ಕೊರೋನಾ ವಾರಿಯರ್ಸ್‌ಗಳಿಗೆ ಸಿಂಗಾಪುರ ಎಂಟಿಆರ್‌ ಊಟ!

Published : May 13, 2020, 07:31 AM ISTUpdated : May 16, 2020, 11:42 AM IST
ಕೊರೋನಾ ವಾರಿಯರ್ಸ್‌ಗಳಿಗೆ ಸಿಂಗಾಪುರ ಎಂಟಿಆರ್‌ ಊಟ!

ಸಾರಾಂಶ

ಕೊರೋನಾ ವಾರಿಯ​ರ್‍ಸ್ಗಳಿಗೆ ಸಿಂಗಾಪುರ ಎಂಟಿಆರ್‌ ಊಟ| ಸ್ಪತ್ರೆಗಳಿಗೆ ಬಿಸಿಬಿಸಿ ಕಾಫಿ, ವಡಾ ಸರಬರಾಜು|  ಕನ್ನಡಿಗ ರಾಘವೇಂದ್ರ ಶಾಸ್ತ್ರಿ ನೇತೃತ್ವ

ಸಿಂಗಾಪುರಮೇ.13): ಕೊರೋನಾ ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಡುತ್ತಿರುವ ಕೊರೋನಾ ವಾರಿಯ​ರ್‍ಸ್ಗಳಿಗೆ ಸಿಂಗಾಪುರದಲ್ಲಿರುವ ಪ್ರಸಿದ್ಧ ಸಸ್ಯಾಹಾರಿ ರೆಸ್ಟೋರೆಂಟ್‌ ಮಾವಳ್ಳಿ ಟಿಫಿನ್‌ ರೂಂ (ಎಂಟಿಆರ್‌) ಬಿಸಿ ಬಿಸಿ ತಿನಿಸು, ಪಾನೀಯ ಸರಬರಾಜು ಮಾಡುವ ಮೂಲಕ ಗಮನ ಸೆಳೆದಿದೆ. ವಡಾ, ಕಾಫಿ, ಮಸಾಲ ಚಹಾ ಮುಂತಾದವನ್ನು ಈ ರೆಸ್ಟೋರೆಂಟ್‌ ಪೂರೈಕೆ ಮಾಡುತ್ತಿದೆ.

ರೆಸ್ಟೋರೆಂಟ್‌ನ ಕಾರ್ಯನಿರ್ವಹಣಾ ನಿರ್ದೇಶಕ ರಾಘವೇಂದ್ರ ಶಾಸ್ತ್ರಿ ಹಾಗೂ ಅವರ ಸಿಬ್ಬಂದಿ ಹಣ್ಣುಗಳನ್ನು ಕೂಡ ಪ್ಯಾಕ್‌ ಮಾಡಿ ಆಸ್ಪತ್ರೆಗಳಿಗೆ ಸರಬರಾಜು ಮಾಡುತ್ತಿದ್ದಾರೆ.

ಎಂಟಿಆರ್‌ನಿಂದ ಪ್ಯಾಕೇಜ್ಡ್‌ ಗೊಜ್ಜು ಮಸಾಲ ಮಾರುಕಟ್ಟೆಗೆ

‘ಬಿಸ್ಕೆಟ್‌, ಸಿಹಿ ತಿನಿಸುಗಳು ಆಸ್ಪತ್ರೆಯಲ್ಲಿರುವ ಸಿಬ್ಬಂದಿಗೆ ಸುಲಭವಾಗಿ ಸಿಗುತ್ತವೆ. ಆದರೆ ಕಾಫಿ ಹಾಗೂ ಬಿಸಿ ತಿನಿಸು ಸಿಗುವುದಿಲ್ಲ. ಹೀಗಾಗಿ ಅವನ್ನು ಸರಬರಾಜು ಮಾಡುತ್ತಿದ್ದೇವೆ’ ಎಂದು ಬೆಂಗಳೂರು ಮೂಲದವರಾಗಿರುವ ಶಾಸ್ತ್ರಿ ತಿಳಿಸಿದ್ದಾರೆ. ಅವರು ಕಳೆದ ಐದು ವರ್ಷಗಳಿಂದ ಸಿಂಗಾಪುರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಎಂಟಿಆರ್‌ ಎಂದೇ ಹೆಸರುವಾಸಿಯಾಗಿರುವ ಮಾವಳ್ಳಿ ಟಿಫಿನ್‌ ರೂಂ ಬೆಂಗಳೂರು ಮೂಲದ ರೆಸ್ಟೋರೆಂಟ್‌ ಆಗಿದೆ.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

PUBG ಗೇಮ್​ನಿಂದ 6ನೇ ಮಗುವಿನತ್ತ ಪಯಣ: ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಕೆ ಮತ್ತೊಮ್ಮೆ ಗರ್ಭಿಣಿ!
ಭಾರಿ ಸದ್ದು ಮಾಡ್ತಿದೆ ಪುಟಿನ್​ ತಂದ ಸೂಟ್​ಕೇಟ್: ಅದರ ಹಿಂದಿದೆ ಊಹೆಗೆ ನಿಲುಕದ ವಿಚಿತ್ರ ಸ್ಟೋರಿ! ಏನಿದೆ ಅದರಲ್ಲಿ?