
ಪಿಟಿಐ ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿರುವಾಗಲೇ ಪ್ರಾಣಾರ್ಪಣೆ ಮಾಡಿದ ಭಾರತದ 177 ಸೇರಿ ವಿಶ್ವದ ವಿವಿಧ ದೇಶಗಳ 4200 ಯೋಧರನ್ನು ಗೌರವಿಸಲು ವಿಶ್ವಸಂಸ್ಥೆಯಲ್ಲಿ ಗೋಡೆ ಸ್ಮಾರಕವೊಂದನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಭಾರತ ಮಂಡನೆ ಮಾಡಿದ್ದ ನಿರ್ಣಯ ಸರ್ವಾನುಮತದಿಂದ ಆಯ್ಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜೂ.21ರಿಂದ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದು, ಮೊದಲ ದಿನವೇ ವಿಶ್ವಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಕ್ಕೂ ಮುನ್ನ ಹುತಾತ್ಮ ಯೋಧರನ್ನು ಗೌರವಿಸಲು ಭಾರತ ಮಂಡನೆ ಮಾಡಿದ್ದ ನಿರ್ಣಯ 190 ದೇಶಗಳ ಬೆಂಬಲದೊಂದಿಗೆ ಸರ್ವಾನುಮತದಿಂದ ಅಂಗೀಕಾರವಾಗಿರುವುದು ರಾಯಭಾರ ಅಧಿಕಾರಿಗಳ ಹಿರಿಮೆಗೆ ಪಾತ್ರವಾಗಿದೆ.
ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗಳು (peacekeeping force) ಸೈಪ್ರಸ್ (Cyprus), ಕಾಂಗೋ(Congo), ಲೆಬನಾನ್(Lebanon), ಮಧ್ಯಪ್ರಾಚ್ಯ(Middle East), ಪಶ್ಚಿಮ ಸಹಾರಾ ಹಾಗೂ ಕೇಂದ್ರ ಆಫ್ರಿಕಾದಲ್ಲಿ ನಿಯೋಜನೆಯಾಗಿವೆ. ಈ ಶಾಂತಿಪಾಲನಾ ಪಡೆಗೆ ಅತಿ ಹೆಚ್ಚು ಯೋಧರನ್ನು ಕಳುಹಿಸುವ 3ನೇ ದೇಶ ಭಾರತವಾಗಿದ್ದು, ಹಾಲಿ 6000 ಯೋಧರು ಹಾಗೂ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ನಿರ್ಣಯ ಅಂಗೀಕಾರವಾದ 3 ವರ್ಷದೊಳಗೆ ಸ್ಮಾರಕ ನಿರ್ಮಾಣ ಪೂರ್ಣಗೊಳ್ಳಬೇಕಾಗುತ್ತದೆ. ನಿರ್ಣಯವನ್ನು ಬೆಂಬಲಿಸಿದ ದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಧನ್ಯವಾದ ಸಲ್ಲಿಸಿದ್ದಾರೆ.
ಅಪ್ಪ ನನಗೇನೂ ಬೇಡಾ, ನೀನು ಎದ್ದು ಬಾ: ಹುತಾತ್ಮ ಯೋಧನ ಪುತ್ರಿಯ ಕಣ್ಣೀರು
ಮನ್ ಕೀ ಬಾತ್ಗೆ 100ರ ಸಂಭ್ರಮ: ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ನೇರ ಪ್ರಸಾರ; ಪ್ರತಿ ಸಂಚಿಕೆಯೂ ವಿಶೇಷ ಎಂದ ನಮೋ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ