
ನವದೆಹಲಿ (ಅ.09): ನೊಬೆಲ್ ಪ್ರಶಸ್ತಿ ಕಮಿಟಿ ಪ್ರಸಕ್ತ ವರ್ಷದ ನೊಬೆಲ್ ಶಾಂತಿ ಪ್ರಶಸ್ತಿಯನ್ನು ವಿಶ್ವ ಸಂಸ್ಥೆಯ ಆಹಾರ ವಿಭಾಗದ ವಿಶ್ವ ಆಹಾರ ಯೋಜನೆಗೆ ನೀಡಿದೆ. ಇಡೀ ವಿಶ್ವದಲ್ಲಿ ಅತೀಯಾಗಿ ಕಾಡುತ್ತಿರುವ ಸಮಸ್ಯೆಗಳಲ್ಲಿ ಹಸಿವು ಒಂದು. ಸಂಕಷ್ಟದಲ್ಲಿದ್ದವರ ಹಸಿವು ನೀಗಿಸುವ ಕಾರ್ಯ ಮಾಡುತ್ತಿರುವ ವಿಶ್ವ ಆಹಾರ ಯೋಜನೆಗೆ( (WFP) ಇದೀಗ ಶಾಂತಿ ಪ್ರಶಸ್ತಿ ಲಭಿಸಿದೆ.
ಅಮೆರಿಕದ ಲೂಯಿಸ್ಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ, 8.08 ಕೋಟಿ ರು. ನಗದು ಬಹುಮಾನ
ಹಸಿವನ್ನು ಹೋಗಲಾಡಿಸಲು ವಿಶ್ವ ಆಹಾರ ಯೋಜನೆ ವಿಭಾಗ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಯುದ್ಧ ಪೀಡಿತ, ದಾಳಿಗೊಳಗಾದ ಪ್ರದೇಶಗಳಲ್ಲಿನ ಜನರ ಹಸಿವು ನೀಗಿಸುವ ಕೆಲಸ ಮಾಡೋ ಮೂಲಕ ಮತ್ತೆ ಶಾಂತಿ ಸ್ಥಾಪಿಸುವಲ್ಲಿ ವಿಶ್ವ ಆಹಾರ ಯೋಜನೆ ಅವಿರತ ಪ್ರಯತ್ನ ಮಾಡಿದೆ. WFP ಮಹತ್ ಕಾರ್ಯಕ್ಕೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಘೋಷಿಸಿದ್ದೇವೆ ಎಂದು ನೊಬೆಲ್ ಕಮಿಟಿ ಅಧ್ಯಕ್ಷ ಬೆರಿಟ್ ರೀಸ್ಆ್ಯಂಡರ್ಸನ್ ಹೇಳಿದ್ದಾರೆ.
ವಂಶವಾಹಿ ತಿದ್ದುವ ತಂತ್ರಜ್ಞಾನ ಶೋಧಿಸಿದ ಇಬ್ಬರಿಗೆ ನೊಬೆಲ್!.
ಹಸಿವು ನೀಗಿಸುವ WFP ಕಾರ್ಯಕ್ಕೆ ಮತ್ತಷ್ಟು ವೇಗ ತುಂಬಬೇಕಾದ ಅಗತ್ಯವಿದೆ. ಕೊರೋನಾ ವೈರಸ್, ಲಾಕ್ಡೌನ್ ಬಳಿಕ ಹಸಿವಿನಿಂದ ಸಾಯುವವರ ಸಂಖ್ಯೆ ಹೆಚ್ಚಾಗಿದೆ. ಆಹಾರಕ್ಕೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಹೀಗಾಗಿ WFP ಸಂಸ್ಥೆಯನ್ನು ಬಲಪಡಿಸುವ ಅಗತ್ಯವಿದೆ. ಸಂಸ್ಥೆಗೆ ಹಣಕಾಸು ನೆರವು ಸೇರಿದಂತೆ ಎಲ್ಲಾ ರೀತಿಯ ಸಹಕಾರ ನೀಡುವುದು ಇಂದಿನ ಪರಿಸ್ಥಿತಿಗೆ ಅಗತ್ಯವಾಗಿದೆ ಎಂದು ಆ್ಯಂಡರ್ಸನ್ ಹೇಳಿದ್ದಾರೆ.
ಈ ಬಾರಿಯ ನೊಬೆಲ್ ಶಾಂತಿ ಪುರಸ್ಕಾರಕ್ಕೆ WFP ಸೇರಿದಂತೆ 107 ಸಂಘ ಸಂಸ್ಥೆಗಳು, 211 ವ್ಯಕ್ತಿಗಳ ಹೆಸರನ್ನು ನಾಮನಿರ್ದೇಶನ ಮಾಡಲಾಗಿತ್ತು. ಅಂತಿಮವಾಗಿ WFP ಶಾಂತಿ ಪ್ರಶಸ್ತಿ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ನೊಬೆಲ್ ಶಾಂತಿ ಪ್ರಶಸ್ತಿ 8 ಕೋಟಿ ರೂಪಾಯಿ ನಗದು ಹಾಗೂ ಚಿನ್ನ ಲೇಪಿತ ಪ್ರಶಸ್ತಿ ಫಲಕ ಒಳಗೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ