
ಕರಾಚಿ(ಮೇ.24): ಪಾಕಿಸ್ತಾನದ ಕರಾಚಿಯಲ್ಲಿ ಕಳೆದ ಶುಕ್ರವಾರ ನಡೆದ ವಿಮಾನ ದುರ್ಘಟನೆಯಲ್ಲಿ ಒಂಬತ್ತು ಮಕ್ಕಳು ಸೇರಿ ಒಟ್ಟು 97 ಮಂದಿ ಸಾವನ್ನಪ್ಪಿದ್ದಾರೆ. 8 ಸಿಬ್ಬಂದಿ ಸೇರಿ ಒಟ್ಟು 107 ಮಂದಿ ಪ್ರಯಾಣಿಸುತ್ತಿದ್ದ ಪಿಐಎ ವಿಮಾನವು ತಾಂತ್ರಿಕ ದೋಷದಿಂದಾಗಿ ಪತನಗೊಂಡಿತ್ತು.
ಆದರೆ ಪವಾಡ ಸದೃಶ ರೀತಿಯಲ್ಲಿ ವಿಮಾನದಲ್ಲಿದ್ದ ಇಬ್ಬರು ಬಚಾವ್ ಆಗಿದ್ದಾರೆ. ಘಟನೆಯಿಂದ 25 ಮನೆಗಳಿಗೆ ಹಾನಿಯಾಗಿದ್ದು, ದುರಸ್ಥಿ ಕಾರ್ಯ ನಡೆಯುತ್ತಿದೆ. ಮನೆ ಮಂದಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.
ಕರಾಚಿ ವಿಮಾನ ದುರಂತ ನೋಡಿ ನಕ್ಕ ಭಾರತೀಯರನ್ನು ಸ್ಯಾಡಿಸ್ಟ್ ಎಂದ ಪಾಕ್ ನೆಟ್ಟಿಗರು
ಶುಕ್ರವಾರ ಬಹಳಷ್ಟು ಪುರುಷರು ನಮಾಜ್ಗೆ ತೆರಳಿದ್ದ ಕಾರಣ ಮನೆಗಳಲ್ಲಿ ಹೆಚ್ಚಿನ ಜನ ಇರಲಿಲ್ಲ. ಇಲ್ಲದೇ ಹೋದಲ್ಲಿ ವಿಮಾನ ಪತನಕ್ಕೆ ಇನ್ನಷ್ಟು ಜನ ಬಲಿಯಾಗುವ ಅಪಾಯ ಇರುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ನಡುವೆ 2 ತಿಂಗಳ ಹಿಂದಷ್ಟೆ ವಿಮಾನವನ್ನು ತಪಾಸಣೆ ಮಾಡಲಾಗಿತ್ತು. ಗುರುವಾರವಷ್ಟೇ ಅದು ಮಸ್ಕತ್ನಿಂದ ಲಾಹೋರ್ಗೆ ಯಾವುದೇ ತೊಂದರೆ ಇಲ್ಲದೆ ಸಂಚಾರ ನಡೆಸಿತ್ತು ಎಂದು ಪಾಕ್ ವಿಮಾನಯಾನ ಸಚಿವಾಲಯ ಮಾಹಿತಿ ಕೊಟ್ಟಿದೆ.
ಮಂಗಳೂರು ದುರಂತ ರೀತಿಯಲ್ಲಿ ಪಾಕಿಸ್ತಾನದಲ್ಲಿ ವಿಮಾನ ಪತನ; 107 ಮಂದಿ ಸಜೀವ ದಹನ?
ಮತ್ತೊಂದು ಅಚ್ಚರಿಯ ವಿಷಯವೆಂದರೆ ಘಟನೆಯಲ್ಲಿ ಪಾರಾದ ಬ್ಯಾಂಕ್ ಆಫ್ ಪಂಜಾಬ್ನ ಸಿಇಒ ಜಾಫರ್ ಮಸೂದ್ ಅವರ ಪೂರ್ವಜರು ಉತ್ತರ ಪ್ರದೇಶ ಮೂಲದವರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ