
ಢಾಕಾ[ನ.18]: ಭಾರತದ ಈರುಳ್ಳಿ ರಫ್ತು ನಿಷೇಧದ ಕ್ರಮದಿಂದ ನೆರೆಯ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಅಡುಗೆ ಕೋಣೆಯಲ್ಲೇ ಅಡುಗೆ ಮಾಡಲು ಈರುಳ್ಳಿ ಇಲ್ಲದ ದುಃಸ್ಥಿತಿ ಏರ್ಪಟ್ಟಿದೆ. ರಾಷ್ಟ್ರಾದ್ಯಂತ ಈ ಹಿಂದೆ 25 ರು. ಬೆಲೆಗೆ ಮಾರಾಟವಾಗುತ್ತಿದ್ದ ಈರುಳ್ಳಿ ದರವು ಇದೀಗ 220 ರು.ಗೆ ಜಿಗಿತ ಕಂಡು, ಜನ ಸಾಮಾನ್ಯರ ಕಣ್ಣಲ್ಲಿ ಕಣ್ಣೀರು ತರಿಸುತ್ತಿದೆ.
ಬಾಂಗ್ಲಾ ಪ್ರಧಾನಿಗೂ ತಟ್ತು ಈರುಳ್ಳಿ ಬಿಸಿ: ಅಡುಗೆಗೆ ಈರುಳ್ಳಿ ಬಳಸದಂತೆ ಸೂಚನೆ!
ಈರುಳ್ಳಿಯು ಇದೀಗ ಬಾಂಗ್ಲಾದೇಶದಲ್ಲಿ ರಾಜಕೀಯ ಅಲ್ಲೋಲ-ಕಲ್ಲೋಲ ಸೃಷ್ಟಿಸುವ ಭೀತಿಯೂ ಎದುರಾಗಿದ್ದು, ಟರ್ಕಿ, ಮಯನ್ಮಾರ್, ಚೀನಾ ಮತ್ತು ಈಜಿಪ್ಟ್ನಿಂದ ಈರುಳ್ಳಿಯನ್ನು ತುರ್ತಾಗಿ ಆಮದು ಮಾಡಿಕೊಳ್ಳಲು ಬಾಂಗ್ಲಾ ವಿಮಾನಗಳ ಮೊರೆ ಹೋಗಿದೆ.
ಕುಷ್ಟಗಿ: ಕುಸಿದ ಬೆಲೆ, ರೈತರ ಕಣ್ಣಲ್ಲಿ ಕಣ್ಣೀರು ತರಿಸುತ್ತಿರುವ ಈರುಳ್ಳಿ!
ಏತನ್ಮಧ್ಯೆ, ಈ ಬಗ್ಗೆ ಪ್ರತಿಕ್ರಿಯಿಸಿದ ಈ ಬಗ್ಗೆ ಮಾತನಾಡಿದ ಬಾಂಗ್ಲಾ ಪ್ರಧಾನಿಯ ಪತ್ರಿಕಾ ಉಪ ಕಾರ್ಯದರ್ಶಿ ಹಸನ್ ಜಾಹೀದ್ ತುಷಾರ್, ‘ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಮನೆಯಲ್ಲಿ ಈರುಳ್ಳಿ ಬಳಕೆಯನ್ನು ಬಂದ್ ಮಾಡಿದ್ದಾರೆ’ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ