ಡೊಮಿನಿಕಾ ಜೈಲಿನಲ್ಲಿ ವಂಚಕ ಚೋಕ್ಸಿ: ಕೈಗಳಲ್ಲಿ ಗಾಯ, ಫೋಟೋ ಬಹಿರಂಗ!

Published : May 30, 2021, 04:13 PM ISTUpdated : May 30, 2021, 04:57 PM IST
ಡೊಮಿನಿಕಾ ಜೈಲಿನಲ್ಲಿ ವಂಚಕ ಚೋಕ್ಸಿ: ಕೈಗಳಲ್ಲಿ ಗಾಯ, ಫೋಟೋ ಬಹಿರಂಗ!

ಸಾರಾಂಶ

* ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,500 ಕೋಟಿ ರೂ. ವಂಚಿಸಿ ಭಾರತದಿಂದ ತಲೆಮರೆಸಿಕೊಂಡಿದ್ದ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ * ಡೊಮಿನಿಕಾದಲ್ಲಿ ಜೈಲಿನಲ್ಲಿರುವ ಚಿತ್ರ ಬಿಡುಗಡೆ * ಊದಿದ ಕಣ್ಣುಗಳು, ಕೈಗಳಿಗೆ ಗಾಯಗಳಾಗಿರುವ ಚೋಕ್ಸಿ ಫೋಟೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ 

ಡೊಮಿನಿಕಾ(ಮೇ.30) ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,500 ಕೋಟಿ ರೂ. ವಂಚಿಸಿ ಭಾರತದಿಂದ ತಲೆಮರೆಸಿಕೊಂಡಿದ್ದ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಸದ್ಯ ಡೊಮಿನಿಕಾದಲ್ಲಿ ಜೈಲಿನಲ್ಲಿರುವ ಚಿತ್ರ ಬಿಡುಗಡೆಯಾಗಿದೆ. ಚೋಕ್ಸಿಯನ್ನು ಭಾರತಕ್ಕೆ ವಿಚಾರಣೆಗೆ ಕಳಿಸುವಂತೆ ಅಧಿಕೃತವಾಗಿ ಮನವಿ ಸಲ್ಲಿಸಲಾಗಿದೆ. ಊದಿದ ಕಣ್ಣುಗಳು, ಕೈಗಳಿಗೆ ಗಾಯಗಳಾಗಿರುವ ಚೋಕ್ಸಿ ಫೋಟೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 ದಿನದಲ್ಲಿ ಚೋಕ್ಸಿ ಭಾರತಕ್ಕೆ ಗಡಿಪಾರು?

ಪಂಜಾಬ್ ನ್ಯಾಷನಲ್ ಬ್ಯಾಂಕಿನ ಮುಂಬೈ ಶಾಖೆಯೊಂದರಲ್ಲಿ 13,500 ಕೋಟಿ ರೂ.ಗಳ ವಂಚನೆ ಮತ್ತು ಅಕ್ರಮ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿ ಜತೆಗೆ ಮೆಹುಲ್ ಚೊಕ್ಸಿ ಕೂಡಾ ಆರೋಪಿಯಾಗಿದ್ದರು. ಸದ್ಯ ಕೆರಿಬಿಯನ್ ದ್ವೀಪ ರಾಷ್ಟ್ರ ಆಂಟಿಗ್ವಾ ಹಾಗೂ ಬರ್ಬುಡಾದಲ್ಲಿ ಇವರು ಪೌರತ್ವ ಪಡೆದುಕೊಂಡಿದ್ದಾರೆ.

ಪಿಎನ್‌ಬಿ ವಂಚಕ ಮೇಹುಲ್‌ ಚೋಕ್ಸಿ ವಿದೇಶದಿಂದಲೂ ಪರಾರಿ!

 ಇನ್ನು ಡೊಮಿನಿಕಾದ ರಾಷ್ಟ್ರೀಯ ಭದ್ರತಾ ಸಚಿವಾಲಯ ಮತ್ತು ಗೃಹ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಅಕ್ರಮ ಪ್ರವೇಶ ಮಾಡಿದ್ದರಿಂದ ಚೋಕ್ಸಿಯನ್ನು ಬಂಧಿಸಲಾಗಿತ್ತು. ಅಲ್ಲದೇ ಚೋಕ್ಸಿಯ ಪೌರತ್ವವನ್ನು ಖಚಿತಪಡಿಸಿಕೊಳ್ಳಲು ಆಂಟಿಗ್ವಾ ಮತ್ತು ಬಾರ್ಬುಡಾ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಆಂಟಿಗ್ವಾ ಅಧಿಕಾರಿಗಳು ಮಾಹಿತಿ ಕೊಟ್ಟ ಬಳಿಕ, ಮೆಹುಲ್​ ಚೋಕ್ಸಿಯನ್ನು ಆಂಟಿಗ್ವಾಗೆ  ಕಳುಹಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದೆ.

ಕಳೆದ ವಾರ ನಾಪತ್ತೆಯಾಗಿದ್ದ ಚೋಕ್ಸಿ

ಕಳೆದ ಸೋಮವಾರ ಸಂಜೆ ಆಂಟಿಗುವಾ ದ್ವೀಪದಿಂದ ನಾಪತ್ತೆಯಾಗಿದ್ದ  ಮೆಹುಲ್ ಚೋಕ್ಸಿ ಕ್ಯೂಬಾಕ್ಕೆ ಪಲಾಯನ ಮಾಡುವ ಸಂದರ್ಭದಲ್ಲಿ ಡೊಮಿನಿಕಾ ದ್ವೀಪದಲ್ಲಿ ಬಂಧಿಸಲಾಗಿದೆ. ಆಂಟಿಗ್ವಾ ಪೊಲೀಸರು ಡೊಮಿನಿಕಾದಲ್ಲಿ ಮೆಹುಲ್ ಚೋಕ್ಸಿಯನ್ನು ಬಂಧಿಸಿದ್ದರು. 

ಮಲ್ಯ, ನೀರವ್, ಚೋಕ್ಸಿ; ಪರಾರಿಯಾದ ಉದ್ಯಮಿಗಳಿಗೆ ಭಾರತದ ಬಿಗಿ ಕಾನೂನು ಕುಣಿಕೆ!

ಡೊಮಿನಿಕಾಗೆ ವಿಮಾನ ಕಳುಹಿಸಿದ ಭಾರತ

ಮೆಹುಲ್ ಚೋಕ್ಸಿ ಗಡಿಪಾರಿಗೆ ಸಂಬಂಧಿಸಿದ ದಾಖಲಾತಿ ಇರುವ ಖಾಸಗಿ  ವಿಮಾನವೊಂದನ್ನು ಭಾರತ ಕಳುಹಿಸಿದೆ ಎಂದು ಆಂಟಿಗ್ವಾ ಮತ್ತು ಬರ್ಬುಡಾ ಪ್ರಧಾನ ಮಂತ್ರಿ ಗಾಸ್ಟನ್ ಬ್ರೌನ್ ಆ ದೇಶದ ರೆಡಿಯೋವೊಂದಕ್ಕೆ ಹೇಳಿದ್ದಾರೆ. ಕತಾರ್ ಏರ್ ವೆಸ್ ನ ಖಾಸಗಿ ವಿಮಾನವೊಂದು ಡೊಮಿನಿಕಾದ ಡೌಗ್ಲಾಸ್-ಚಾರ್ಲ್ಸ್  ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿರುವುದಾಗಿ ಅಂಟಿಗುವಾ ನ್ಯೂಸ್ ರೂಮ್ ವರದಿ ಮಾಡಿದೆ. ಹೀಗಿದ್ದರೂ ಭಾರತದ ಆಡಳಿತದಿಂದ ಅಧಿಕೃತ ಮಾಹಿತಿ ಹೊರಬಿದಿಲ್ಲ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭೂಕಂಪದ ಬೆನ್ನಲ್ಲೇ ಜಪಾನ್‌ನಲ್ಲಿ ಸುನಾಮಿ ಎಚ್ಚರಿಕೆ, ಭಾರತದ ಕರಾವಳಿ ಪ್ರದೇಶಕ್ಕಿದೆಯಾ ಆತಂಕ?
ಪ್ರದರ್ಶನದ ವೇಳೆ ಝೂನಲ್ಲಿ ಆರೈಕೆ ಮಾಡ್ತಿದ್ದವರ ಮೇಲೆಯೇ ಕರಡಿ ಅಟ್ಯಾಕ್: ವೀಡಿಯೋ