ರೈತ ಹೋರಾಟಕ್ಕೆ ಪಾಕ್‌ನ ಮಲಾಲಾ ಬೆಂಬಲ

Kannadaprabha News   | Asianet News
Published : Mar 01, 2021, 09:56 AM IST
ರೈತ ಹೋರಾಟಕ್ಕೆ ಪಾಕ್‌ನ ಮಲಾಲಾ ಬೆಂಬಲ

ಸಾರಾಂಶ

ಪಾಕಿಸ್ತಾನದ ಹೋರಾಟಗಾರ್ತಿ ಹಾಗೂ ನೊಬೆಲ್‌ ಪ್ರಶಸ್ತಿ ವಿಜೇತೆ ಮಲಾಲಾ ಯೂಸುಫ್‌ಝೈ  ರೈತ ಹೋರಾಟಕ್ಕೆ ಪರೋಕ್ಷ ಬೆಂಬಲ ವ್ಯಕ್ತಪಡಿಸಿದ್ದಾರೆ. 

ನವದೆಹಲಿ (ಮಾ.01):  ಭಾರತದಲ್ಲಿ ನಡೆದಿರುವ ರೈತರ ಹೋರಾಟಕ್ಕೆ ಪಾಕಿಸ್ತಾನದ ಹೋರಾಟಗಾರ್ತಿ ಹಾಗೂ ನೊಬೆಲ್‌ ಪ್ರಶಸ್ತಿ ವಿಜೇತೆ ಮಲಾಲಾ ಯೂಸುಫ್‌ಝೈ ಪರೋಕ್ಷ ಬೆಂಬಲ ವ್ಯಕ್ತಪಡಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ದನಿ ಎತ್ತಿದ ಹೋರಾಟಗಾರರ ಬಂಧನ ಹಾಗೂ ಇಂಟರ್‌ನೆಟ್‌ ನಿರ್ಬಂಧವನ್ನು ಪ್ರಶ್ನಿಸಿದ್ದಾರೆ.

ತಮ್ಮ ಕುರಿತ ಪುಸ್ತಕವೊಂದರ ಕಾರ್ಯಕ್ರಮದಲ್ಲಿ ವರ್ಚುವಲ್‌ ಭಾಷಣ ಮಾಡಿದ ಅವರು, ‘ಭಾರತದಲ್ಲಿ ಇಂಟರ್ನೆಟ್‌ ನಿರ್ಬಂಧ ಹಾಗೂ ಶಾಂತಿಯುತ ಹೋರಾಟ ಮಾಡುತ್ತಿರುವ ಕಾರ್ಯಕರ್ತರ ಬಂಧನ ಕಳವಳಕಾರಿ’ ಎಂದರು. ಈ ಮೂಲಕ ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಿಶಾ ರವಿ ಬಂಧನವನ್ನು ಪರೋಕ್ಷವಾಗಿ ಖಂಡಿಸಿದರು.

ನೊಬೆಲ್‌ ಶಾಂತಿ ಪುರಸ್ಕೃತೆ ಮಲಾಲಾಗೆ ತಾಲಿಬಾನ್‌ ಮತ್ತೆ ಹತ್ಯೆ ಬೆದರಿಕೆ! .

‘ನೀವು ಒಬ್ಬರ ರಾಜಕೀಯ ಅಭಿಪ್ರಾಯವನ್ನು ಒಪ್ಪದೇ ಇರಬಹುದು. ಆದರೆ ಹಾಗಂತ ಅವರನ್ನು ಜೈಲಿಗೆ ತಳ್ಳುವುದು ಸರಿಯಲ್ಲ. ಪ್ರಜಾಸತ್ತೆಯಲ್ಲಿ ಮಹಿಳೆಯರು, ಬಾಲಕಿಯರು ತಮ್ಮದೇ ಆದ ಅಭಿಪ್ರಾಯ ವ್ಯಕ್ತಪಡಿಸಲು ಸ್ವತಂತ್ರರು. ಹೀಗಾಗಿ ಸರ್ಕಾರವು ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡಿ, ಅವರ ದನಿ ಕೇಳುತ್ತದೆ ಎಂಬ ವಿಶ್ವಾಸ ನನ್ನದು’ ಎಂದರು.

ಈ ನಡುವೆ, ‘ಪಾಕಿಸ್ತಾನ-ಭಾರತ ನೈಜ ಸ್ನೇಹಿತರಾಗುವುದನ್ನು ನೋಡುವುದು ನನ್ನ ಕನಸು’ ಎಂದ ಮಲಾಲಾ, ‘ಭಾರತ-ಪಾಕ್‌ನಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಮಾಡಬೇಕು’ ಎಂದು ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಾರಿ ಸದ್ದು ಮಾಡ್ತಿದೆ ಪುಟಿನ್​ ತಂದ ಸೂಟ್​ಕೇಟ್: ಅದರ ಹಿಂದಿದೆ ಊಹೆಗೆ ನಿಲುಕದ ವಿಚಿತ್ರ ಸ್ಟೋರಿ! ಏನಿದೆ ಅದರಲ್ಲಿ?
ಪಾಕಿಸ್ತಾನ ಪುಸ್ತಕ ಮೇಳ: ಸೇಲ್ ಆದ ಪುಸ್ತಕ ಬರೀ 35, ಖಾಲಿಯಾದ ಬಿರಿಯಾನಿ, ಶವರ್ಮಾ ಎಷ್ಟು ಕೇಳಿದ್ರೆ ಗಾಬರಿ ಆಗ್ತೀರಿ