ಚೀನಾದಿಂದ ಮಾಲ್ಡೀವ್ಸ್ ಪ್ರಜೆಗಳ ರಕ್ಷಣೆ: ಥ್ಯಾಂಕ್ಯೂ ಇಂಡಿಯಾ ಎಂದ ಅಧ್ಯಕ್ಷ!

Suvarna News   | Asianet News
Published : Feb 02, 2020, 06:30 PM IST
ಚೀನಾದಿಂದ ಮಾಲ್ಡೀವ್ಸ್ ಪ್ರಜೆಗಳ ರಕ್ಷಣೆ: ಥ್ಯಾಂಕ್ಯೂ ಇಂಡಿಯಾ ಎಂದ ಅಧ್ಯಕ್ಷ!

ಸಾರಾಂಶ

ಕರೋನಾ ವೈರಸ್ ಭೀತಿ ಎದುರಿಸುತ್ತಿರುವ ಚೀನಾ| ವುಹಾನ್’ನಿಂದ ಮಾಲ್ಡೀವ್ಸ್ ಪ್ರಜೆಗಳನ್ನು ರಕ್ಷಿಸಿದ ಭಾರತ| ಭಾರತಕ್ಕೆ ಧನ್ಯವಾದ ಸಲ್ಲಿಸಿದ ಮಾಲ್ಡೀವ್ಸ್ ಅಧ್ಯಕ್ಷ| ಧನ್ಯವಾದ ಅರ್ಪಿಸಿ ಟ್ವೀಟ್ ಮಾಡಿದ ಬ್ರಾಹಿಂ ಮೊಹ್ಮದ್ ಸೋಲಿಹ್| ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಜೈಶಂಕರ್’ಗೆ ಸೋಲಿಹ್ ಧನ್ಯವಾದ| ‘ಮಾಲ್ಡೀವ್ಸ್ ಮತ್ತು ಭಾರತದ ನಡುವಿನ ಸೌಹಾರ್ಧ ಸಂಬಂಧಕ್ಕೆ ಉದಾಹರಣೆ’|

ನವದೆಹಲಿ(ಫೆ.02): ಕರೋನಾ ವೈರಸ್ ಭೀತಿ ಎದುರಿಸುತ್ತಿರುವ ಚೀನಾದಿಂದ ಮಾಲ್ಡೀವ್ಸ್ ಪ್ರಜೆಗಳನ್ನು ಭಾರತ ರಕ್ಷಿಸಿದ್ದು, ಇದಕ್ಕಾಗಿ ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹ್ಮದ್ ಸೋಲಿಹ್ ಭಾರತಕ್ಕೆ ಧನ್ಯವಾದ ಹೇಳಿದ್ದಾರೆ.

ಚೀನಾದ ವುಹಾನ್’ನಿಂದ ಏರ್ ಇಂಡಿಯಾದ ಬೋಯಿಂಗ್ 747 ವಿಮಾನದಲ್ಲಿ ನವದೆಹಲಿಗೆ ಬಂದಿಳಿದ  324 ಜನರ ಪೈಕಿ 7 ಜನ ಮಾಲ್ಡೀವ್ಸ್ ಪ್ರಜೆಗಳಾಗಿದ್ದಾರೆ.

ತನ್ನ ಪ್ರಜೆಗಳನ್ನು ರಕ್ಷಿಸಿದ ಭಾರತಕ್ಕೆ ಧನ್ಯವಾದ ಸಲ್ಲಿಸುವುದಾಗಿ ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹ್ಮದ್ ಸೋಲಿಹ್ ಟ್ವೀಟ್ ಮಾಡಿದ್ದಾರೆ.

ಚೀನಿ ನಾಗರಿಕರಿಗೆ ತಾತ್ಕಾಲಿಕವಾಗಿ ಆನ್‌ಲೈನ್ ವೀಸಾ ನಿರಾಕರಿಸಿದ ಭಾರತ!

ಕರೋನಾ ವೈರಸ್ ಪೀಡಿತ ಚೀನಾದ ವುಹಾನ್’ನಲ್ಲಿ ಅಪಾಯಕ್ಕೆ ಸಿಲುಕಿದ್ದ ಮಾಲ್ಡೀವ್ಸ್ ಪ್ರಜೆಗಳನ್ನು ಸುರಕ್ಷಿತ ಸ್ಶಳಕ್ಕೆ ರವಾನಿಸಿರುವ ಭಾರತಕ್ಕೆ ಧನ್ಯವಾದ ೆಂಧು ಸೋಲಿಹ್ ಟ್ವೀಟ್ ಮಾಡಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ, ಭಾರತದ ವಿದೇಶಾಂಗ ಸಚಿವ ಜೈ ಶಂಕರ್ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಸೋಲಿಹ್ ಹೇಳಿದ್ದಾರೆ.

ಚೀನಾದಿಂದ ವಾಪಸ್ಸಾದವರಿಗೆ 14 ದಿನ ಆಸ್ಪತ್ರೆ ವಾಸ ಕಡ್ಡಾಯ!

ಭಾರತದ ಈ ಕಾರ್ಯ ಮಾಲ್ಡೀವ್ಸ್ ಮತ್ತು ಭಾರತದ ನಡುವಿನ ಸೌಹಾರ್ಧ ಸಂಬಂಧಕ್ಕೆ ಉದಾಹರಣೆಯಾಗಿದೆ ಎಂದು ಸೋಲಿಹ್ ಸಂತಸ ವ್ಯಕ್ತಪಡಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಾರತೀಯರ ಎಚ್‌-1ಬಿ ವೀಸಾ ಸಂದರ್ಶನ ದಿಢೀರ್‌ ರದ್ದು : ಕಿಡಿ
ಯುನೆಸ್ಕೋ ಪರಂಪರೆ ಪಟ್ಟಿಗೆ ದೀಪಾವಳಿ ಸೇರ್ಪಡೆ!