
ಕಠ್ಮಂಡು(ಆ.03): ಭಾರತದ ಮೂರು ಪ್ರದೇಶಗಳನ್ನು ಸೇರಿಸಿ ಹೊಸದಾಗಿ ತಯಾರಿಸಿರುವ ನವೀಕೃತ ನಕ್ಷೆಯನ್ನು, ಭಾರತ ಸೇರಿದಂತೆ ವಿಶ್ವಸಂಸ್ಥೆ ಹಾಗೂ ಅಂತಾರಾಷ್ಟ್ರೀಯ ಸಮುದಾಯಕ್ಕೆ ಕಳುಹಿಸುವುದಾಗಿ ನೇಪಾಳ ಹೇಳಿದೆ.
ವಿವಾದಾತ್ಮಕ ನವೀಕೃತ ನಕ್ಷೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಭೂ ನಿರ್ವಹಣಾ ಖಾತೆ ಸಚಿವೆ ಪದ್ಮಾ ಆರ್ಯಾಳ್ ಅವರು, ಲಿಂಪಿಯಧುರಾ, ಲಿಪುಲೇಖ್ ಮತ್ತು ಕಾಲಾಪಾನಿ ಒಳಗೊಂಡಿರುವ ನವೀಕೃತ ನಕ್ಷೆಯನ್ನು ಆಗಸ್ಟ್ ಮಧ್ಯದಲ್ಲಿ ವಿಶ್ವಸಂಸ್ಥೆ, ಭಾರತ, ಗೂಗಲ್ ಮತ್ತು ಅಂತಾರಾಷ್ಟ್ರೀಯ ಸಮುದಾಯಕ್ಕೆ ಕಳುಹಿಸಿಕೊಡುತ್ತೇವೆ.
ಈ ಎಲ್ಲಾ ಪ್ರಕ್ರಿಯೆಯನ್ನೂ ಈ ತಿಂಗಳಾಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕೆ.ಪಿ ಶರ್ಮಾ ಓಲಿ ನೇತೃತ್ವದ ಸರ್ಕಾರ ನವೀಕೃತ ನಕ್ಷೆಗೆ ಸಂಸತ್ತಿನ ಒಪ್ಪಿಗೆ ಪಡೆದುಕೊಂಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ