ನೆರೆ ದೇಶಕ್ಕೆ ಪ್ರಜಾಪ್ರಭುತ್ವ ಪಾಠ ಮಾಡೋದ್‌ ಬಿಟ್ಟು ಉಗ್ರರ ಫ್ಯಾಕ್ಟರಿ ಮುಚ್ಚಿ: ಪಾಕ್‌ಗೆ ಎಚ್ಚರಿಕೆ

Published : Mar 26, 2024, 12:46 PM ISTUpdated : Mar 26, 2024, 01:11 PM IST
ನೆರೆ ದೇಶಕ್ಕೆ ಪ್ರಜಾಪ್ರಭುತ್ವ ಪಾಠ ಮಾಡೋದ್‌ ಬಿಟ್ಟು ಉಗ್ರರ ಫ್ಯಾಕ್ಟರಿ ಮುಚ್ಚಿ: ಪಾಕ್‌ಗೆ ಎಚ್ಚರಿಕೆ

ಸಾರಾಂಶ

ಭಯೋತ್ಪಾದನೆಯ ಅತಿದೊಡ್ಡ ಇತಿಹಾಸ ಹೊಂದಿರುವ ದೇಶವೊಂದು ನೆರೆಯ ದೇಶಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡುವುದನ್ನು ಬಿಟ್ಟು, ತನ್ನ ದೇಶದಲ್ಲಿನ ಉಗ್ರರ ಫ್ಯಾಕ್ಟರಿ ಮುಚ್ಚುವುದರ ಬಗ್ಗೆ ಆದ್ಯತೆ ನೀಡಬೇಕು ಎಂದು ಪಾಕಿಸ್ತಾನಕ್ಕೆ ಭಾರತ ತಪರಾಕಿ ಹಾಕಿದೆ.

ನವದೆಹಲಿ: ಭಯೋತ್ಪಾದನೆಯ ಅತಿದೊಡ್ಡ ಇತಿಹಾಸ ಹೊಂದಿರುವ ದೇಶವೊಂದು ನೆರೆಯ ದೇಶಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡುವುದನ್ನು ಬಿಟ್ಟು, ತನ್ನ ದೇಶದಲ್ಲಿನ ಉಗ್ರರ ಫ್ಯಾಕ್ಟರಿ ಮುಚ್ಚುವುದರ ಬಗ್ಗೆ ಆದ್ಯತೆ ನೀಡಬೇಕು ಎಂದು ಪಾಕಿಸ್ತಾನಕ್ಕೆ ಭಾರತ ತಪರಾಕಿ ಹಾಕಿದೆ.

ಜಿನೇವಾದಲ್ಲಿ ನಡೆಯುತ್ತಿರುವ ಅಂತರ್‌ ಸಂಸದೀಯ ಒಕ್ಕೂಟದ ಸಭೆಯಲ್ಲಿ ಕಾಶ್ಮೀರದಲ್ಲಿನ ಬೆಳವಣಿಗೆಗಳ ಕುರಿತು ಕಳವಳ ವ್ಯಕ್ತಪಡಿಸಿದ್ದ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ ಭಾರತದ ಪ್ರತಿನಿಧಿ ಹಾಗೂ +ರಾಜ್ಯಸಭೆ ಉಪಸಭಾಪತಿ ಹರಿವಂಶ್‌, ‘ಭಾರತ ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ. ನಮ್ಮ ಮಾದರಿಯನ್ನು ಇತರೆ ದೇಶಗಳು ಅನುಕರಿಸ ಬಯಸುತ್ತವೆ. ಆದರೆ ಪ್ರಜಾಪ್ರಭುತ್ವದ ವಿಷಯದಲ್ಲಿ ಅತ್ಯಂತ ಕರಾಳ ಹಿನ್ನೆಲೆ ಹೊಂದಿರುವ ದೇಶವೊಂದು ನಮಗೆ ಪ್ರಜಾಪ್ರಭುತ್ವದ ಪಾಠ ಮಾಡಲು ಬರುವುದು ಹಾಸ್ಯಾಸ್ಪದ. ಜೊತೆಗೆ ತನ್ನ ಅಸಂಬದ್ಧ ಆಪಾದನೆ ಮತ್ತು ಸುಳ್ಳಿನ ನಿರೂಪಣೆಗೆ ಇಂಥ ವೇದಿಕೆ ಬಳಸಿಕೊಳ್ಳುವುದು ವೇದಿಕೆ ಗೌರವವನ್ನು ಕಡಿಮೆ ಮಾಡುತ್ತದೆ’ ಎಂದು ಛೀಮಾರಿ ಹಾಕಿದ್ದಾರೆ.

‘ಜಮ್ಮು ಮತ್ತು ಕಾಶ್ಮೀರ, ಲಡಾಖ್‌ ಹಿಂದೆಯೂ ಭಾರತದ ಭಾಗವಾಗಿತ್ತು. ಮುಂದೆಯೂ ಆಗಿರಲಿದೆ. ಯಾವುದೇ ವಾಕ್ಚಾತುರ್ಯ, ಪ್ರಾಪಗೆಂಡಾ ಈ ವಾಸ್ತವ ಸಂಗತಿಯನ್ನು ಅಳಿಸಿಹಾಕಲಾಗದು. ಅದರ ಬದಲು ಕಾಶ್ಮೀರದಲ್ಲಿ ಭಯೋತ್ಪಾದನೆ ಕೃತ್ಯಗಳಿಗೆ ಪ್ರೋತ್ಸಾಹ ನೀಡಲು ತಾನು ಸ್ಥಾಪಿಸಿರುವ ಉಗ್ರರ ಕ್ಯಾಂಪ್‌ಗಳನ್ನು ಮುಚ್ಚುವುದು ಒಳಿತು’ ಎಂದು ನೆರೆಯ ದೇಶಕ್ಕೆ ತಪರಾಕಿ ಹಾಕಿದರು.

ಪಾಕಿಸ್ತಾನದ 2ನೇ ಅತೀದೊಡ್ಡ ನೇವಿ ಏರ್‌ಬೇಸ್‌ ಮೇಲೆ ಬಲೂಚಿಸ್ತಾನದ ಮಜೀದ್ ಬ್ರಿಗೇಡ್ ದಾಳಿ

ಇದೇ ವೇಳೆ ‘ಭಯೋತ್ಪಾದನೆ ವಿಷಯದಲ್ಲಿ ಪಾಕಿಸ್ತಾನದ ಸುದೀರ್ಘ ಇತಿಹಾಸದ ಬಗ್ಗೆ ವೇದಿಕೆಯ ಗಮನ ಸೆಳೆದ ಹರಿವಂಶ್‌, ಭಯೋತ್ಪಾದನೆಯ ಜಾಗತಿಕ ಮುಖವಾಗಿದ್ದ ಒಸಾಮಾ ಬಿನ್‌ ಲಾಡೆನ್‌ ಪಾಕಿಸ್ತಾನದಲ್ಲೇ ಸಿಕ್ಕಿಬಿದ್ದಿದ್ದ ಎಂಬುದನ್ನು ಯಾರೂ ಮರೆತಿಲ್ಲ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಉಗ್ರರೆಂದು ಘೋಷಿಸಿರುವ ಅತಿ ಹೆಚ್ಚು ಜನರಿಗೆ ಪಾಕಿಸ್ತಾನವೇ ಆಶ್ರಯ ನೀಡಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಹೀಗಾಗಿ ಇನ್ನು ಮುಂದಾದರೂ, ತನ್ನ ದೇಶದ ಜನತೆ ಒಳಿತನ್ನು ಬಯಸಿಯಾದರೂ ಪಾಕಿಸ್ತಾನ ಉತ್ತಮ ಪಾಠ ಕಲಿಯಲಿದೆ ಎಂಬುದು ನಮ್ಮ ಆಶಾಭಾವನೆ’ ಎಂದು ಹೇಳಿದರು.

ಕೈಗಾರಿಕೆ ರೀತಿ ಉಗ್ರವಾದಕ್ಕೆ ಪಾಕ್‌ನಿಂದ ಪ್ರೋತ್ಸಾಹ ಇನ್ನು ಇದನ್ನು ಸಹಿಸೋಲ್ಲ: ಜೈಶಂಕರ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮದ್ಯಪ್ರಿಯರಿಗೆ ಶಾಕ್.. ಮಧ್ಯಾಹ್ನ 2 ರಿಂದ 5 ರವರೆಗೆ ಮದ್ಯ ಮಾರಾಟ ಬಂದ್: ಏನಿದು ಥಾಯ್‌ ವಿಚಿತ್ರ ನಿಯಮ!
ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ