ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ ನನ್ನ ಮಂತ್ರ, ಭ್ರಷ್ಟಾಚಾರ ಮಕ್ತ ಸರ್ಕಾರ ಇಂದಿನ ಅಗತ್ಯ: ಮೋದಿ

Published : Feb 15, 2024, 07:48 AM IST
ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ ನನ್ನ ಮಂತ್ರ,  ಭ್ರಷ್ಟಾಚಾರ ಮಕ್ತ ಸರ್ಕಾರ ಇಂದಿನ ಅಗತ್ಯ: ಮೋದಿ

ಸಾರಾಂಶ

‘ಕನಿಷ್ಟ ಸರ್ಕಾರ ಗರಿಷ್ಠ ಆಡಳಿತ’ ಎಂಬುದು ನನ್ನ ಮಂತ್ರವಾಗಿದೆ. ಭಾರತ ಸರ್ಕಾರದ ಉದ್ದೇಶ ಮತ್ತು ಬದ್ಧತೆಯ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲದೆ ಭ್ರಷ್ಟಾಚಾರ ಮಕ್ತ ಸರ್ಕಾರ ಇಂದಿನ ಅಗತ್ಯ ಎಂದಿದ್ದಾರೆ.

ದುಬೈ: ‘ಕನಿಷ್ಟ ಸರ್ಕಾರ ಗರಿಷ್ಠ ಆಡಳಿತ’ ಎಂಬುದು ನನ್ನ ಮಂತ್ರವಾಗಿದೆ. ಭಾರತ ಸರ್ಕಾರದ ಉದ್ದೇಶ ಮತ್ತು ಬದ್ಧತೆಯ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲದೆ ಭ್ರಷ್ಟಾಚಾರ ಮಕ್ತ ಸರ್ಕಾರ ಇಂದಿನ ಅಗತ್ಯ ಎಂದಿದ್ದಾರೆ.

ತಮ್ಮ ಯುಎಇ ಪ್ರವಾಸದ 2ನೇ ದಿನದಂದು ದುಬೈನಲ್ಲಿ ವಿಶ್ವ ಆಡಳಿತಗಳ ಶೃಂಗಸಭೆಯಲ್ಲಿ ಮಾತನಾಡಿದ ಮೋದಿ ಇಂದು ಜಗತ್ತಿಗೆ ಎಲ್ಲರನ್ನೂ ಒಳಗೊಳ್ಳುವ, ಎಲ್ಲರನ್ನು ಕರೆದುಕೊಂಡು ಹೋಗುವ ಸ್ವಚ್ಛ ಸರ್ಕಾರ ಬೇಕು ಮತ್ತು ಭ್ರಷ್ಟಾಚಾರ ಮುಕ್ತವಾಗಿರುವ ಸರ್ಕಾರಗಳ ಅಗತ್ಯವಿದೆ. ಭಾರತದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಸರ್ಕಾರದ ಮೇಲೆ ಜನರ ನಂಬಿಕೆ ಹೆಚ್ಚಾಗಿದೆ. ನಾವು ಸಾರ್ವಜನಿಕ ಭಾವನೆಗಳಿಗೆ ಆದ್ಯತೆ ನೀಡಿದ್ದರಿಂದ ಮಾತ್ರ ಇದು ಸಾಧ್ಯವಾಯಿತು ಎಂದಿದ್ದಾರೆ.

ನಾನು ಭಾರತ ಮಾತೆಯ ಪೂಜಾರಿ, ಅಬುಧಾಬಿ ಹಿಂದೂ ಮಂದಿರ ಉದ್ಘಾಟಿಸಿ ಮೋದಿ ಭಾಷಣ!

ಅಲ್ಲದೇ ಗುಜರಾತ್‌ ಮುಖ್ಯಮಂತ್ರಿಯಾಗಿ ಹಾಗೂ ಭಾರತದ ಪ್ರಧಾನಿಯಾಗಿ 23 ವರ್ಷಗಳನ್ನು ಸರ್ಕಾರದಲ್ಲಿ ಕಳೆದಿದ್ದೇನೆ. ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ ಎಂಬುದು ನನ್ನ ಮಂತ್ರವಾಗಿದೆ. ನಮ್ಮ ಸರ್ಕಾರವು ಭಾರತೀಯ ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಪರಿಸ್ಥಿತಿಗಳನ್ನು ಬಲಪಡಿಸುವತ್ತ ಗಮನಹರಿಸಿದೆ. ಸಾಮಾಜಿಕ ಮತ್ತು ಆರ್ಥಿಕ ಒಳಗೊಳ್ಳುವಿಕೆ ತಮ್ಮ ಸರ್ಕಾರದ ಆದ್ಯತೆಯಾಗಿದೆ ಮತ್ತು 50 ಕೋಟಿಗೂ ಹೆಚ್ಚು ಜನರು ಬ್ಯಾಂಕಿಂಗ್ ವ್ಯವಸ್ಥೆಗೆ ಸಂಪರ್ಕ ಹೊಂದಿದ್ದಾರೆ ಎಂದು ತಿಳಿಸಿದರು.

ಉದ್ಘಾಟಕರಾಗಿ ಅಲ್ಲ, ಪೂಜಾರಿಯಾಗಿ ಆಗಮಿಸಿ UAE ಮಂದಿರ ಲೋಕಾರ್ಪಣೆ, ಮೋದಿ ಪೂಜೆಗೆ ಸ್ವಾಮೀಜಿ ಮೆಚ್ಚುಗೆ!


ಇದೇ ವೇಳೆ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅವರನ್ನು ಶ್ಲಾಘಿಸಿದ ಮೋದಿ ದುಬೈ ಜಾಗತಿಕ ಆರ್ಥಿಕತೆ, ವಾಣಿಜ್ಯ ಮತ್ತು ತಂತ್ರಜ್ಞಾನದ ಕೇಂದ್ರಬಿಂದುವಾಗುತ್ತಿದೆ. ಜಾಯೆದ್ ಅವರು ದೂರದೃಷ್ಟಿ ಮತ್ತು ಸಂಕಲ್ಪ ಹೊಂದಿರುವ ನಾಯಕ ಎಂದರು.  ಭವಿಷ್ಯದ ಸರ್ಕಾರಗಳನ್ನು ರೂಪಿಸುವುದು ವಿಷಯದ ಮೇರೆಗೆ ವಿಶ್ವ ಆಡಳಿತ ಶೃಂಗಸಭೆ ನಡೆಯುತ್ತಿದ್ದು ಜಗತ್ತಿನ ವಿವಿಧ ಸರ್ಕಾರಗಳು, ಅಂತರಾಷ್ಟ್ರೀಯ ಸಂಸ್ಥೆಗಳು, ಚಿಂತನಶೀಲ ನಾಯಕರು ಮತ್ತು ಖಾಸಗಿ ವಲಯದ ನಾಯಕರು ಇದರಲ್ಲಿ ಭಾಗವಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮದ್ಯಪ್ರಿಯರಿಗೆ ಶಾಕ್.. ಮಧ್ಯಾಹ್ನ 2 ರಿಂದ 5 ರವರೆಗೆ ಮದ್ಯ ಮಾರಾಟ ಬಂದ್: ಏನಿದು ಥಾಯ್‌ ವಿಚಿತ್ರ ನಿಯಮ!
ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ