ನಾಪತ್ತೆಯಾದ ಬಾಂಗ್ಲಾದೇಶದ ಸಂಸದ ಕೋಲ್ಕತಾದಲ್ಲಿ ಶವವಾಗಿ ಪತ್ತೆ: ಕೊಲೆ ಎಂದ ಬಾಂಗ್ಲಾ ಗೃಹ ಸಚಿವ

Published : May 22, 2024, 03:45 PM IST
ನಾಪತ್ತೆಯಾದ ಬಾಂಗ್ಲಾದೇಶದ ಸಂಸದ ಕೋಲ್ಕತಾದಲ್ಲಿ ಶವವಾಗಿ ಪತ್ತೆ: ಕೊಲೆ ಎಂದ ಬಾಂಗ್ಲಾ ಗೃಹ ಸಚಿವ

ಸಾರಾಂಶ

ಕಳೆದ 9 ದಿನಗಳಿಂದ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಹಿರಿಯ ಸಂಸದ ಅನ್ವರುಲ್ ಅಜಿಮ್ ಅನರ್  ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆಯಾಗಿರುವ ಅನುಮಾನ ವ್ಯಕ್ತವಾಗುತ್ತಿದೆ. 

ಕೋಲ್ಕತಾ: ಕಳೆದ 9 ದಿನಗಳಿಂದ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಹಿರಿಯ ಸಂಸದ ಅನ್ವರುಲ್ ಅಜಿಮ್ ಅನರ್  ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆಯಾಗಿರುವ ಅನುಮಾನ ವ್ಯಕ್ತವಾಗುತ್ತಿದೆ. ಫ್ಲಾಟ್‌ವೊಂದರಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಬಾಂಗ್ಲಾದೇಶದ ಅವಾಮಿ ಲೀಗ್‌ನ ಸಂಸದ ಮೇ 12ರಂದು ಭಾರತದ ಕೋಲ್ಕತ್ತಾಕ್ಕೆ ಆಗಮಿಸಿದ್ದರು. ಅಲ್ಲಿ ಸ್ನೇಹಿತ ಗೋಪಾಲ್ ಬಿಸ್ವಾಸ್ ನಿವಾಸದಲ್ಲಿ ವಾಸವಿದ್ದರು. ಇತ್ತ ಅನ್ವರುಲ್ ನಾಪತ್ತೆಯಾದ ಬಗ್ಗೆ ಕೇವಲ 2 ದಿನದ ಹಿಂದಷ್ಟೇ ಬಿಸ್ವಾಸ್ ಕೋಲ್ಕತ್ತಾ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಬಾಂಗ್ಲಾದೇಶದ ಮಾಧ್ಯಮಗಳ ಪ್ರಕಾರ, ಅಲ್ಲಿನ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಹೇಳುವಂತೆ, ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ನಮಗೆ ಬಂದಿರುವ ಮಾಹಿತಿ ಪ್ರಕಾರ, ಸಂಸದ ಅನ್ವರುಲ್ ಅವರನ್ನು ಹತ್ಯೆ ಮಾಡಿದವರು ಎಲ್ಲರೂ ಬಾಂಗ್ಲಾದೇಶಿಯರೇ ಆಗಿದ್ದಾರೆ.  ಇದೊಂದು ಯೋಜಿತ ಕೊಲೆ. ಪ್ರಸ್ತುತ ಸ್ಥಿತಿಯಲ್ಲಿ ಹೆಚ್ಚಿನ ಮಾಹಿತಿ ನೀಡಲಾಗದು. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಸರ್ಕಾರವು ಭಾರತ ಸರ್ಕಾರದೊಂದಿಗೆ ಮಾತುಕತೆ ನಡೆಸಿದೆ. 

ಮೊದಲ ಬಾರಿಗೆ ಸಿಎಎ ಅಡಿ 14 ವಿದೇಶಿಗರಿಗೆ ಭಾರತ ಪೌರತ್ವ!

ವರದಿಗಳ ಪ್ರಕಾರ ಬಾಂಗ್ಲಾದೇಶದ ಸಂಸದ ಅನ್ವರುಲ್  ವೈದ್ಯಕೀಯ ಚಿಕಿತ್ಸೆಗಾಗಿ ಮೇ 12ರಂದು ಭಾರತಕ್ಕೆ ಆಗಮಿಸಿದ್ದರು. ಆದರೆ ಆಗಮಿಸಿದ ಎರಡೇ ದಿನಕ್ಕೆ ಅವರು ನಾಪತ್ತೆಯಾಗಿದ್ದರು.  ಇದಾದ ನಂತರ ಕೋಲ್ಕತ್ತಾ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದರು.  ಮೇ 13ರಂದು ಅವರು ಕೊನೆಯದಾಗಿ ಸ್ನೇಹಿತರ ಜೊತೆ ಬಿಧನ್‌ನಗರದ ಮನೆಯಲ್ಲಿ ಕಾಣಿಸಿಕೊಂಡಿದ್ದರು.  ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಧನ್‌ನಗರದಲ್ಲಿ ವಾಸವಾಗಿರುವ  ಸಂಸದರ ಕುಟುಂಬ ಸ್ನೇಹಿತರೊಬ್ಬರು ಪ್ರತಿಕ್ರಿಯಿಸಿದ್ದು, ಸಂಸದ ಅನ್ವರುಲ್ ದೆಹಲಿಗೆ ಹೋಗುವುದಾಗಿ ಹೇಳಿದ್ದರು. ಆದರೆ ಮೇ 13ರಿಂದ ಅವರು ನೋಡುವುದಕ್ಕೆ ಸಿಕ್ಕಿರಲಿಲ್ಲ ಎಂದು ಹೇಳಿದ್ದಾರೆ. 

ವಿವಾದಿತ ಸಿಎಎ ಕಾಯ್ದೆ ಕೊನೆಗೂ ಜಾರಿ: 14 ವಿದೇಶಿಗರಿಗೆ ಭಾರತ ಪೌರತ್ವ

ಅನ್ವರುಲ್ ಅವರು ಬಾಂಗ್ಲಾದೇಶದಲ್ಲಿ ಅಧಿಕಾರದಲ್ಲಿರುವ ಶೇಕ್ ಹಸೀನಾ ಅವರ  ಬಾಂಗ್ಲಾದೇಶ್ ಅವಾಮಿ ಲೀಗ್‌ನ ಸದಸ್ಯರಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ
ಅಮೆರಿಕಾದ ಬಳಿಕ ಈಗ ಮೆಕ್ಸಿಕೋದಿಂದಲೂ ಭಾರತದ ಮೇಲೆ ಶೇ.50 ಸುಂಕ: ಜನವರಿ 1ರಿಂದಲೇ ಹೊಸ ತೆರಿಗೆ ಜಾರಿ