
ಜೆರುಸಲೇಂ: ಸೆಪ್ಟೆಂಬರ್ನಲ್ಲಿ ಹಿಜ್ಬುಲ್ಲಾ ಉಗ್ರರ ಮೇಲೆ ನಡೆದ ಪೇಜರ್ ಹಾಗೂ ವಾಕಿಟಾಕಿ ದಾಳಿಯಲ್ಲಿ ಇಸ್ರೇಲ್ ಪಾತ್ರವಿರುವ ಬಗ್ಗೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮೊದಲ ಬಾರಿಗೆ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.
ಭಾನುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಾತನಾಡಿದ ನೆತನ್ಯಾಹು, ‘ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳ ವಿರೋಧದ ನಡುವೆಯೂ ಪೇಜರ್ ಸ್ಫೋಟ ಹಾಗೂ ಹಿಜ್ಬುಲ್ಲಾ ಮುಖ್ಯಸ್ಥನಾಗಿದ್ದ ಹಸನ್ ನಸ್ರಲ್ಲಾನನ್ನು ಹತ್ಯೆಗೈದೆವು’ ಎಂದು ಹೇಳಿರುವುದಾಗಿ ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ.
ಒಂದೇ ದಿನದ ಅಂತರದಲ್ಲಿ ಲೆಬನಾನ್ ಹಾಗೂ ಸಿರಿಯಾದ ಕೆಲ ಭಾಗಗಳಲ್ಲಿದ್ದ ಹಿಜ್ಬುಲ್ಲಾ ಉಗ್ರರು ಸಂವಹನೆಗಾಗಿ ಬಳಸುತ್ತಿದ್ದ ಸಾವಿರಾರು ಪೇಜರ್ಗಳು ಹಾಗೂ ವಾಕಿಟಾಕಿಗಳು ಸ್ಫೋಟಗೊಂಡು 39 ಜನರ ಸಾವಿಗೆ ಕಾರಣವಾಗಿತ್ತು. ಸಾವಿರಾರು ಹಿಜ್ಬುಲ್ಲಾ ಉಗ್ರರು ಗಾಯಗೊಂಡಿದ್ದಸರು. ಈ ಸ್ಫೋಟದ ಹಿಂದೆ ಇಸ್ರೇಲ್ ಕೈವಾಡವಿದೆ ಎಂದು ಶಂಕಿಸಲಾಗಿತ್ತಾದರೂ, ಈವರೆಗೆ ಇಸ್ರೇಲ್ ಇದನ್ನು ಬಹಿರಂಗವಾಗಿ ಒಪ್ಪಿಕೊಂಡಿರಲಿಲ್ಲ.
ರಕ್ಷಣಾ ಸಚಿವ ಯೋ ಗ್ಯಾಲೆಂಟ್ ಅವರ ಪದಚ್ಯುತಿಯ ಬೆನ್ನಲ್ಲೇ ಹೀಗೆ ಹೇಳುವ ಮೂಲಕ ದಾಳಿಯ ಶ್ರೇಯವನ್ನು ನೆತನ್ಯಾಹು ತಮ್ಮದಾಗಿಸಿಕೊಳ್ಳಲು ಬಯಸುತ್ತಿದ್ದಾರೆಂದು ವಿಶ್ಲೇಷಿಸಲಾಗುತ್ತಿದೆ.
ಇದನ್ನೂ ಓದಿ: ಉಕ್ರೇನ್ ಯುದ್ಧ ನಿಲ್ಲಿಸುವ ಬಗ್ಗೆ ಟ್ರಂಪ್- ಪುಟಿನ್ ಮಾತುಕತೆ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ