಿಕೃತ ಲಿಖಿತ ಸಂವಹನ ಇನ್ನೂ ಬಂದಿಲ್ಲ ಎಂದು ಸ್ಪಷ್ಟಪಡಿಸಿದೆ.
ಯೆಮೆನ್ನ ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ಅಲ್ಲಿ ಭಾರತೀಯ ಗ್ರಾಂಡ್ ಮುಫ್ತಿಯ ಕೋರಿಕೆಯ ಮೇರೆಗೆ ಶೇಖ್ ಉಮರ್ ಹಫೀಲ್ ತಂಗಲ್ ನೇಮಕ ಮಾಡಿದ ಹಿರಿಯ ಯೆಮೆನ್ ವಿದ್ವಾಂಸರು ಉತ್ತರ ಯೆಮೆನ್ನ ಆಡಳಿತಗಾರರು ಮತ್ತು ಅಂತಾರಾಷ್ಟ್ರೀಯ ರಾಜತಾಂತ್ರಿಕರೊಂದಿಗೆ ಮಧ್ಯಸ್ಥಿಕೆ ವಹಿಸಿದರು.
ಜುಲೈ 16 ರಂದು ಗಲ್ಲು ಜಾರಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಗಿತ್ತು. ಈಗ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದರೊಂದಿಗೆ ಸಭೆ ಮುಕ್ತಾಯವಾಯಿತು. ಮುಂದಿನ ಪ್ರಕ್ರಿಯೆ ಬಗ್ಗೆ ಮತ್ತೆ ಸಭೆ ನಡೆಯಲಿವೆ ಎಂದು ಅದು ಹೇಳಿದೆ.
ವ್ಯಕ್ತಿಯೊಬ್ಬನ ಹತ್ಯೆ ಪ್ರಕರಣದಲ್ಲಿ ನಿಮಿಷಪ್ರಿಯಾಗೆ ಗಲ್ಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ