ಸಿಕ್ಕ ವಾಹನ ಏರಿಇರಾನ್‌ ದೇಶಬಿಡಿ : ಭಾರತೀಯರಿಗೆಸರ್ಕಾರ ಸೂಚನೆ

Kannadaprabha News   | Kannada Prabha
Published : Feb 24, 2026, 05:22 AM IST
Iran

ಸಾರಾಂಶ

‘ಇರಾನ್ ಹಾಗೂ ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಅಲ್ಲಿರುವ ಭಾರತೀಯರು ಭದ್ರತೆ ದೃಷ್ಟಿಯಿಂದ ಲಭ್ಯವಿರುವ ಸಾರಿಗೆ ಮಾರ್ಗಗಳನ್ನು ಬಳಸಿಕೊಂಡು ದೇಶ ತೊರೆಯಬೇಕು’ ಭಾರತೀಯ ರಾಯಭಾರಿ ಕಚೇರಿ ಸೂಚಿಸಿದೆ.

ನವದೆಹಲಿ : ‘ಇರಾನ್ ಹಾಗೂ ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಅಲ್ಲಿರುವ ಭಾರತೀಯರು ಭದ್ರತೆ ದೃಷ್ಟಿಯಿಂದ ಲಭ್ಯವಿರುವ ಸಾರಿಗೆ ಮಾರ್ಗಗಳನ್ನು ಬಳಸಿಕೊಂಡು ದೇಶ ತೊರೆಯಬೇಕು’ ಭಾರತೀಯ ರಾಯಭಾರಿ ಕಚೇರಿ ಸೂಚಿಸಿದೆ.

ಜ.5ರಂದು ಇರಾನ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಾಗ ಎಚ್ಚರಿಕೆ

ಜ.5ರಂದು ಇರಾನ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಾಗ ಭಾರತೀಯರಿಗೆ ರಾಯಭಾರಿ ಕಚೇರಿ, ಪ್ರಯಾಣ ಎಚ್ಚರಿಕೆ ನೀಡಿತ್ತು. ಇದೀಗ ಇರಾನ್‌ ಮೇಲೆ ಅಮೆರಿಕ ಯುದ್ಧ ಸಾರುವ ಭೀತಿ ಸೃಷ್ಟಿ ಆಗಿರುವ ಕಾರಣ ಹೊಸ ಸಲಹಾವಳಿ ಬಿಡುಗಡೆ ಮಾಡಿದೆ. ಸದ್ಯ ಇರಾನ್‌ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 10,000 ಭಾರತೀಯರಿದ್ದಾರೆ.

‘ಇರಾನ್‌ನಲ್ಲಿನ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಲ್ಲಿರುವ ಭಾರತೀಯ ಪ್ರಜೆಗಳು ವಾಣಿಜ್ಯ ವಿಮಾನ ಸೇರಿದಂತೆ ಲಭ್ಯವಿರುವ ಸಾರಿಗೆ ವಿಧಾನಗಳ ಮೂಲಕ ಇರಾನ್‌ ಬಿಟ್ಟು ತೆರಳಬೇಕು. ಪ್ರತಿಭಟನೆ ನಡೆಯುತ್ತಿರುವ ಸ್ಥಳಗಳಿಂದ ದೂರವಿರಬೇಕು. ಪಾಸ್‌ಪೋರ್ಟ್‌, ಗುರುತಿನ ಚೀಟಿ ಸೇರಿದಂತೆ ಪ್ರಯಾಣ ಮತ್ತು ವಲಸೆ ದಾಖಲೆಗಳನ್ನು ತಮ್ಮ ಬಳಿಯೇ ಇಟ್ಟುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಸಂಪರ್ಕದಲ್ಲಿರಬೇಕು’ ಎಂದು ಅದು ಸೂಚಿಸಿದೆ.

ಲೆಬನಾನ್‌ನಲ್ಲಿನ ಅಮೆರಿಕ ಸಿಬ್ಬಂದಿ ತೆರವು:

ಇರಾನ್‌ ಮೇಲೆ ದಾಳಿ ಸಾಧ್ಯತೆ ಬೆನ್ನಲ್ಲೇ ಅಮೆರಿಕವು ಪಕ್ಕದ ಲೆಬನಾನ್‌ನಲ್ಲಿನ ತನ್ನ ರಾಯಭಾರ ಕಚೇರಿ ಸಿಬ್ಬಂದಿಯನ್ನು ಅಮೆರಿಕ ತೆರವು ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕುಖ್ಯಾತ ಡ್ರಗ್ಸ್‌ ದೊರೆ ಹತ್ಯೆ : ಯಾರು ಮಂಚೋ? ಡ್ರಗ್‌ ಲಾರ್ಡ್‌ ಆಗಿದ್ದು ಹೇಗೆ?
ಗಂಟೆಗೆ 1670 KM ವೇಗದಲ್ಲಿ ಭೂಮಿ ತಿರುಗುವ ಅದ್ಭುತ ದೃಶ್ಯ ಸೆರೆ, ಆದ್ರೂ ಅನಭವಕ್ಕೆ ಬರ್ತಿಲ್ಲ ಏಕೆ?