
ಇಸ್ಲಾಮಾಬಾದ್ (ಮೇ.10): ಭಾರತದ ಆಪರೇಷನ್ ಸಿಂದೂರ್ಗೆ ಪ್ರತಿಯಾಗಿ ಪಾಕಿಸ್ತಾನ ಶನಿವಾರ ಭಾರತದ ವಿರುದ್ಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಹೇಳಿಕೆಯಲ್ಲಿ ತಿಳಿಸಿದೆ. "ಬನ್ಯಾನುನ್ ಮಾರ್ಸೂಸ್" ಅಂದರೆ ಕಾಂಕ್ರೀಟ್ ರಚನೆ ಎಂಬ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಭಾರತದಾದ್ಯಂತ ಬಹು ಟಾರ್ಗೆಟ್ಗಳನ್ನು ಧ್ವಂಸ ಮಾಡುವಲ್ಲಿ ತೊಡಗಿಸಿಕೊಂಡಿದೆ ಎಂದು ಐಎಸ್ಪಿಆರ್ ಹೇಳಿಕೆ ತಿಳಿಸಿದೆ.
ಪಾಕಿಸ್ತಾನ ತನ್ನ ಹೇಳಿಕೆಯಲ್ಲಿ, ಕಾಶ್ಮೀರದಲ್ಲಿರುವ ಉಧಂಪುರದಲ್ಲಿರುವ ವಾಯುನೆಲೆಯನ್ನು ನಾಶಪಡಿಸಲಾಗಿದೆ ಎಂದು ಐಎಸ್ಪಿಆರ್ ಹೇಳಿದೆ, ಭಾರತದ ಪಂಜಾಬ್ ಪ್ರಾಂತ್ಯದ ಪಠಾಣ್ಕೋಟ್ ಜಿಲ್ಲೆಯ ವಾಯುನೆಲೆಯನ್ನೂ ಗುರಿಯಾಗಿಸಿಕೊಂಡು ನಾಶಪಡಿಸಲಾಗಿದೆ ಎಂದು ಹೇಳಿದ್ದರಾದರೂ, ಇದಕ್ಕೆ ಯಾವುದೇ ಸಾಕ್ಷ್ಯ ನೀಡಿಲ್ಲ. ಇದರ ನಡುವೆ ಇತರ ಸ್ಥಳಗಳ ಮೇಲೂ ದಾಳಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದೆ.
ಭಾರತದ ಬಿಯಾಸ್ ನಗರದಲ್ಲಿರುವ ಬ್ರಹ್ಮೋಸ್ ಕ್ಷಿಪಣಿ ಸಂಗ್ರಹಣಾ ಸೌಲಭ್ಯವು ಆರಂಭಿಕ ದಾಳಿಯಲ್ಲಿ ನಾಶವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿದೆ. ಪಾಕಿಸ್ತಾನದ ಮೂರು ವಾಯುನೆಲೆಗಳ ಮೇಲೆ ಭಾರತವು ಗಾಳಿಯಿಂದ ಮೇಲ್ಮೈಗೆ ಚಿಮ್ಮುವ ಕ್ಷಿಪಣಿಗಳನ್ನು ಉಡಾಯಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ ಎಂದು ಪಾಕಿಸ್ತಾನ ಸೇನೆಯ ವಕ್ತಾರರು ಶನಿವಾರ ಬೆಳಗಿನ ಜಾವ ತಿಳಿಸಿದ್ದಾರೆ.
ಈ ವಾರದ ಆರಂಭದಲ್ಲಿ, ಐಎಸ್ಪಿಆರ್ನ ಡಿಜಿ ನೀಡಿರುವ ಮಾಹಿತಿಯ ಪ್ರಕಾರ ಪಾಕಿಸ್ತಾನದ ಭೂಪ್ರದೇಶದ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂದೂರ್ ದಾಳಿಯಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 57 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದರು ಮತ್ತು ನಂತರ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಮತ್ತು ಭಾರತೀಯ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ, ಇದು ಎರಡು ನೆರೆಹೊರೆಯವರ ನಡುವಿನ ವಾಸ್ತವಿಕ ಗಡಿಯಾಗಿದೆ.
ಭಾರತವು ತನ್ನ ಮೂರು ಸೇನಾ ನೆಲೆಗಳನ್ನು ಫೈಟರ್ ಜೆಟ್ಗಳಿಂದ ಹಾರಿಸಿದ ಕ್ಷಿಪಣಿಗಳಿಂದ ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿ ಪಾಕಿಸ್ತಾನ ಪ್ರತೀಕಾರದ ದಾಳಿಯನ್ನು ಪ್ರಾರಂಭಿಸಿದೆ ಎಂದು ಹೇಳಿದೆ. ಇದು ಎರಡು ಪರಮಾಣು ಶಸ್ತ್ರಸಜ್ಜಿತ ನೆರೆಹೊರೆಯವರ ನಡುವಿನ ಸಂಘರ್ಷದ ಪ್ರಮುಖ ಉಲ್ಬಣವಾಗಿದೆ.
"ಭಾರತವು ತನ್ನ ಭಾರೀ ಆಕ್ರಮಣದೊಂದಿಗೆ ಕ್ಷಿಪಣಿಗಳಿಂದ ದಾಳಿ ಮಾಡಿದೆ. ನೂರ್ ಖಾನ್ ನೆಲೆ, ಮುರಿಯದ್ ನೆಲೆ ಮತ್ತು ಶೋರ್ಕೋಟ್ ನೆಲೆಗಳನ್ನು ಗುರಿಯಾಗಿಸಲಾಗಿದೆ" ಎಂದು ಪಾಕಿಸ್ತಾನದ ಸೇನಾ ವಕ್ತಾರ ಅಹ್ಮದ್ ಷರೀಫ್ ಚೌಧರಿ ಶನಿವಾರ ಮುಂಜಾನೆ ರಾಜ್ಯ ದೂರದರ್ಶನ ಪ್ರಸಾರ ಮಾಡಿದ ನೇರ ಪ್ರಸಾರದಲ್ಲಿ ತಿಳಿಸಿದ್ದಾರೆ.
ಸ್ವಲ್ಪ ಸಮಯದ ನಂತರ, ಪಾಕಿಸ್ತಾನದ ಅಧಿಕಾರಿಗಳು ಭಾರತದ ವಿರುದ್ಧ ಪ್ರತಿದಾಳಿಯನ್ನು ಪ್ರಾರಂಭಿಸಿದ್ದಾರೆ ಎಂದು ದೃಢಪಡಿಸಿದ್ದಾರೆ. ಕುರಾನ್ನಿಂದ ಬಂದ ಈ ಪದಗುಚ್ಛದ ಅರ್ಥ 'ಸೀಸದ ಗೋಡೆ' ಎನ್ನುವುದಾಗಿದೆ.
ಪಠಾಣ್ಕೋಟ್ ಮಿಲಿಟರಿ ವಾಯುನೆಲೆ ಮತ್ತು ಭಾರತದ ಪಂಜಾಬ್ ರಾಜ್ಯದಲ್ಲಿರುವ ಬ್ರಹ್ಮೋಸ್ ಕ್ಷಿಪಣಿ ಸಂಗ್ರಹಣಾ ತಾಣ ಹಾಗೂ ಭಾರತದ ಆಡಳಿತದಲ್ಲಿರುವ ಕಾಶ್ಮೀರದಲ್ಲಿರುವ ಉಧಂಪುರ ವಾಯುಪಡೆ ನೆಲೆ ತಮ್ಮ ಗುರಿಗಳಾಗಿದ್ದವು ಎಂದು ಪಾಕಿಸ್ತಾನ ಹೇಳಿದೆ. ಎಲ್ಲಾ ಸ್ಥಳಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ವಿಮಾನ ವಿರೋಧಿ ಬಂದೂಕುಗಳಿಂದ ಸ್ಫೋಟಗಳು ಮತ್ತು ಶೆಲ್ ದಾಳಿಗಳು ಕೇಳಿಬಂದವು. ಭಾರತ-ಕಾಶ್ಮೀರ ನಗರವಾದ ಶ್ರೀನಗರದಲ್ಲಿಯೂ ಜೋರಾಗಿ ಸ್ಫೋಟಗಳು ಕೇಳಿಬಂದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ