ರಾಮನ ಕುರಿತ ಓಲಿ ಹೇಳಿಕೆಗೆ ನೇಪಾಳದಲ್ಲೇ ತೀವ್ರ ಟೀಕೆ!

Published : Jul 15, 2020, 01:09 PM IST
ರಾಮನ ಕುರಿತ ಓಲಿ ಹೇಳಿಕೆಗೆ ನೇಪಾಳದಲ್ಲೇ ತೀವ್ರ ಟೀಕೆ!

ಸಾರಾಂಶ

ರಾಮನ ಕುರಿತ ಓಲಿ ಹೇಳಿಕೆಗೆ ನೇಪಾಳದಲ್ಲೇ ತೀವ್ರ ಟೀಕೆ| ಶ್ರೀರಾಮ ಜನ್ಮಸ್ಥಳದ ಕುರಿತ ಓಲಿ ಹೇಳಿಕೆಯು ಎಲ್ಲ ರೀತಿಯ ಮಿತಿಗಳನ್ನು ಉಲ್ಲಂಘಿಸಿದೆ | ನೇಪಾಳ ಮಾಜಿ ಪ್ರಧಾನಿ ಬಾಬುರಾಮ್‌ ಭಟ್ಟಾರಾಯ್‌ ಕಿಡಿ

ಕಾಠ್ಮಂಡು(ಜು.15): ಶ್ರೀರಾಮ ಭಾರತೀಯನಲ್ಲ. ಆತ ವಾಸ್ತವವಾಗಿ ನೇಪಾಳ ಮೂಲದವ ಎಂಬ ನೇಪಾಳ ಪ್ರಧಾನಿ ಕೆ. ಪಿ ಶರ್ಮಾ ಓಲಿ ವಿವಾದಾತ್ಮಕ ಹೇಳಿಕೆಯು ನೇಪಾಳದಲ್ಲೇ ತೀವ್ರ ಟೀಕೆ ಮತ್ತು ವಿರೋಧಗಳಿಗೆ ತುತ್ತಾಗಿದೆ.

ಶ್ರೀರಾಮ ಜನ್ಮಸ್ಥಳದ ಕುರಿತ ಓಲಿ ಹೇಳಿಕೆಯು ಎಲ್ಲ ರೀತಿಯ ಮಿತಿಗಳನ್ನು ಉಲ್ಲಂಘಿಸಿದೆ ಎಂದು ನೇಪಾಳ ಮಾಜಿ ಪ್ರಧಾನಿ ಬಾಬುರಾಮ್‌ ಭಟ್ಟಾರಾಯ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮಂಗಳವಾರ ಟ್ವೀಟ್‌ ಮಾಡಿದ ಬಾಬುರಾಮ್‌, ‘ಪ್ರಧಾನಿ ಓಲಿ ಅವರಿಂದ ಕಲಿಯುಗದ ಹೊಸ ರಾಮಾಯಣ ಕೇಳಲು ಕಾತರನಾಗಿದ್ದೇನೆ’ ಎಂದು ಪ್ರಧಾನಿಯ ಕಾಲೆಳೆದಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ನೇಪಾಳದ ಕಮ್ಯುನಿಸ್ಟ್‌ ಪಕ್ಷದ ಹಿರಿಯ ಮುಖಂಡ ಬಾಮ್‌ ದೇವ ಗೌತಮ್‌, ‘ನೇಪಾಳ ಮತ್ತು ಭಾರತದಲ್ಲಿ ಶ್ರೀರಾಮನ ಭಕ್ತರು ಇದ್ದಾರೆ. ಇಂಥ ಹೇಳಿಕೆಗಳಿಂದ ಜನ ಸಾಮಾನ್ಯರ ಧಾರ್ಮಿಕ ನಂಬಿಕೆ ಹಾಗೂ ಭಾವನೆಗಳಿಗೆ ಯಾರೊಬ್ಬರು ಧಕ್ಕೆ ಮಾಡುವುದು ಸರಿಯಲ್ಲ. ಅಲ್ಲದೆ, ಯಾವುದೇ ಸಾಕ್ಷ್ಯಾಧಾರ ಹಾಗೂ ದಾಖಲೆಗಳಿಲ್ಲದೆ ನಿಜವಾದ ಅಯೋಧ್ಯೆ ಇರುವುದು ಭಾರತದಲ್ಲಲ್ಲ, ನೇಪಾಳದಲ್ಲಿ ಎಂಬ ಹೇಳಿಕೆಯನ್ನು ಹಿಂಪಡೆಯಬೇಕು. ಜೊತೆಗೆ, ಈ ಸಂಬಂಧ ಪ್ರಧಾನಿ ಕೆ.ಪಿ ಶರ್ಮಾ ಓಳಿ ಅವರು ಕ್ಷಮಾಪಣೆ ಕೋರಬೇಕು’ ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ಓಲಿ ಹೇಳಿಕೆಗೆ ಭಾರತದಲ್ಲೂ ವಿಶ್ವಹಿಂದೂ ಪರಿಷತ್‌ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಾರಿ ಸದ್ದು ಮಾಡ್ತಿದೆ ಪುಟಿನ್​ ತಂದ ಸೂಟ್​ಕೇಟ್: ಅದರ ಹಿಂದಿದೆ ಊಹೆಗೆ ನಿಲುಕದ ವಿಚಿತ್ರ ಸ್ಟೋರಿ! ಏನಿದೆ ಅದರಲ್ಲಿ?
ಪಾಕಿಸ್ತಾನ ಪುಸ್ತಕ ಮೇಳ: ಸೇಲ್ ಆದ ಪುಸ್ತಕ ಬರೀ 35, ಖಾಲಿಯಾದ ಬಿರಿಯಾನಿ, ಶವರ್ಮಾ ಎಷ್ಟು ಕೇಳಿದ್ರೆ ಗಾಬರಿ ಆಗ್ತೀರಿ