ಈದ್‌ ಪ್ರಾರ್ಥನೆ ಬಳಿಕ 'ಧುರಂದರ್‌' ದಾಳಿಗೆ ಮರ್ಕಜ್ ತೈಬಾ ಮಸೀದಿಯಲ್ಲೇ ಪ್ರಾಣಬಿಟ್ಟ ಲಷ್ಕರ್‌ ಕಮಾಂಡರ್‌ ಬಿಲಾಲ್‌ ಆರಿಫ್‌ ಸಲಾಫಿ?

Published : Mar 21, 2026, 07:17 PM ISTUpdated : Mar 21, 2026, 07:22 PM IST
LeT Commander Bilal Arif Salafi

ಸಾರಾಂಶ

ಪಾಕಿಸ್ತಾನದ ಮುರಿದ್ಕೆಯಲ್ಲಿರುವ ಲಷ್ಕರ್-ಎ-ತೈಬಾ ಕೇಂದ್ರದೊಳಗೆ, ಅಪರಿಚಿತ ದುಷ್ಕರ್ಮಿಗಳು ಸಂಘಟನೆಯ ಕಮಾಂಡರ್ ಬಿಲಾಲ್ ಆರಿಫ್ ಸಲಾಫಿಯನ್ನು ಗುಂಡಿಕ್ಕಿ ಮತ್ತು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. 

ಮುರಿದ್ಕೆ, ಪಾಕಿಸ್ತಾನ (ಮಾ.21): ಪಾಕಿಸ್ತಾನದ ಮುರಿದ್ಕೆಯಲ್ಲಿರುವ ಲಷ್ಕರ್-ಎ-ತೈಬಾ (LeT) ಸಂಘಟನೆಯ ಪ್ರಮುಖ ಕೇಂದ್ರವಾದ 'ಮರ್ಕಜ್ ತೈಬಾ'ದ ಒಳಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು, ಸಂಘಟನೆಯ ಕಮಾಂಡರ್ ಬಿಲಾಲ್ ಆರಿಫ್ ಸಲಾಫಿಯನ್ನು ಗುಂಡಿಕ್ಕಿ ಮತ್ತು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಈದ್ ಉಲ್ ಫಿತರ್ ಪ್ರಾರ್ಥನೆ ಮುಗಿದ ಕೆಲವೇ ಕ್ಷಣಗಳಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಮರ್ಕಜ್ ತೈಬಾದ ಒಳಗೆ ಬಿಲಾಲ್ ಆರಿಫ್ ಸಲಾಫಿ ಇದ್ದ ಸಂದರ್ಭದಲ್ಲಿ ನುಗ್ಗಿದ ಅಪರಿಚಿತ ಬಂದೂಕುಧಾರಿಗಳು ಆತನ ಮೇಲೆ ಮನಸೋಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಚಾಕುವಿನಿಂದಲೂ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಕುರಿತಾದ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಇದರ ಸತ್ಯಾಸತ್ಯತೆಯನ್ನು ಪರಿಶೀಲನೆ ಮಾಡಲಾಗಿಲ್ಲ

ವೈರಲ್ ಆದ ವಿಡಿಯೋಗಳು

ಘಟನೆಯ ನಂತರದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವಿಡಿಯೋದಲ್ಲಿ ಬಿಲಾಲ್ ಆರಿಫ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಮತ್ತು ಸುತ್ತಲೂ ನೆರೆದಿದ್ದ ಜನರು ಗಾಬರಿಯಿಂದ ಆತನನ್ನು ಎತ್ತಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ದಾಳಿ ನಡೆದ ಕೂಡಲೇ ಅಲ್ಲಿ ನೆರೆದಿದ್ದ ಜನರಲ್ಲಿ ತೀವ್ರ ಆತಂಕ ಮತ್ತು ಕಾಲ್ತುಳಿತದಂತಹ ವಾತಾವರಣ ನಿರ್ಮಾಣವಾಗಿತ್ತು.

ದಾಳಿಯ ಹಿಂದಿನ ಉದ್ದೇಶ ನಿಗೂಢ

ಈ ಹತ್ಯೆಯ ಹಿಂದೆ ಯಾರ ಕೈವಾಡವಿದೆ ಮತ್ತು ಹತ್ಯೆಗೆ ನಿಖರವಾದ ಕಾರಣವೇನು ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಪಾಕಿಸ್ತಾನದ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುವ ನಿರೀಕ್ಷೆಯಿದೆ. ಕಳೆದ ಕೆಲವು ತಿಂಗಳುಗಳಿಂದ ಪಾಕಿಸ್ತಾನದಲ್ಲಿ ಭಾರತ ವಿರೋಧಿ ಭಯೋತ್ಪಾದಕ ಸಂಘಟನೆಗಳ ಪ್ರಮುಖ ನಾಯಕರನ್ನು 'ಅಪರಿಚಿತ ವ್ಯಕ್ತಿಗಳು' (Unknown Men) ಗುರಿಯಾಗಿಸಿ ಹತ್ಯೆ ಮಾಡುತ್ತಿರುವ ಸರಣಿ ಘಟನೆಗಳ ಮುಂದುವರಿದ ಭಾಗವಾಗಿ ಇದು ಕಂಡುಬಂದಿದೆ.

ಉಗ್ರ ಬಿಲಾಲ್‌ ಆರಿಫ್‌ನ ಕೆಲಸ ಏನಾಗಿತ್ತು

ಬಿಲಾಲ್ ಆರಿಫ್ ಸಲಾಫಿ ಲಷ್ಕರ್-ಎ-ತೈಬಾದ ಉನ್ನತ ಶ್ರೇಣಿಯ ಕಮಾಂಡರ್ ಆಗಿದ್ದ. ಸೋಶಿಯಲ್‌ ಮೀಡಿಯಾ ಪೋಸ್ಟ್‌ಗಳ ಆಧಾರದಲ್ಲಿ ಹೇಳೋದಾದರೆ, ಈತ ಮುರಿದ್ಕೆ ಕೇಂದ್ರದಲ್ಲಿ ಪ್ರಾಥಮಿಕ ನೇಮಕಾತಿ ಮಾಡುವ ಜವಾಬ್ದಾರಿ ಹೊಂದಿದ್ದ.ಪಾಕಿಸ್ತಾನದಾದ್ಯಂತದ ಯುವಕರನ್ನು "ಕಾಶ್ಮೀರ ಜಿಹಾದ್" ಗೆ ಸೇರಲು ಗುರುತಿಸಿ ಮೂಲಭೂತವಾದಿಗಳನ್ನಾಗಿ ಮಾಡುವ ಜವಾಬ್ದಾರಿಯನ್ನು ಹೊಂದಿದ್ದ ಎನ್ನಲಾಗದೆ. ಸೈದ್ಧಾಂತಿಕ ತರಬೇತಿ ನೀಡಲು ಈತ ಮರ್ಕಜ್ ತೈಬಾವನ್ನು ನೆಲೆಯಾಗಿ ಬಳಸಿಕೊಂಡಿದ್ದ ಎಂದು ಆರೋಪಿಸಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹಿಂದೂ ಮಹಾಸಾಗರದ ಯುಎಸ್‌-ಯುಕೆ ನೆಲೆ ಮೇಲೆ ಇರಾನ್‌ ದಾಳಿ, ಕ್ಷಿಪಣಿ ಪ್ರಯಾಣಿಸಿದ ದೂರ ನೋಡಿ ಬೆಚ್ಚಿಬಿದ್ದ ಅಮೆರಿಕ!
ಕಳೆದ 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈದ್ ಸಂಭ್ರಮಕ್ಕೆ ತೆರೆಯದ ಅಲ್‌ ಅಕ್ಸಾ ಮಸೀದಿ ಬಾಗಿಲು!